<p><strong>ಬೆಳಗಾವಿ:</strong> ‘ರಾಜ್ಯ ಸರ್ಕಾರ ವಿವಿಧ ಇಲಾಖೆಗಳಲ್ಲಿ ಗುತ್ತಿಗೆದಾರರ ₹37 ಸಾವಿರ ಕೋಟಿ ಬಿಲ್ ಬಾಕಿ ಉಳಿಸಿಕೊಂಡಿದೆ. ಇದನ್ನು ತಕ್ಷಣ ಪಾವತಿಸದಿದ್ದರೆ ಎಲ್ಲ ಕಾಮಗಾರಿಗಳನ್ನು ಸ್ಥಗಿತಗೊಳಿಸಲಾಗುವುದು. ಏಪ್ರಿಲ್ ನಂತರ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಕುಟುಂಬ ಸಮೇತ ಅನಿರ್ದಿಷ್ಟಾವಧಿ ಧರಣಿ ನಡೆಸಲಾಗುವುದು’ ಎಂದು ರಾಜ್ಯ ಕಾರ್ಯನಿರತ ಗುತ್ತಿಗೆದಾರರ ಸಂಘದ ಅಧ್ಯಕ್ಷ ಆರ್.ಮಂಜುನಾಥ್ ಎಚ್ಚರಿಕೆ ನೀಡಿದರು.</p><p>ಜಿಲ್ಲಾ ಕಾರ್ಯನಿರತ ಗುತ್ತಿಗೆದಾರರ ಸಂಘದಿಂದ ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ರಾಜ್ಯದಲ್ಲಿ ಮೂರು ವರ್ಷಗಳಿಂದ ಯಾವುದೇ ಕಾಮಗಾರಿಯ ಬಿಲ್ ನೀಡಿಲ್ಲ. ಬೆಳಗಾವಿ ಜಿಲ್ಲೆಯಲ್ಲಿಯೇ ₹3,458 ಕೋಟಿ ಬಾಕಿ ಉಳಿದಿದೆ. ನಾವು ನಮ್ಮ ಆಸ್ತಿಗಳನ್ನು ಅಡವಿಟ್ಟು ಕಾಮಗಾರಿಗಳನ್ನು ಮುಗಿಸಿದ್ದೇವೆ. ಮಾಡಿದ ಕೆಲಸಕ್ಕೆ ಕೂಲಿ ಕೇಳುತ್ತಿದ್ದೇವೆ’ ಎಂದರು.</p><p>‘ಬಾಕಿ ಬಿಲ್ ನೀಡುವಂತೆ ಈಗಾಗಲೇ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರಿಗೆ ಮನವರಿಕೆ ಮಾಡಿದ್ದೇವೆ. ಆದರೆ, ಇದೂವರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಒಂದು ಸಭೆಯನ್ನೂ ಕರೆಯುವ ಸೌಜನ್ಯ ತೋರಿಸಿಲ್ಲ’ ಎಂದು ದೂರಿದರು.</p><p>‘ಬಿಲ್ ಬಾಕಿ ಉಳಿಯಲು ಹಿಂದಿನ ಸರ್ಕಾರ ಕಾರಣ ಎಂದು ನೆಪ ಹೇಳಲಾಗುತ್ತಿದೆ. ಕಾಮಗಾರಿ ಯಾವಾಗ ನಡೆದಿದ್ದರೂ ಪ್ರಸ್ತುತ ಸರ್ಕಾರವೇ ಅವುಗಳ ಬಿಲ್ ಬಾಕಿ ಮಾಡುವುದು ಜವಾಬ್ದಾರಿ’ ಎಂದೂ ಹೇಳಿದರು.</p><p>‘ಸರ್ಕಾರಗಳ ಈ ನಡೆಯಿಂದ ಬೇಸರ ಉಂಟಾಗಿದೆ. ರಾಜ್ಯದಾದ್ಯಂತ ಸುಮಾರು 35 ಸಾವಿರ ಗುತ್ತಿಗೆದಾರರು ತಮ್ಮ ಕಾಮಗಾರಿಗಳನ್ನು ಸ್ಥಗಿತಗೊಳಿಸಿ ಹೋರಾಟಕ್ಕೆ ಇಳಿಯಲಿದ್ದಾರೆ. ಮುಖ್ಯಮಂತ್ರಿ ಬಜೆಟ್ ಮಂಡಿಸುವ ಮುನ್ನವೇ ಗುತ್ತಿಗೆದಾರರ ಬಿಲ್ ಕುರಿತಾದ ಸ್ಪಷ್ಟ ಘೋಷಣೆ ಮಾಡಬೇಕು’ ಎಂದೂ ಆಗ್ರಹಿಸಿದರು.</p><p>ಸಂಘದ ಉಪಾಧ್ಯಕ್ಷ ಎಂ.ಕೆ. ಮುಲ್ಲಾ ಹಾಗೂ ಜಿಲ್ಲಾ ಘಟಕದ ಪದಾಧಿಕಾರಿಗಳು ಇದ್ದರು. </p>.<div><blockquote>ಈ ಹಿಂದಿನ ಸರ್ಕಾರದಂತೆ ಪ್ರಸಕ್ತ ಕಾಂಗ್ರೆಸ್ ಸರ್ಕಾರದಲ್ಲೂ ಬಿಲ್ ಪಾವತಿಗೆ ಕಮಿಷನ್ ನಿಗದಿ ಮಾಡಲಾಗಿದೆ. ವಿಳಂಬಕ್ಕೆ ಇದೂ ಕೂಡ ಕಾರಣ </blockquote><span class="attribution">ಆರ್.ಮಂಜುನಾಥ್, ಅಧ್ಯಕ್ಷ, ರಾಜ್ಯ ಕಾರ್ಯನಿರತ ಗುತ್ತಿಗೆದಾರರ ಸಂಘ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ‘ರಾಜ್ಯ ಸರ್ಕಾರ ವಿವಿಧ ಇಲಾಖೆಗಳಲ್ಲಿ ಗುತ್ತಿಗೆದಾರರ ₹37 ಸಾವಿರ ಕೋಟಿ ಬಿಲ್ ಬಾಕಿ ಉಳಿಸಿಕೊಂಡಿದೆ. ಇದನ್ನು ತಕ್ಷಣ ಪಾವತಿಸದಿದ್ದರೆ ಎಲ್ಲ ಕಾಮಗಾರಿಗಳನ್ನು ಸ್ಥಗಿತಗೊಳಿಸಲಾಗುವುದು. ಏಪ್ರಿಲ್ ನಂತರ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಕುಟುಂಬ ಸಮೇತ ಅನಿರ್ದಿಷ್ಟಾವಧಿ ಧರಣಿ ನಡೆಸಲಾಗುವುದು’ ಎಂದು ರಾಜ್ಯ ಕಾರ್ಯನಿರತ ಗುತ್ತಿಗೆದಾರರ ಸಂಘದ ಅಧ್ಯಕ್ಷ ಆರ್.ಮಂಜುನಾಥ್ ಎಚ್ಚರಿಕೆ ನೀಡಿದರು.</p><p>ಜಿಲ್ಲಾ ಕಾರ್ಯನಿರತ ಗುತ್ತಿಗೆದಾರರ ಸಂಘದಿಂದ ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ರಾಜ್ಯದಲ್ಲಿ ಮೂರು ವರ್ಷಗಳಿಂದ ಯಾವುದೇ ಕಾಮಗಾರಿಯ ಬಿಲ್ ನೀಡಿಲ್ಲ. ಬೆಳಗಾವಿ ಜಿಲ್ಲೆಯಲ್ಲಿಯೇ ₹3,458 ಕೋಟಿ ಬಾಕಿ ಉಳಿದಿದೆ. ನಾವು ನಮ್ಮ ಆಸ್ತಿಗಳನ್ನು ಅಡವಿಟ್ಟು ಕಾಮಗಾರಿಗಳನ್ನು ಮುಗಿಸಿದ್ದೇವೆ. ಮಾಡಿದ ಕೆಲಸಕ್ಕೆ ಕೂಲಿ ಕೇಳುತ್ತಿದ್ದೇವೆ’ ಎಂದರು.</p><p>‘ಬಾಕಿ ಬಿಲ್ ನೀಡುವಂತೆ ಈಗಾಗಲೇ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರಿಗೆ ಮನವರಿಕೆ ಮಾಡಿದ್ದೇವೆ. ಆದರೆ, ಇದೂವರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಒಂದು ಸಭೆಯನ್ನೂ ಕರೆಯುವ ಸೌಜನ್ಯ ತೋರಿಸಿಲ್ಲ’ ಎಂದು ದೂರಿದರು.</p><p>‘ಬಿಲ್ ಬಾಕಿ ಉಳಿಯಲು ಹಿಂದಿನ ಸರ್ಕಾರ ಕಾರಣ ಎಂದು ನೆಪ ಹೇಳಲಾಗುತ್ತಿದೆ. ಕಾಮಗಾರಿ ಯಾವಾಗ ನಡೆದಿದ್ದರೂ ಪ್ರಸ್ತುತ ಸರ್ಕಾರವೇ ಅವುಗಳ ಬಿಲ್ ಬಾಕಿ ಮಾಡುವುದು ಜವಾಬ್ದಾರಿ’ ಎಂದೂ ಹೇಳಿದರು.</p><p>‘ಸರ್ಕಾರಗಳ ಈ ನಡೆಯಿಂದ ಬೇಸರ ಉಂಟಾಗಿದೆ. ರಾಜ್ಯದಾದ್ಯಂತ ಸುಮಾರು 35 ಸಾವಿರ ಗುತ್ತಿಗೆದಾರರು ತಮ್ಮ ಕಾಮಗಾರಿಗಳನ್ನು ಸ್ಥಗಿತಗೊಳಿಸಿ ಹೋರಾಟಕ್ಕೆ ಇಳಿಯಲಿದ್ದಾರೆ. ಮುಖ್ಯಮಂತ್ರಿ ಬಜೆಟ್ ಮಂಡಿಸುವ ಮುನ್ನವೇ ಗುತ್ತಿಗೆದಾರರ ಬಿಲ್ ಕುರಿತಾದ ಸ್ಪಷ್ಟ ಘೋಷಣೆ ಮಾಡಬೇಕು’ ಎಂದೂ ಆಗ್ರಹಿಸಿದರು.</p><p>ಸಂಘದ ಉಪಾಧ್ಯಕ್ಷ ಎಂ.ಕೆ. ಮುಲ್ಲಾ ಹಾಗೂ ಜಿಲ್ಲಾ ಘಟಕದ ಪದಾಧಿಕಾರಿಗಳು ಇದ್ದರು. </p>.<div><blockquote>ಈ ಹಿಂದಿನ ಸರ್ಕಾರದಂತೆ ಪ್ರಸಕ್ತ ಕಾಂಗ್ರೆಸ್ ಸರ್ಕಾರದಲ್ಲೂ ಬಿಲ್ ಪಾವತಿಗೆ ಕಮಿಷನ್ ನಿಗದಿ ಮಾಡಲಾಗಿದೆ. ವಿಳಂಬಕ್ಕೆ ಇದೂ ಕೂಡ ಕಾರಣ </blockquote><span class="attribution">ಆರ್.ಮಂಜುನಾಥ್, ಅಧ್ಯಕ್ಷ, ರಾಜ್ಯ ಕಾರ್ಯನಿರತ ಗುತ್ತಿಗೆದಾರರ ಸಂಘ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>