<figcaption>""</figcaption>.<figcaption>""</figcaption>.<figcaption>""</figcaption>.<figcaption>""</figcaption>.<p><strong>ಬೆಳಗಾವಿ: </strong>ನೆರೆಯ ಮಹಾರಾಷ್ಟ್ರದಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಅಲ್ಲಿನ ಜಲಾಶಯಗಳಿಂದ ಅಪಾರ ಪ್ರಮಾಣದ ನೀರು ರಾಜ್ಯಕ್ಕೆ ಹರಿದುಬರುತ್ತಿದೆ.</p>.<p>ಕೊಯ್ನಾ ಜಲಾಶಯದಿಂದ 55,958 ಕ್ಯುಸೆಕ್ ಸೇರಿದಂತೆ ವಿವಿಧ ಜಲಾಶಯಗಳಿಂದ ಕೃಷ್ಣಾ ನದಿಗೆ 1.21 ಲಕ್ಷ ಕ್ಯುಸೆಕ್ ನೀರು ಹರಿದು ಬರುತ್ತಿದ್ದು, ಮುಂದಿನ 48 ತಾಸುಗಳಲ್ಲಿ ಈ ಪ್ರಮಾಣವು 2.75 ಲಕ್ಷ ಕ್ಯುಸೆಕ್ಗೆ ಏರಿಕೆಯಾಗುವ ಸಾಧ್ಯತೆ ಇದೆ. ನದಿ ತೀರದ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಜಿಲ್ಲೆಯ ಖಾನಾಪುರ ತಾಲ್ಲೂಕಿನ ಶಿವಠಾಣ ಬಳಿ ಪಾಂಡರಿ ನದಿ ಉಕ್ಕಿ ಹರಿಯುತ್ತಿರುವ ಪರಿಣಾಮ ಲೋಂಡಾ–ಹುಬ್ಬಳ್ಳಿ ರೈಲ್ವೆ ಹಳಿ ಪಕ್ಕದಲ್ಲಿ ಭೂ ಕುಸಿತ ಉಂಟಾಗಿದೆ. ನಿರಂತರ ಮಳೆ ಸುರಿಯುತ್ತಿರುವುದರಿಂದ ಪರಿಹಾರ ಕಾರ್ಯದಲ್ಲಿ ಅಡಚಣೆ ಉಂಟಾಗಿದೆ ಎಂದು ರೈಲ್ವೆ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.</p>.<div style="text-align:center"><figcaption><strong><em>ಸಾತನಾಳಿ–ಮಾಚಾಳಿ ಗ್ರಾಮಗಳ ಸಂಪರ್ಕ ಕಡಿತ</em></strong></figcaption></div>.<p><strong>ಸಂಕದ ಮೇಲೆ ನೀರು; ಸಂಪರ್ಕ ಕಡಿತ</strong></p>.<p>ಜಿಲ್ಲೆಯ ಖಾನಾಪುರ ತಾಲ್ಲೂಕಿನ ಲೋಂಡಾ ಗ್ರಾಮದ ಸಮೀಪದಲ್ಲಿರುವ ಸಾತನಾಳಿ ಗ್ರಾಮಕ್ಕೆ ಸಂಪರ್ಕಿಸುವ ಸಂಕದ ಮೇಲಿಂದ ಪಾಂಡರಿ ನದಿ ಹರಿಯುತ್ತಿದೆ.</p>.<p>ಸಾತನಾಳಿ–ಮಾಚಾಳಿ ಗ್ರಾಮಗಳ ಸಂಪರ್ಕ ಕಡಿತವಾಗಿದೆ.</p>.<p><strong>ತಗ್ಗಿದ ಮಳೆ ರಭಸ; ನದಿ ಪ್ರವಾಹ ಮುಂದುವರಿಕೆ</strong></p>.<p>ನಗರವೂ ಸೇರಿದಂತೆ ಜಿಲ್ಲೆಯಾದ್ಯಂತ ಸೋಮವಾರ ಬೆಳಿಗ್ಗೆಯಿಂದ ಮಳೆಯ ಅಬ್ಬರ ಕಡಿಮೆಯಾಗಿದೆ. ಕಳೆದ 3–4 ದಿನಗಳಿಂದ ಸುರಿದ ಬಿರುಸಿನ ಮಳೆಯಿಂದಾಗಿ ಕೃಷ್ಣಾ, ಮಲಪ್ರಭಾ, ಘಟಪ್ರಭಾ ನದಿಗಳ ಪ್ರವಾಹ ಮುಂದುವರಿದಿದೆ.</p>.<div style="text-align:center"><figcaption><strong><em>ಗೋಕಾಕ ಹೊರವಲಯದ ಲೊಳಸೂರ ಸೇತುವೆ ಮೇಲೆ ಘಟಪ್ರಭಾ ನೀರು ಹರಿಯುತ್ತಿದೆ</em></strong></figcaption></div>.<p>ಕೃಷ್ಣಾ ಪ್ರವಾಹದಿಂದಾಗಿ ರಾಯಬಾಗ–ಕುಡಚಿ ಸೇತುವೆ ಜಲಾವೃತವಾಗಿದೆ. ಘಟಪ್ರಭಾ ಉಕ್ಕಿ ಹರಿಯುತ್ತಿರುವುದರಿಂದ ಗೋಕಾಕ ಹೊರವಲಯದ ಲೋಳಸೂರ ಸೇತುವೆ ಜಲಾವೃತವಾಗಿದೆ. ಮಲಪ್ರಭಾ ಜಲಾಶಯದಿಂದ ಅಪಾರ ಪ್ರಮಾಣದಲ್ಲಿ ನೀರು ಬಿಟ್ಟಿದ್ದರ ಪರಿಣಾಮ ಸವದತ್ತಿ ತಾಲ್ಲೂಕಿನ ಮುನವಳ್ಳಿ ಪಟ್ಟಣದಲ್ಲಿ ನೀರು ನುಗ್ಗಿದೆ.</p>.<div style="text-align:center"><figcaption><br /><em><strong>ರಾಯಬಾಗ–ಕುಡಚಿ ಬಳಿಯ ಕೃಷ್ಣಾ ನದಿಯ ಸೇತುವೆ ಸೋಮವಾರ ಬೆಳಿಗ್ಗೆ ಜಲಾವೃತವಾಗಿದೆ</strong></em></figcaption></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<figcaption>""</figcaption>.<figcaption>""</figcaption>.<figcaption>""</figcaption>.<figcaption>""</figcaption>.<p><strong>ಬೆಳಗಾವಿ: </strong>ನೆರೆಯ ಮಹಾರಾಷ್ಟ್ರದಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಅಲ್ಲಿನ ಜಲಾಶಯಗಳಿಂದ ಅಪಾರ ಪ್ರಮಾಣದ ನೀರು ರಾಜ್ಯಕ್ಕೆ ಹರಿದುಬರುತ್ತಿದೆ.</p>.<p>ಕೊಯ್ನಾ ಜಲಾಶಯದಿಂದ 55,958 ಕ್ಯುಸೆಕ್ ಸೇರಿದಂತೆ ವಿವಿಧ ಜಲಾಶಯಗಳಿಂದ ಕೃಷ್ಣಾ ನದಿಗೆ 1.21 ಲಕ್ಷ ಕ್ಯುಸೆಕ್ ನೀರು ಹರಿದು ಬರುತ್ತಿದ್ದು, ಮುಂದಿನ 48 ತಾಸುಗಳಲ್ಲಿ ಈ ಪ್ರಮಾಣವು 2.75 ಲಕ್ಷ ಕ್ಯುಸೆಕ್ಗೆ ಏರಿಕೆಯಾಗುವ ಸಾಧ್ಯತೆ ಇದೆ. ನದಿ ತೀರದ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಜಿಲ್ಲೆಯ ಖಾನಾಪುರ ತಾಲ್ಲೂಕಿನ ಶಿವಠಾಣ ಬಳಿ ಪಾಂಡರಿ ನದಿ ಉಕ್ಕಿ ಹರಿಯುತ್ತಿರುವ ಪರಿಣಾಮ ಲೋಂಡಾ–ಹುಬ್ಬಳ್ಳಿ ರೈಲ್ವೆ ಹಳಿ ಪಕ್ಕದಲ್ಲಿ ಭೂ ಕುಸಿತ ಉಂಟಾಗಿದೆ. ನಿರಂತರ ಮಳೆ ಸುರಿಯುತ್ತಿರುವುದರಿಂದ ಪರಿಹಾರ ಕಾರ್ಯದಲ್ಲಿ ಅಡಚಣೆ ಉಂಟಾಗಿದೆ ಎಂದು ರೈಲ್ವೆ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.</p>.<div style="text-align:center"><figcaption><strong><em>ಸಾತನಾಳಿ–ಮಾಚಾಳಿ ಗ್ರಾಮಗಳ ಸಂಪರ್ಕ ಕಡಿತ</em></strong></figcaption></div>.<p><strong>ಸಂಕದ ಮೇಲೆ ನೀರು; ಸಂಪರ್ಕ ಕಡಿತ</strong></p>.<p>ಜಿಲ್ಲೆಯ ಖಾನಾಪುರ ತಾಲ್ಲೂಕಿನ ಲೋಂಡಾ ಗ್ರಾಮದ ಸಮೀಪದಲ್ಲಿರುವ ಸಾತನಾಳಿ ಗ್ರಾಮಕ್ಕೆ ಸಂಪರ್ಕಿಸುವ ಸಂಕದ ಮೇಲಿಂದ ಪಾಂಡರಿ ನದಿ ಹರಿಯುತ್ತಿದೆ.</p>.<p>ಸಾತನಾಳಿ–ಮಾಚಾಳಿ ಗ್ರಾಮಗಳ ಸಂಪರ್ಕ ಕಡಿತವಾಗಿದೆ.</p>.<p><strong>ತಗ್ಗಿದ ಮಳೆ ರಭಸ; ನದಿ ಪ್ರವಾಹ ಮುಂದುವರಿಕೆ</strong></p>.<p>ನಗರವೂ ಸೇರಿದಂತೆ ಜಿಲ್ಲೆಯಾದ್ಯಂತ ಸೋಮವಾರ ಬೆಳಿಗ್ಗೆಯಿಂದ ಮಳೆಯ ಅಬ್ಬರ ಕಡಿಮೆಯಾಗಿದೆ. ಕಳೆದ 3–4 ದಿನಗಳಿಂದ ಸುರಿದ ಬಿರುಸಿನ ಮಳೆಯಿಂದಾಗಿ ಕೃಷ್ಣಾ, ಮಲಪ್ರಭಾ, ಘಟಪ್ರಭಾ ನದಿಗಳ ಪ್ರವಾಹ ಮುಂದುವರಿದಿದೆ.</p>.<div style="text-align:center"><figcaption><strong><em>ಗೋಕಾಕ ಹೊರವಲಯದ ಲೊಳಸೂರ ಸೇತುವೆ ಮೇಲೆ ಘಟಪ್ರಭಾ ನೀರು ಹರಿಯುತ್ತಿದೆ</em></strong></figcaption></div>.<p>ಕೃಷ್ಣಾ ಪ್ರವಾಹದಿಂದಾಗಿ ರಾಯಬಾಗ–ಕುಡಚಿ ಸೇತುವೆ ಜಲಾವೃತವಾಗಿದೆ. ಘಟಪ್ರಭಾ ಉಕ್ಕಿ ಹರಿಯುತ್ತಿರುವುದರಿಂದ ಗೋಕಾಕ ಹೊರವಲಯದ ಲೋಳಸೂರ ಸೇತುವೆ ಜಲಾವೃತವಾಗಿದೆ. ಮಲಪ್ರಭಾ ಜಲಾಶಯದಿಂದ ಅಪಾರ ಪ್ರಮಾಣದಲ್ಲಿ ನೀರು ಬಿಟ್ಟಿದ್ದರ ಪರಿಣಾಮ ಸವದತ್ತಿ ತಾಲ್ಲೂಕಿನ ಮುನವಳ್ಳಿ ಪಟ್ಟಣದಲ್ಲಿ ನೀರು ನುಗ್ಗಿದೆ.</p>.<div style="text-align:center"><figcaption><br /><em><strong>ರಾಯಬಾಗ–ಕುಡಚಿ ಬಳಿಯ ಕೃಷ್ಣಾ ನದಿಯ ಸೇತುವೆ ಸೋಮವಾರ ಬೆಳಿಗ್ಗೆ ಜಲಾವೃತವಾಗಿದೆ</strong></em></figcaption></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>