<p><strong>ಚನ್ನಮ್ಮನ ಕಿತ್ತೂರು (ಬೆಳಗಾವಿ ಜಿಲ್ಲೆ):</strong> ‘ಸ್ವಾತಂತ್ರ್ಯ ಪಡೆಯಲು ರಾಣಿ ಚನ್ನಮ್ಮ ನಡೆಸಿದ ಹೋರಾಟ ಮಹತ್ವದ್ದಾಗಿದ್ದು, ಇದು ದೇಶದ ಉಳಿದ ಭಾಗಕ್ಕೂ ಪ್ರೇರಣೆಯಾಯಿತು’ ಎಂದು ರಾಜ್ಯಪಾಲ ಥಾವರಚಂದ್ ಗೆಹಲೋತ್ ಅಭಿಪ್ರಾಯಪಟ್ಟರು.</p>.<p>ಇಲ್ಲಿಯ ಕೋಟೆ ವೀಕ್ಷಿಸಲು ಮಂಗಳವಾರ ಬಂದಿದ್ದ ವೇಳೆ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.</p>.<p>‘1996ರಲ್ಲಿ ಸಂಸದನಾಗಿದ್ದಾಗ ಒಮ್ಮೆ ದೇಶದ ಸ್ವಾತಂತ್ರ್ಯ ಹೋರಾಟಗಾರರ ಬಗ್ಗೆ ಲೋಕಸಭೆಯಲ್ಲಿ ಚರ್ಚೆ ನಡೆಯಿತು. ರಾಣಿ ಚನ್ನಮ್ಮ, ಝಾನ್ಸಿ ರಾಣಿ ಲಕ್ಷ್ಮೀಬಾಯಿ ಮೊದಲಾದ ಅನೇಕ ಮಹಿಳೆಯರು ಮತ್ತು ಪುರುಷ ಹೋರಾಟಗಾರರ ಉಲ್ಲೇಖವಾಗುತ್ತಿತ್ತು. ಉತ್ತರದಲ್ಲಿ ಝಾನ್ಸಿ ರಾಣಿಯ ಪ್ರತಿಮೆ ಮತ್ತು ಕೋಟೆ ವೀಕ್ಷಿಸಿದ್ದೆ. ನನ್ನ ಸೌಭಾಗ್ಯ ಎನ್ನುವಂತೆ ಕರ್ನಾಟಕದ ರಾಜ್ಯಪಾಲನಾಗಿ ಬಂದೆ. ಅಂತರರಾಷ್ಟ್ರೀಯ ಮಹಿಳಾ ದಿನದಂದು ಕಿತ್ತೂರು ಚನ್ನಮ್ಮನ ಕೋಟೆ, ಮೂರ್ತಿ ವೀಕ್ಷಿಸುವ ಭಾಗ್ಯ ಸಿಕ್ಕಿದೆ’ ಎಂದು ಸಂತಸ ವ್ಯಕ್ತಪಡಿಸಿದರು.</p>.<p>‘ಹೋರಾಟಗಾರ ತ್ಯಾಗದಿಂದಾಗಿ ಸಿಕ್ಕ ಸ್ವಾತಂತ್ರ್ಯ ಸದೃಢವಾಗಿರುತ್ತದೆ, ಹೆಚ್ಚು ಬಲಯುತವಾಗುತ್ತಾ ಹೋಗುತ್ತದೆ’ ಎಂದೂ ಅವರು ಹೇಳಿದರು.</p>.<p>ಇದಕ್ಕೂ ಮೊದಲು ರಾಣಿ ಚನ್ನಮ್ಮನ ಅಶ್ವಾರೂಢ ಪ್ರತಿಮೆಗೆ ರಾಜ್ಯಪಾಲರು ಮಾಲಾರ್ಪಣೆ ಗೌರವ ಸಲ್ಲಿಸಿದರು. ಬಿಜೆಪಿ ಮಹಿಳಾ ಕಾರ್ಯಕರ್ತೆಯರು ಹೆಚ್ಚಿನ ಸಂಖ್ಯೆಯಲ್ಲಿ ಹಾಜರಿದ್ದರು. ರಾಜ್ಯಪಾಲರು ಅಲ್ಲಿ ಛಾಯಾಚಿತ್ರವನ್ನು ತೆಗೆಸಿಕೊಂಡರು.</p>.<p>ತಮ್ಮ ಎಡಭಾಗದಲ್ಲಿ ಹೆಚ್ಚು ಮಹಿಳೆಯರು ಇರುವುದನ್ನು ಗಮನಿಸಿ, ‘ಮಹಿಳಾವೊಂ ಜಾದಾ ಹೈ; ಇದರ್ ಫೋಟೊ ಕೀಂಚನಾ’ ಎಂದು ಫೋಟೊಗ್ರಾಫರ್ಗೆ ಸಲಹೆಯನ್ನೂ ನೀಡಿದರು.</p>.<p>ಕೋಟೆ ಅವಶೇಷ, ವಸ್ತುಸಂಗ್ರಹಾಲಯ ವೀಕ್ಷಣೆ ಮಾಡಿ ಅಲ್ಲಿಯ ಸಂದರ್ಶಕರ ಪುಸ್ತಕದಲ್ಲಿ ತಮ್ಮ ಅಭಿಪ್ರಾಯ ದಾಖಲಿಸಿದರು.</p>.<p>ಕಲ್ಮಠದ ಮಡಿವಾಳ ರಾಜಯೋಗೀಂದ್ರ ಸ್ವಾಮೀಜಿ, ನಿಚ್ಚಣಕಿಯ ಪಂಚಾಕ್ಷರಿ ಸ್ವಾಮೀಜಿ, ಶಾಸಕ ಮಹಾಂತೇಶ ದೊಡ್ಡಗೌಡರ, ಉಪವಿಭಾಗಾಧಿಕಾರಿ ಶಶಿಧರ ಬಗಲಿ, ತಹಶೀಲ್ದಾರ್ ಸೋಮಲಿಂಗಪ್ಪ ಹಾಲಗಿ, ತಾಲ್ಲೂಕು ಪಂಚಾಯ್ತಿ ಇಒ ಸುಭಾಸ ಸಂಪಗಾಂವಿ, ಮುಖ್ಯಾಧಿಕಾರಿ ಪ್ರಕಾಶ ಮಠದ, ಸಿಪಿಐ ಮಹಾಂತೇಶ ಹೊಸಪೇಟ, ಸಹಾಯಕ ಕ್ಯೂರೇಟರ್ ರಾಘವೇಂದ್ರ, ಬಸನಗೌಡ ಸಿದ್ರಾಮನಿ, ಉಳವಪ್ಪ ಉಳ್ಳೇಗಡ್ಡಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚನ್ನಮ್ಮನ ಕಿತ್ತೂರು (ಬೆಳಗಾವಿ ಜಿಲ್ಲೆ):</strong> ‘ಸ್ವಾತಂತ್ರ್ಯ ಪಡೆಯಲು ರಾಣಿ ಚನ್ನಮ್ಮ ನಡೆಸಿದ ಹೋರಾಟ ಮಹತ್ವದ್ದಾಗಿದ್ದು, ಇದು ದೇಶದ ಉಳಿದ ಭಾಗಕ್ಕೂ ಪ್ರೇರಣೆಯಾಯಿತು’ ಎಂದು ರಾಜ್ಯಪಾಲ ಥಾವರಚಂದ್ ಗೆಹಲೋತ್ ಅಭಿಪ್ರಾಯಪಟ್ಟರು.</p>.<p>ಇಲ್ಲಿಯ ಕೋಟೆ ವೀಕ್ಷಿಸಲು ಮಂಗಳವಾರ ಬಂದಿದ್ದ ವೇಳೆ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.</p>.<p>‘1996ರಲ್ಲಿ ಸಂಸದನಾಗಿದ್ದಾಗ ಒಮ್ಮೆ ದೇಶದ ಸ್ವಾತಂತ್ರ್ಯ ಹೋರಾಟಗಾರರ ಬಗ್ಗೆ ಲೋಕಸಭೆಯಲ್ಲಿ ಚರ್ಚೆ ನಡೆಯಿತು. ರಾಣಿ ಚನ್ನಮ್ಮ, ಝಾನ್ಸಿ ರಾಣಿ ಲಕ್ಷ್ಮೀಬಾಯಿ ಮೊದಲಾದ ಅನೇಕ ಮಹಿಳೆಯರು ಮತ್ತು ಪುರುಷ ಹೋರಾಟಗಾರರ ಉಲ್ಲೇಖವಾಗುತ್ತಿತ್ತು. ಉತ್ತರದಲ್ಲಿ ಝಾನ್ಸಿ ರಾಣಿಯ ಪ್ರತಿಮೆ ಮತ್ತು ಕೋಟೆ ವೀಕ್ಷಿಸಿದ್ದೆ. ನನ್ನ ಸೌಭಾಗ್ಯ ಎನ್ನುವಂತೆ ಕರ್ನಾಟಕದ ರಾಜ್ಯಪಾಲನಾಗಿ ಬಂದೆ. ಅಂತರರಾಷ್ಟ್ರೀಯ ಮಹಿಳಾ ದಿನದಂದು ಕಿತ್ತೂರು ಚನ್ನಮ್ಮನ ಕೋಟೆ, ಮೂರ್ತಿ ವೀಕ್ಷಿಸುವ ಭಾಗ್ಯ ಸಿಕ್ಕಿದೆ’ ಎಂದು ಸಂತಸ ವ್ಯಕ್ತಪಡಿಸಿದರು.</p>.<p>‘ಹೋರಾಟಗಾರ ತ್ಯಾಗದಿಂದಾಗಿ ಸಿಕ್ಕ ಸ್ವಾತಂತ್ರ್ಯ ಸದೃಢವಾಗಿರುತ್ತದೆ, ಹೆಚ್ಚು ಬಲಯುತವಾಗುತ್ತಾ ಹೋಗುತ್ತದೆ’ ಎಂದೂ ಅವರು ಹೇಳಿದರು.</p>.<p>ಇದಕ್ಕೂ ಮೊದಲು ರಾಣಿ ಚನ್ನಮ್ಮನ ಅಶ್ವಾರೂಢ ಪ್ರತಿಮೆಗೆ ರಾಜ್ಯಪಾಲರು ಮಾಲಾರ್ಪಣೆ ಗೌರವ ಸಲ್ಲಿಸಿದರು. ಬಿಜೆಪಿ ಮಹಿಳಾ ಕಾರ್ಯಕರ್ತೆಯರು ಹೆಚ್ಚಿನ ಸಂಖ್ಯೆಯಲ್ಲಿ ಹಾಜರಿದ್ದರು. ರಾಜ್ಯಪಾಲರು ಅಲ್ಲಿ ಛಾಯಾಚಿತ್ರವನ್ನು ತೆಗೆಸಿಕೊಂಡರು.</p>.<p>ತಮ್ಮ ಎಡಭಾಗದಲ್ಲಿ ಹೆಚ್ಚು ಮಹಿಳೆಯರು ಇರುವುದನ್ನು ಗಮನಿಸಿ, ‘ಮಹಿಳಾವೊಂ ಜಾದಾ ಹೈ; ಇದರ್ ಫೋಟೊ ಕೀಂಚನಾ’ ಎಂದು ಫೋಟೊಗ್ರಾಫರ್ಗೆ ಸಲಹೆಯನ್ನೂ ನೀಡಿದರು.</p>.<p>ಕೋಟೆ ಅವಶೇಷ, ವಸ್ತುಸಂಗ್ರಹಾಲಯ ವೀಕ್ಷಣೆ ಮಾಡಿ ಅಲ್ಲಿಯ ಸಂದರ್ಶಕರ ಪುಸ್ತಕದಲ್ಲಿ ತಮ್ಮ ಅಭಿಪ್ರಾಯ ದಾಖಲಿಸಿದರು.</p>.<p>ಕಲ್ಮಠದ ಮಡಿವಾಳ ರಾಜಯೋಗೀಂದ್ರ ಸ್ವಾಮೀಜಿ, ನಿಚ್ಚಣಕಿಯ ಪಂಚಾಕ್ಷರಿ ಸ್ವಾಮೀಜಿ, ಶಾಸಕ ಮಹಾಂತೇಶ ದೊಡ್ಡಗೌಡರ, ಉಪವಿಭಾಗಾಧಿಕಾರಿ ಶಶಿಧರ ಬಗಲಿ, ತಹಶೀಲ್ದಾರ್ ಸೋಮಲಿಂಗಪ್ಪ ಹಾಲಗಿ, ತಾಲ್ಲೂಕು ಪಂಚಾಯ್ತಿ ಇಒ ಸುಭಾಸ ಸಂಪಗಾಂವಿ, ಮುಖ್ಯಾಧಿಕಾರಿ ಪ್ರಕಾಶ ಮಠದ, ಸಿಪಿಐ ಮಹಾಂತೇಶ ಹೊಸಪೇಟ, ಸಹಾಯಕ ಕ್ಯೂರೇಟರ್ ರಾಘವೇಂದ್ರ, ಬಸನಗೌಡ ಸಿದ್ರಾಮನಿ, ಉಳವಪ್ಪ ಉಳ್ಳೇಗಡ್ಡಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>