ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳಗಾವಿಗೆ ಗ್ರಾಹಕರ ವ್ಯಾಜ್ಯಗಳ ಆಯೋಗದ ಪೀಠ ಮಂಜೂರು

ಕಿತ್ತೂರು ಕರ್ನಾಟಕ ಭಾಗದ ಜನರ ಹೋರಾಟಕ್ಕೆ ಮತ್ತೊಂದು ಜಯ
Last Updated 17 ಜೂನ್ 2022, 16:26 IST
ಅಕ್ಷರ ಗಾತ್ರ

ಬೆಳಗಾವಿ: ರಾಜ್ಯ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಕಾಯಂ ಸಂಚಾರಿ ಪೀಠವನ್ನು, ಬೆಳಗಾವಿಗೂ ಮಂಜೂರು ಮಾಡಿ ರಾಜ್ಯ ಸರ್ಕಾರ ಶುಕ್ರವಾರ ಆದೇಶ ಹೊರಡಿಸಿದೆ. ಇದರೊಂದಿಗೆ ಕಿತ್ತೂರು ಕರ್ನಾಟಕ ಭಾಗದ ಜನರ ಹೋರಾಟಕ್ಕೆ ಮತ್ತೊಂದು ಜಯ ಸಿಕ್ಕಿದೆ.

ಈ ಪೀಠಕ್ಕಾಗಿ ಬೆಳಗಾವಿ ಜಿಲ್ಲಾ ಗ್ರಾಹಕರ ಸಂಘದ ನೇತೃತ್ವಲ್ಲಿ 2019ರಿಂದ ಹೋರಾಟ ನಡೆದಿತ್ತು. ಆದರೆ, ಸರ್ಕಾರ ಈಚೆಗೆ ಕಲ್ಯಾಣ ಕರ್ನಾಟಕ ಭಾಗಕ್ಕೆ (ಕಲಬುರಗಿ) ಪೀಠ ಮಂಜೂರು ಮಾಡಿತ್ತು. ಇದರಿಂದ ರೋಸಿಹೋದ ವಕೀಲರು ನಾಲ್ಕು ದಿನಗಳಿಂದ ಧರಣಿ ಆರಂಭಿಸಿದ್ದರು. ಕೋರ್ಟ್‌ ಕಲಾಪಗಳಿಂದ ಹೊರಗುಳಿದ ವಕೀಲರ ಒತ್ತಡಕ್ಕೆ ಮಣಿದ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿದೆ.

ರಾಜ್ಯ ಗ್ರಾಹಕರ ವ್ಯಾಜ್ಯಗಳ ನ್ಯಾಯಾಲಯದಲ್ಲಿ ಕಿತ್ತೂರು ಕರ್ನಾಟಕ ಭಾಗದ 6,000ಕ್ಕೂ ಹೆಚ್ಚು ಪ್ರಕರಣಗಳು ಬಾಕಿ ಇವೆ. ಹೀಗಾಗಿ, ಪ್ರತಿ ಬಾರಿಯೂ ನ್ಯಾಯಕ್ಕಾಗಿ ಗ್ರಾಹಕರು ಬೆಂಗಳೂರಿಗೆ ಅಲೆದಾಡುವಂತಾಗಿದೆ. ಅಲ್ಲದೇ, ಜಿಲ್ಲಾ ಗ್ರಾಹಕರ ವೇದಿಕೆಯಲ್ಲಿ ಕೂಡ 5,700 ಪ್ರಕರಣ ಬಾಕಿ ಇವೆ. ಇವುಗಳ ತುರ್ತು ವಿಲೇವಾರಿಗಾಗಿ ಒಂದು ಪ್ರತ್ಯೇಕ ಸಂಚಾರಿ ಪೀಠ ಅಗತ್ಯ ಎಂದು ಹೋರಾಟ ಆರಂಭಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT