ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿ.ಎಂ ಸಂತ್ರಸ್ತರ ನಿಧಿಗೆ ₹ 72,000 ಸಂಬಳ ನೀಡಿದ ಶಾಸಕ ಅನಿಲ ಬೆನಕೆ

Last Updated 13 ಆಗಸ್ಟ್ 2019, 9:19 IST
ಅಕ್ಷರ ಗಾತ್ರ

ಬೆಳಗಾವಿ: ‘ಪ್ರವಾಹ ಸಂತ್ರಸ್ತರಿಗೆ ಪರಿಹಾರ ಕಾಮಗಾರಿಗಳನ್ನು ಕೈಗೊಳ್ಳಲು ಮುಖ್ಯಮಂತ್ರಿ ಅವರ ಪರಿಹಾರ ನಿಧಿಗೆ ನನ್ನ ಎರಡು ತಿಂಗಳ ಸಂಬಳ ₹ 72,000 ನೀಡಿದ್ದೇನೆ’ ಎಂದು ಬೆಳಗಾವಿ ಉತ್ತರ ಶಾಸಕ ಅನಿಲ ಬೆನಕೆ ಹೇಳಿದರು.

ಇಲ್ಲಿನ ತಮ್ಮ ಕಚೇರಿಯಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನನಗೆ ಪ್ರತಿ ತಿಂಗಳು ಸರ್ಕಾರ ₹ 36,000 ಸಂಬಳ ನೀಡುತ್ತದೆ. ಜುಲೈ ಹಾಗೂ ಆಗಸ್ಟ್‌ ಎರಡು ತಿಂಗಳ ಸಂಬಳವನ್ನು ಪರಿಹಾರ ನಿಧಿಗೆ ನೀಡಿದ್ದೇನೆ’ ಎಂದು ತಿಳಿಸಿದರು.

₹100 ಕೋಟಿಗೆ ಮನವಿ:‘ಬೆಳಗಾವಿಯಲ್ಲಿ ವಾಡಿಕೆ ಮಳೆಗಿಂತ ಎರಡು ಪಟ್ಟುಹೆಚ್ಚು ಮಳೆಯಾಗಿದೆ. ನೂರಾರು ಮನೆಗಳು ಹಾನಿಗೊಳಗಾಗಿವೆ. ರಸ್ತೆಗಳು, ಚರಂಡಿಗಳು ಕೆಟ್ಟುಹೋಗಿವೆ. ಇವುಗಳನ್ನೆಲ್ಲ ದುರಸ್ತಿಪಡಿಸಲು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ₹ 100 ಕೋಟಿ ನೀಡಬೇಕು’ ಎಂದು ಕೋರಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT