ಬೆಳಗಾವಿ, ಖಾನಾಪುರವನ್ನು ಬರಪೀಡಿತ ತಾಲ್ಲೂಕುಗಳ ಪಟ್ಟಿಯಿಂದ ಕೈಬಿಟ್ಟಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಸತೀಶ, ‘ಕೇಂದ್ರ ಸರ್ಕಾರದ ಮಾರ್ಗಸೂಚಿ ಪ್ರಕಾರ, ಅವು ಬರಪೀಡಿತ ತಾಲ್ಲೂಕುಗಳ ಪಟ್ಟಿಗೆ ಸೇರಿಲ್ಲ. ಬರದ ಸ್ಥಿತಿ ಅವಲೋಕಿಸಲು ಅವರು ಹಳೆಯ ಮಾನದಂಡಗಳನ್ನೇ ಅನುಸರಿಸುತ್ತಿದ್ದಾರೆ. ಇದರಿಂದಾಗಿ ರೈತರು ಸಂಕಷ್ಟಕ್ಕೆ ಸಿಲುಕುತ್ತಿದ್ದಾರೆ. ಹಾಗಾಗಿ ಆ ಮಾರ್ಗಸೂಚಿ ಬದಲಿಸಬೇಕೆಂಬ ಕೂಗು ಇದೆ. ಆದರೆ, ಎರಡೂ ತಾಲ್ಲೂಕುಗಳ ರೈತರಿಗೆ ಜಿಲ್ಲಾಡಳಿತದಿಂದ ಸಹಾಯ ಮಾಡುತ್ತೇವೆ’ ಎಂದರು.