<p><strong>ಬೆಳಗಾವಿ:</strong> ‘ಇಲ್ಲಿನ ಸುವರ್ಣ ವಿಧಾನಸೌಧದಲ್ಲಿ ಆರಂಭವಾಗಲಿರುವ ವಿಧಾನಮಂಡಲ ಚಳಿಗಾಲದ ಅಧಿವೇಶನದ ಮೊದಲ ದಿನವೇ (ಡಿ.9ರಂದು) ಮಹಾಮೇಳಾವ್ ನಡೆಸಲಾಗುವುದು’ ಎಂದು ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಮುಖಂಡರು ಪ್ರಕಟಿಸಿದರು.</p>.<p>ಇಲ್ಲಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರನ್ನು ಗುರುವಾರ ಭೇಟಿಯಾದ ಅವರು, ‘ಅಧಿವೇಶನಕ್ಕೆ ಪರ್ಯಾಯವಾಗಿ ನಗರದಲ್ಲಿ ಮಹಾಮೇಳಾವ್ ಮಾಡುತ್ತೇವೆ. ಇದಕ್ಕೆ ವ್ಯವಸ್ಥೆ ಮಾಡಿಕೊಡಿ’ ಎಂದು ಮನವಿ ಮಾಡಿದರು.</p>.<p>ಎಂಇಎಸ್ ಕಾರ್ಯಾಧ್ಯಕ್ಷ ಮನೋಹರ ಕಿಣೇಕರ, ‘ರಾಜ್ಯ ಸರ್ಕಾರದಿಂದ ಗಡಿಭಾಗದ ಮರಾಠಿ ಭಾಷಿಕರ ಮೇಲೆ ಅನ್ಯಾಯ ನಡೆಯುತ್ತಲೇ ಇದೆ. ಇದನ್ನು ಖಂಡಿಸಿ ಪ್ರತಿವರ್ಷ ಅಧಿವೇಶನದಲ್ಲಿ ಮಹಾಮೇಳಾವ್ ಮಾಡುತ್ತ ಬಂದಿದ್ದೇವೆ. ಇದಕ್ಕೆ ಜಿಲ್ಲಾಡಳಿತದಿಂದ ಅನುಮತಿ ಸಿಗಲಿ, ಸಿಗದಿರಲಿ. ನಾವಂತೂ ಮಹಾಮೇಳಾವ್ ಮಾಡುವುದು ನಿಶ್ಚಿತ’ ಎಂದರು.</p>.<p>ಮುಖಂಡರಾದ ರಂಜೀತ್ ಚವ್ಹಾಣ ಪಾಟೀಲ, ಪ್ರಕಾಶ ಮರಗಾಳೆ, ಮಾಲೋಜಿ ಅಷ್ಟೇಕರ, ರಾಮಚಂದ್ರ ಮೋದಗಕೇರ, ವಿಕಾಸ ಕಲಘಟಗಿ ಇದ್ದರು.</p>.<div><blockquote>ಅಧಿವೇಶನ ವೇಳೆ ಪ್ರತಿಭಟನೆ ಮಾಡುವುದಕ್ಕೆ ಅವಕಾಶವಿದೆ. ಆದರೆ ನಾಡಿನ ಹಿತಾಸಕ್ತಿಗೆ ವಿರುದ್ಧವಾಗಿ ನಡೆದುಕೊಳ್ಳಲು ಅವಕಾಶ ನೀಡುವುದಿಲ್ಲ</blockquote><span class="attribution">ಮೊಹಮ್ಮದ್ ರೋಷನ್ ಜಿಲ್ಲಾಧಿಕಾರಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ‘ಇಲ್ಲಿನ ಸುವರ್ಣ ವಿಧಾನಸೌಧದಲ್ಲಿ ಆರಂಭವಾಗಲಿರುವ ವಿಧಾನಮಂಡಲ ಚಳಿಗಾಲದ ಅಧಿವೇಶನದ ಮೊದಲ ದಿನವೇ (ಡಿ.9ರಂದು) ಮಹಾಮೇಳಾವ್ ನಡೆಸಲಾಗುವುದು’ ಎಂದು ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಮುಖಂಡರು ಪ್ರಕಟಿಸಿದರು.</p>.<p>ಇಲ್ಲಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರನ್ನು ಗುರುವಾರ ಭೇಟಿಯಾದ ಅವರು, ‘ಅಧಿವೇಶನಕ್ಕೆ ಪರ್ಯಾಯವಾಗಿ ನಗರದಲ್ಲಿ ಮಹಾಮೇಳಾವ್ ಮಾಡುತ್ತೇವೆ. ಇದಕ್ಕೆ ವ್ಯವಸ್ಥೆ ಮಾಡಿಕೊಡಿ’ ಎಂದು ಮನವಿ ಮಾಡಿದರು.</p>.<p>ಎಂಇಎಸ್ ಕಾರ್ಯಾಧ್ಯಕ್ಷ ಮನೋಹರ ಕಿಣೇಕರ, ‘ರಾಜ್ಯ ಸರ್ಕಾರದಿಂದ ಗಡಿಭಾಗದ ಮರಾಠಿ ಭಾಷಿಕರ ಮೇಲೆ ಅನ್ಯಾಯ ನಡೆಯುತ್ತಲೇ ಇದೆ. ಇದನ್ನು ಖಂಡಿಸಿ ಪ್ರತಿವರ್ಷ ಅಧಿವೇಶನದಲ್ಲಿ ಮಹಾಮೇಳಾವ್ ಮಾಡುತ್ತ ಬಂದಿದ್ದೇವೆ. ಇದಕ್ಕೆ ಜಿಲ್ಲಾಡಳಿತದಿಂದ ಅನುಮತಿ ಸಿಗಲಿ, ಸಿಗದಿರಲಿ. ನಾವಂತೂ ಮಹಾಮೇಳಾವ್ ಮಾಡುವುದು ನಿಶ್ಚಿತ’ ಎಂದರು.</p>.<p>ಮುಖಂಡರಾದ ರಂಜೀತ್ ಚವ್ಹಾಣ ಪಾಟೀಲ, ಪ್ರಕಾಶ ಮರಗಾಳೆ, ಮಾಲೋಜಿ ಅಷ್ಟೇಕರ, ರಾಮಚಂದ್ರ ಮೋದಗಕೇರ, ವಿಕಾಸ ಕಲಘಟಗಿ ಇದ್ದರು.</p>.<div><blockquote>ಅಧಿವೇಶನ ವೇಳೆ ಪ್ರತಿಭಟನೆ ಮಾಡುವುದಕ್ಕೆ ಅವಕಾಶವಿದೆ. ಆದರೆ ನಾಡಿನ ಹಿತಾಸಕ್ತಿಗೆ ವಿರುದ್ಧವಾಗಿ ನಡೆದುಕೊಳ್ಳಲು ಅವಕಾಶ ನೀಡುವುದಿಲ್ಲ</blockquote><span class="attribution">ಮೊಹಮ್ಮದ್ ರೋಷನ್ ಜಿಲ್ಲಾಧಿಕಾರಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>