ರಾಜ್ಯ ಗ್ರಾಹಕರ ವ್ಯಾಜ್ಯಗಳ ನ್ಯಾಯಾಲಯದಲ್ಲಿ ಕಿತ್ತೂರು ಕರ್ನಾಟಕ ಭಾಗದ 6,000ಕ್ಕೂ ಹೆಚ್ಚು ಪ್ರಕರಣಗಳು ಬಾಕಿ ಇವೆ. ಹೀಗಾಗಿ, ಪ್ರತಿ ಬಾರಿಯೂ ನ್ಯಾಯಕ್ಕಾಗಿ ಗ್ರಾಹಕರು ಬೆಂಗಳೂರಿಗೆ ಅಲೆದಾಡುವಂತಾಗಿದೆ. ಅಲ್ಲದೇ, ಜಿಲ್ಲಾ ಗ್ರಾಹಕರ ವೇದಿಕೆಯಲ್ಲಿ ಕೂಡ 5,700 ಪ್ರಕರಣ ಬಾಕಿ ಇವೆ. ಇವುಗಳ ತುರ್ತು ವಿಲೇವಾರಿಗಾಗಿ ಒಂದು ಪ್ರತ್ಯೇಕ ಸಂಚಾರಿ ಪೀಠ ಅಗತ್ಯ ಎಂದು ಹೋರಾಟ ಆರಂಭಿಸಲಾಗಿತ್ತು.