<p><strong>ರಾಮದುರ್ಗ</strong>: ಮುಖ್ಯಮಂತ್ರಿ ಸಿದ್ಧರಾಮಯ್ಯನವರು ತಮ್ಮ 17ನೇ ಬಜೆಟ್ನಲ್ಲಿ ರಾಮದುರ್ಗ ವಿಧಾನಸಭಾ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ₹ 164 ಕೋಟಿ ಅನುದಾನ ನೀಡಿದ್ದಾರೆ ಎಂದು ಸರ್ಕಾರದ ಮುಖ್ಯಸಚೇತಕ ಅಶೋಕ ಪಟ್ಟಣ ಹೇಳಿದರು.</p>.<p>ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ₹ 30 ಕೋಟಿ ಅನುದಾನದಲ್ಲಿ ರಾಮದುರ್ಗದ ಕುದುರೆ ಬಯಲಿನಲ್ಲಿ ಸುಸಜ್ಜಿತ ಹೊಸ ಬಸ್ನಿಲ್ದಾಣ, ₹ 85 ಕೋಟಿ ವೆಚ್ಚದಲ್ಲಿ ಮಲಪ್ರಭಾ ನದಿಯಿಂದ ತಾಲ್ಲೂಕಿನ ಚಂದರಗಿ, ಮುರಕಟ್ನಾಳ, ತೋರಣಗಟ್ಟಿ, ಕಟಕೋಳ ಸೇರಿದಂತೆ ವಿವಿಧ 8 ಕೆರೆಗಳಿಗೆ ನೀರು ತುಂಬಿಸುವ ಯೋಜನೆ, ₹ 40 ಕೋಟಿ ವೆಚ್ಚದಲ್ಲಿ ಮುರಾರ್ಜಿ ದೇಸಾಯಿ ವಸತಿ ಶಾಲೆ ಮಾದರಿಯಲ್ಲಿ ಕಾರ್ಮಿಕರ ಮಕ್ಕಳಿಗಾಗಿ ವಸತಿ ಶಾಲೆ, ₹ 9 ಕೋಟಿ ವೆಚ್ಚದಲ್ಲಿ ಮಲಪ್ರಭಾ ನದಿಗೆ ಗೊಣ್ಣಾಗರ ಗ್ರಾಮದ ಹತ್ತಿರ ಅಗತ್ಯವಿರುವ ಸ್ಥಳದಲ್ಲಿ ತಡೆಗೋಡೆ ನಿರ್ಮಾಣಕ್ಕೆ ಸಿದ್ದರಾಮಯ್ಯನವರು ಅನುಮೋದನೆ ನೀಡಿದ್ದಾರೆ.</p>.<p>ಕಳೆದ ಬಜೆಟ್ನಲ್ಲಿ ಅನುಮೋದಿತಗೊಂಡ ₹ 40 ಕೋಟಿ ವೆಚ್ಚದ 100 ಹಾಸಿಗೆಯ ಮಲ್ಟಿಸ್ಪೇಷಾಲಿಟಿ ಆಸ್ಪತ್ರೆ, ಪುರಸಭೆ ವ್ಯಾಪ್ತಿಯಲ್ಲಿ ₹ 20 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳು ಪ್ರಗತಿಯಲ್ಲಿವೆ. ಮುಖ್ಯಮಂತ್ರಿಗಳ ವಿಶೇಷ ಅನುದಾನ ₹ 37 ಕೋಟಿ ಅನುದಾನದಲ್ಲಿ ಪ್ರಮುಖ ರಸ್ತೆಗಳ ಸುಧಾರಣೆ ಮತ್ತು ₹13 ಕೋಟಿ ಅನುದಾನದಲ್ಲಿ ರೈತರ ಜಮೀನುಗಳ ರಸ್ತೆ ಅಭಿವೃದ್ಧಿಗೆ ಅನುದಾನ ಬಿಡುಗಡೆಗೊಂಡು ಟೆಂಡರ್ ಪ್ರಕ್ರಿಯೆ ನಡೆಯಲಿದೆ ಎಂದರು.</p>.<p>ಸಾಲಾಪೂರ ಮತ್ತು ಮುದೇನೂರದಲ್ಲಿ 110 ಕೆವಿ ವಿದ್ಯುತ್ ವಿತರಣಾ ಕೇಂದ್ರ ಸ್ಥಾಪನೆಗೆ ತಲಾ ರೂ. 25 ಕೋಟಿ ಮಂಜೂರಾಗಿದೆ. ರೈತರ ಬಹು ನಿರೀಕ್ಷಿತ ₹ 350 ಕೋಟಿ ಅನುದಾನದ ವೀರಭದ್ರೇಶ್ವರ ಏತ ನೀರಾವರಿ ಯೋಜನೆ ಮರು ಟೆಂಡರ್ ಕರೆದು ಗುತ್ತಿಗೆ ನೀಡಲು ಸರ್ಕಾರ ಸೂಚಿಸಿದೆ. ಸಾಲಾಪೂರದ ಬಸವೇಶ್ವರ ಏತ ನೀರಾವರಿ ಯೋಜನೆ ಶೇ 90 ರಷ್ಟು ಪೂರ್ಣಗೊಂಡಿದ್ದು ರೈತರು ನೀರಾವರಿಗೆ ಅನುಕೂಲವಾಗಲಿದೆ ಎಂದು ಹೇಳಿದರು.</p>.<p>ಮಲಪ್ರಭಾ ನದಿಗೆ ಹಂಪಿಹೊಳಿ ಹತ್ತಿರ ₹ 126 ಕೋಟಿ ವೆಚ್ಚದ ತಡೆಗೋಡೆ ನಿರ್ಮಾಣ ಕಾಮಗಾರಿಯೂ ಸ್ಥಗಿತಗೊಂಡಿತ್ತು ಅದನ್ನು ಸಹ ಪುನಃ ಪ್ರಾರಂಭಿಸಲು ಕ್ರಮಕೈಗೊಳ್ಳಲಾಗಿದೆ. ಶಿರಸಂಗಿಯ 26ನೇ ಹಂಚು ಕಾಲುವೆ ಪುನರ್ ನಿರ್ಮಾಣಕ್ಕೆ ₹ 94 ಕೋಟಿಯ ಪ್ರಸ್ತಾವ ಸಲ್ಲಿಸಲಾಗಿದೆ. ಇದರಿಂದ ಕಡ್ಲಿಕೊಪ್ಪ, ರೇವಡಿಕೊಪ್ಪ, ಜಾಲಿಕಟ್ಟಿ, ಮುಳ್ಳೂರ ಗ್ರಾಮಗಳ ರೈತರ ಜಮೀನಿಗೆ ನೀರಾವರಿಗೆ ಅನುಕೂಲವಾಗಲಿದೆ ಎಂದರು.</p>.<p>ಪತ್ರಿಕಾಗೋಷ್ಠಿಯಲ್ಲಿ ತಾಲ್ಲೂಕು ಗ್ಯಾರಂಟಿ ಯೋಜನೆಯ ಅಧ್ಯಕ್ಷ ಜಿ.ಬಿ.ರಂಗನಗೌಡ್ರ, ಪುರಸಭೆ ಮಾಜಿ ಅಧ್ಯಕ್ಷ ಸುರೇಶ ಪತ್ತೇಪೂರ, ಸಂಜಯಸಿಂಹ ಶಿಂಧೆ, ಪ್ರದೀಪ ಪಟ್ಟಣ, ಪ್ರವೀಣ ನಿಜಗುಲಿ ಸೇರಿದಂತೆ ಹಲವರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಮದುರ್ಗ</strong>: ಮುಖ್ಯಮಂತ್ರಿ ಸಿದ್ಧರಾಮಯ್ಯನವರು ತಮ್ಮ 17ನೇ ಬಜೆಟ್ನಲ್ಲಿ ರಾಮದುರ್ಗ ವಿಧಾನಸಭಾ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ₹ 164 ಕೋಟಿ ಅನುದಾನ ನೀಡಿದ್ದಾರೆ ಎಂದು ಸರ್ಕಾರದ ಮುಖ್ಯಸಚೇತಕ ಅಶೋಕ ಪಟ್ಟಣ ಹೇಳಿದರು.</p>.<p>ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ₹ 30 ಕೋಟಿ ಅನುದಾನದಲ್ಲಿ ರಾಮದುರ್ಗದ ಕುದುರೆ ಬಯಲಿನಲ್ಲಿ ಸುಸಜ್ಜಿತ ಹೊಸ ಬಸ್ನಿಲ್ದಾಣ, ₹ 85 ಕೋಟಿ ವೆಚ್ಚದಲ್ಲಿ ಮಲಪ್ರಭಾ ನದಿಯಿಂದ ತಾಲ್ಲೂಕಿನ ಚಂದರಗಿ, ಮುರಕಟ್ನಾಳ, ತೋರಣಗಟ್ಟಿ, ಕಟಕೋಳ ಸೇರಿದಂತೆ ವಿವಿಧ 8 ಕೆರೆಗಳಿಗೆ ನೀರು ತುಂಬಿಸುವ ಯೋಜನೆ, ₹ 40 ಕೋಟಿ ವೆಚ್ಚದಲ್ಲಿ ಮುರಾರ್ಜಿ ದೇಸಾಯಿ ವಸತಿ ಶಾಲೆ ಮಾದರಿಯಲ್ಲಿ ಕಾರ್ಮಿಕರ ಮಕ್ಕಳಿಗಾಗಿ ವಸತಿ ಶಾಲೆ, ₹ 9 ಕೋಟಿ ವೆಚ್ಚದಲ್ಲಿ ಮಲಪ್ರಭಾ ನದಿಗೆ ಗೊಣ್ಣಾಗರ ಗ್ರಾಮದ ಹತ್ತಿರ ಅಗತ್ಯವಿರುವ ಸ್ಥಳದಲ್ಲಿ ತಡೆಗೋಡೆ ನಿರ್ಮಾಣಕ್ಕೆ ಸಿದ್ದರಾಮಯ್ಯನವರು ಅನುಮೋದನೆ ನೀಡಿದ್ದಾರೆ.</p>.<p>ಕಳೆದ ಬಜೆಟ್ನಲ್ಲಿ ಅನುಮೋದಿತಗೊಂಡ ₹ 40 ಕೋಟಿ ವೆಚ್ಚದ 100 ಹಾಸಿಗೆಯ ಮಲ್ಟಿಸ್ಪೇಷಾಲಿಟಿ ಆಸ್ಪತ್ರೆ, ಪುರಸಭೆ ವ್ಯಾಪ್ತಿಯಲ್ಲಿ ₹ 20 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳು ಪ್ರಗತಿಯಲ್ಲಿವೆ. ಮುಖ್ಯಮಂತ್ರಿಗಳ ವಿಶೇಷ ಅನುದಾನ ₹ 37 ಕೋಟಿ ಅನುದಾನದಲ್ಲಿ ಪ್ರಮುಖ ರಸ್ತೆಗಳ ಸುಧಾರಣೆ ಮತ್ತು ₹13 ಕೋಟಿ ಅನುದಾನದಲ್ಲಿ ರೈತರ ಜಮೀನುಗಳ ರಸ್ತೆ ಅಭಿವೃದ್ಧಿಗೆ ಅನುದಾನ ಬಿಡುಗಡೆಗೊಂಡು ಟೆಂಡರ್ ಪ್ರಕ್ರಿಯೆ ನಡೆಯಲಿದೆ ಎಂದರು.</p>.<p>ಸಾಲಾಪೂರ ಮತ್ತು ಮುದೇನೂರದಲ್ಲಿ 110 ಕೆವಿ ವಿದ್ಯುತ್ ವಿತರಣಾ ಕೇಂದ್ರ ಸ್ಥಾಪನೆಗೆ ತಲಾ ರೂ. 25 ಕೋಟಿ ಮಂಜೂರಾಗಿದೆ. ರೈತರ ಬಹು ನಿರೀಕ್ಷಿತ ₹ 350 ಕೋಟಿ ಅನುದಾನದ ವೀರಭದ್ರೇಶ್ವರ ಏತ ನೀರಾವರಿ ಯೋಜನೆ ಮರು ಟೆಂಡರ್ ಕರೆದು ಗುತ್ತಿಗೆ ನೀಡಲು ಸರ್ಕಾರ ಸೂಚಿಸಿದೆ. ಸಾಲಾಪೂರದ ಬಸವೇಶ್ವರ ಏತ ನೀರಾವರಿ ಯೋಜನೆ ಶೇ 90 ರಷ್ಟು ಪೂರ್ಣಗೊಂಡಿದ್ದು ರೈತರು ನೀರಾವರಿಗೆ ಅನುಕೂಲವಾಗಲಿದೆ ಎಂದು ಹೇಳಿದರು.</p>.<p>ಮಲಪ್ರಭಾ ನದಿಗೆ ಹಂಪಿಹೊಳಿ ಹತ್ತಿರ ₹ 126 ಕೋಟಿ ವೆಚ್ಚದ ತಡೆಗೋಡೆ ನಿರ್ಮಾಣ ಕಾಮಗಾರಿಯೂ ಸ್ಥಗಿತಗೊಂಡಿತ್ತು ಅದನ್ನು ಸಹ ಪುನಃ ಪ್ರಾರಂಭಿಸಲು ಕ್ರಮಕೈಗೊಳ್ಳಲಾಗಿದೆ. ಶಿರಸಂಗಿಯ 26ನೇ ಹಂಚು ಕಾಲುವೆ ಪುನರ್ ನಿರ್ಮಾಣಕ್ಕೆ ₹ 94 ಕೋಟಿಯ ಪ್ರಸ್ತಾವ ಸಲ್ಲಿಸಲಾಗಿದೆ. ಇದರಿಂದ ಕಡ್ಲಿಕೊಪ್ಪ, ರೇವಡಿಕೊಪ್ಪ, ಜಾಲಿಕಟ್ಟಿ, ಮುಳ್ಳೂರ ಗ್ರಾಮಗಳ ರೈತರ ಜಮೀನಿಗೆ ನೀರಾವರಿಗೆ ಅನುಕೂಲವಾಗಲಿದೆ ಎಂದರು.</p>.<p>ಪತ್ರಿಕಾಗೋಷ್ಠಿಯಲ್ಲಿ ತಾಲ್ಲೂಕು ಗ್ಯಾರಂಟಿ ಯೋಜನೆಯ ಅಧ್ಯಕ್ಷ ಜಿ.ಬಿ.ರಂಗನಗೌಡ್ರ, ಪುರಸಭೆ ಮಾಜಿ ಅಧ್ಯಕ್ಷ ಸುರೇಶ ಪತ್ತೇಪೂರ, ಸಂಜಯಸಿಂಹ ಶಿಂಧೆ, ಪ್ರದೀಪ ಪಟ್ಟಣ, ಪ್ರವೀಣ ನಿಜಗುಲಿ ಸೇರಿದಂತೆ ಹಲವರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>