ಅಂಚೆ ಇಲಾಖೆ ಉತ್ತರ ಕರ್ನಾಟಕ ವಲಯದ ಪೋಸ್ಟ್ಮಾಸ್ಟರ್ ಜನರಲ್ ಡಾ.ಎನ್.ವಿನೋದಕುಮಾರ, ‘ನಾವು ಕೆಲಸ ಮಾಡುವ ಕಚೇರಿ ಸಹ ದೇವಸ್ಥಾನವಿದ್ದಂತೆ. ಇಲ್ಲಿ ಶ್ರದ್ಧೆಯಿಂದ ಕಾರ್ಯನಿರ್ವಹಿಸಿ, ದೇವರ ಆಶೀರ್ವಾದಕ್ಕೆ ಪಾತ್ರವಾಗಬೇಕು. ಚಿಕ್ಕ ಕೆಲಸವನ್ನೂ ಚೊಕ್ಕವಾಗಿ ಮಾಡುವ ಮನೋಭಾವ ಬೆಳೆಸಿಕೊಳ್ಳಬೇಕು. ಎಲ್ಲಕ್ಕಿಂತಲೂ ಮುಖ್ಯವಾಗಿ ಗ್ರಾಹಕರೊಂದಿಗೆ ಸೌಜನ್ಯದಿಂದ ವರ್ತಿಸಬೇಕು’ ಎಂದರು.