‘ರಾಜ್ಯದಲ್ಲಿ ಅರ್ಹರೆಲ್ಲರಿಗೂ ಜೂನ್ ಅಂತ್ಯದೊಳಗೆ ಮೊದಲನೇ ಡೋಸ್ ಕೋವಿಡ್ ಲಸಿಕೆ ಮತ್ತು ಸೆಪ್ಟೆಂಬರ್ ಅಂತ್ಯದೊಳಗೆ ಎರಡನೇ ಡೋಸ್ ಉಚಿತವಾಗಿ ನೀಡಬೇಕು. ಅಲ್ಲಲ್ಲಿ ಲಸಿಕೆ ಬೂತ್ಗಳನ್ನು ಸ್ಥಾಪಿಸಿ ಜನರನ್ನು ಕಾಯಿಸದೆ, ಸತಾಯಿಸದೆ ಲಸಿಕೆ ನೀಡಬೇಕು ಎನ್ನುವುದು ವೇದಿಕೆಯ ಹಕ್ಕೊತ್ತಾಯವಾಗಿದೆ. ಜಿಲ್ಲೆಯಲ್ಲೂ ಪ್ರತಿಭಟನೆ ನಡೆಸಲಾಗುವುದು’ ಎಂದು ಮಾಹಿತಿ ನೀಡಿದ್ದಾರೆ.