<p><strong>ಬೆಳಗಾವಿ: </strong>‘ಕರಾಟೆ ಕೇವಲ ಕ್ರೀಡೆಯಲ್ಲ; ಅದು ಆತ್ಮರಕ್ಷಣೆಯ ಒಂದು ತಂತ್ರ. ಪ್ರತಿಯೊಬ್ಬರೂ ಕಲಿಯುವುದು ಒಳಿತು. ಅದರಲ್ಲೂ ಹೆಣ್ಣು ಮಕ್ಕಳು ನಿರ್ಭೀತಿಯಿಂದ ಓಡಾಡಲು ಈ ಕಲೆ ಸಹಕಾರಿಯಾಗಿದೆ’ ಎಂದು ನಾಗರೂರು ರುದ್ರಾಕ್ಷಿಮಠದ ಡಾ.ಅಲ್ಲಮಪ್ರಭು ಸ್ವಾಮೀಜಿ ಹೇಳಿದರು.</p>.<p>ಇಲ್ಲಿನ ಎಸ್ಜಿಬಿಐಟಿಯಲ್ಲಿ ಆನಂದ ಅಕಾಡೆಮಿಯಿಂದ ಭಾನುವಾರ ಆಯೋಜಿಸಿದ್ದ ‘ಕರಾಟೆ ಪಟುಗಳಿಗೆ ಬೆಲ್ಟ್ ಹಾಗೂ ಅಭಿನಂದನಾ ಪತ್ರ ವಿತರಣೆ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಕರಾಟೆ ಕಲಿಯುವುದರಿಂದ ದೇಹವು ವ್ಯಾಯಾಮಕ್ಕೊಳಪಡುತ್ತದೆ. ಶಾರೀರಿಕ ಹಾಗೂ ಮಾನಸಿಕ ಆರೋಗ್ಯ ವೃದ್ಧಿಯಾಗುತ್ತದೆ’ ಎಂದರು.</p>.<p>ಶಿಕ್ಷಣ ಇಲಾಖೆ ನಗರ ವಲಯ ಕ್ಷೇತ್ರ ಸಮನ್ವಯ ಅಧಿಕಾರಿ ಡಾ.ರಾಜಶೇಖರ ಚಳಗೇರಿ ಮಾತನಾಡಿ, ‘ಬಾಲ್ಯದಿಂದಲೇ ವಿದ್ಯಾರ್ಥಿಗಳಿಗೆ ಕರಾಟೆ ತರಬೇತಿ ನೀಡಿ ಅವರನ್ನು ಸದೃಢ ನಾಗರಿಕರನ್ನಾಗಿ ರೂಪಿಸಲು ಸರ್ಕಾರವು ಶಾಲಾ ಹಂತದಲ್ಲಿ ಕರಾಟೆ ತರಬೇತಿ ಕಾರ್ಯಕ್ರಮ ಆರಂಭಿಸಿದೆ’ ಎಂದು ತಿಳಿಸಿದರು.</p>.<p>ಮಾಳಮಾರುತಿ ಠಾಣೆ ಪಿಎಸ್ಐ ಹೊಣ್ಣಪ್ಪ ತಳವಾರ ಮಾತನಾಡಿ, ಎಸ್.ಎಸ್. ಇಂಗ್ಲಿಷ್ ಮಾಧ್ಯಮ ಪ್ರೌಢಶಾಲೆ ಪ್ರಾಚಾರ್ಯ ಪ್ರೇಮಾನಂದ ಜಾಧವ ಮಾತನಾಡಿದರು. ಸೈನಿಕ ಕರಾಟೆ ಕೋಚ್ ಪ್ರಸಾದ ರಾಯ್, ಆನಂದ ಅಕಾಡೆಮಿ ಕಾರ್ಯದರ್ಶಿ ಆನಂದ ಪೂಜಾರಿ ಇದ್ದರು.</p>.<p>92 ವಿದ್ಯಾರ್ಥಿಗಳಿಗೆ ವಿವಿಧ ಬೆಲ್ಟ್ಗಳನ್ನು ವಿತರಿಸಲಾಯಿತು. ಮಹಾಂತೇಶ ಲೋಟೆ ಸ್ವಾಗತಿಸಿದರು. ರಾಜಶೇಖರ ಪಾಟೀಲ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ: </strong>‘ಕರಾಟೆ ಕೇವಲ ಕ್ರೀಡೆಯಲ್ಲ; ಅದು ಆತ್ಮರಕ್ಷಣೆಯ ಒಂದು ತಂತ್ರ. ಪ್ರತಿಯೊಬ್ಬರೂ ಕಲಿಯುವುದು ಒಳಿತು. ಅದರಲ್ಲೂ ಹೆಣ್ಣು ಮಕ್ಕಳು ನಿರ್ಭೀತಿಯಿಂದ ಓಡಾಡಲು ಈ ಕಲೆ ಸಹಕಾರಿಯಾಗಿದೆ’ ಎಂದು ನಾಗರೂರು ರುದ್ರಾಕ್ಷಿಮಠದ ಡಾ.ಅಲ್ಲಮಪ್ರಭು ಸ್ವಾಮೀಜಿ ಹೇಳಿದರು.</p>.<p>ಇಲ್ಲಿನ ಎಸ್ಜಿಬಿಐಟಿಯಲ್ಲಿ ಆನಂದ ಅಕಾಡೆಮಿಯಿಂದ ಭಾನುವಾರ ಆಯೋಜಿಸಿದ್ದ ‘ಕರಾಟೆ ಪಟುಗಳಿಗೆ ಬೆಲ್ಟ್ ಹಾಗೂ ಅಭಿನಂದನಾ ಪತ್ರ ವಿತರಣೆ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಕರಾಟೆ ಕಲಿಯುವುದರಿಂದ ದೇಹವು ವ್ಯಾಯಾಮಕ್ಕೊಳಪಡುತ್ತದೆ. ಶಾರೀರಿಕ ಹಾಗೂ ಮಾನಸಿಕ ಆರೋಗ್ಯ ವೃದ್ಧಿಯಾಗುತ್ತದೆ’ ಎಂದರು.</p>.<p>ಶಿಕ್ಷಣ ಇಲಾಖೆ ನಗರ ವಲಯ ಕ್ಷೇತ್ರ ಸಮನ್ವಯ ಅಧಿಕಾರಿ ಡಾ.ರಾಜಶೇಖರ ಚಳಗೇರಿ ಮಾತನಾಡಿ, ‘ಬಾಲ್ಯದಿಂದಲೇ ವಿದ್ಯಾರ್ಥಿಗಳಿಗೆ ಕರಾಟೆ ತರಬೇತಿ ನೀಡಿ ಅವರನ್ನು ಸದೃಢ ನಾಗರಿಕರನ್ನಾಗಿ ರೂಪಿಸಲು ಸರ್ಕಾರವು ಶಾಲಾ ಹಂತದಲ್ಲಿ ಕರಾಟೆ ತರಬೇತಿ ಕಾರ್ಯಕ್ರಮ ಆರಂಭಿಸಿದೆ’ ಎಂದು ತಿಳಿಸಿದರು.</p>.<p>ಮಾಳಮಾರುತಿ ಠಾಣೆ ಪಿಎಸ್ಐ ಹೊಣ್ಣಪ್ಪ ತಳವಾರ ಮಾತನಾಡಿ, ಎಸ್.ಎಸ್. ಇಂಗ್ಲಿಷ್ ಮಾಧ್ಯಮ ಪ್ರೌಢಶಾಲೆ ಪ್ರಾಚಾರ್ಯ ಪ್ರೇಮಾನಂದ ಜಾಧವ ಮಾತನಾಡಿದರು. ಸೈನಿಕ ಕರಾಟೆ ಕೋಚ್ ಪ್ರಸಾದ ರಾಯ್, ಆನಂದ ಅಕಾಡೆಮಿ ಕಾರ್ಯದರ್ಶಿ ಆನಂದ ಪೂಜಾರಿ ಇದ್ದರು.</p>.<p>92 ವಿದ್ಯಾರ್ಥಿಗಳಿಗೆ ವಿವಿಧ ಬೆಲ್ಟ್ಗಳನ್ನು ವಿತರಿಸಲಾಯಿತು. ಮಹಾಂತೇಶ ಲೋಟೆ ಸ್ವಾಗತಿಸಿದರು. ರಾಜಶೇಖರ ಪಾಟೀಲ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>