<p><strong>ಬೆಳಗಾವಿ</strong>: ಕರ್ನಾಟಕ– ಮಹಾರಾಷ್ಟ್ರ ಗಡಿ ಭಾಗದ ಜನಜೀವನ ಸುಧಾರಣೆ ಹಾಗೂ ಮೂಲ ಸಮಸ್ಯೆಗಳ ನಿವಾರಣೆಗೆ ಚರ್ಚಿಸಲು, ಶುಕ್ರವಾರ ಆಯೋಜಿಸಿದ ‘ಸಮನ್ವಯ’ ಸಭೆಯಲ್ಲಿ ಪಾಲ್ಗೊಳ್ಳಲು ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ಕೊಲ್ಹಾಪುರ ತಲುಪಿದರು.</p>.<p>ಗೆಹಲೋತ್ ಅವರನ್ನು ಮಹಾರಾಷ್ಟ್ರದ ರಾಜ್ಯಪಾಲ ಭಗತ್ ಸಿಂಗ್ ಕೊಶಿಯಾರಿ ಅವರು ಬರಮಾಡಿಕೊಂಡರು. ನಂತರ ಅವರು ಕೊಲ್ಹಾಪುರದ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದರು. ದೇವಸ್ಥಾನದ ವತಿಯಿಂದ ಗೆಹಲೋತ್ ದಂಪತಿಯನ್ನು ಸನ್ಮಾನಿಸಲಾಯಿತು.</p>.<p>ಈ ಸಭೆಯಲ್ಲಿ ಬೆಳಗಾವಿ, ವಿಜಯಪುರ, ಕಲಬುರಗಿ ಹಾಗೂ ಬೀದರ್ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಕೂಡ ಪಾಲ್ಗೊಂಡಿದ್ದಾರೆ. ಗಡಿ ವಿವಾದದ ಹೊರತಾಗಿ ಈ ಭಾಗದ ಕುಡಿಯುವ ನೀರು, ನೀರಾವರಿ, ರಸ್ತೆ, ಶೈಕ್ಷಣಿಕ ಸಮಸ್ಯೆಗಳ ಚರ್ಚೆ, ಅಪರಾಧ ಕೃತ್ಯಗಳ ನಿಯಂತ್ರಣ ಸಂಬಂಧ ಚರ್ಚೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ</strong>: ಕರ್ನಾಟಕ– ಮಹಾರಾಷ್ಟ್ರ ಗಡಿ ಭಾಗದ ಜನಜೀವನ ಸುಧಾರಣೆ ಹಾಗೂ ಮೂಲ ಸಮಸ್ಯೆಗಳ ನಿವಾರಣೆಗೆ ಚರ್ಚಿಸಲು, ಶುಕ್ರವಾರ ಆಯೋಜಿಸಿದ ‘ಸಮನ್ವಯ’ ಸಭೆಯಲ್ಲಿ ಪಾಲ್ಗೊಳ್ಳಲು ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ಕೊಲ್ಹಾಪುರ ತಲುಪಿದರು.</p>.<p>ಗೆಹಲೋತ್ ಅವರನ್ನು ಮಹಾರಾಷ್ಟ್ರದ ರಾಜ್ಯಪಾಲ ಭಗತ್ ಸಿಂಗ್ ಕೊಶಿಯಾರಿ ಅವರು ಬರಮಾಡಿಕೊಂಡರು. ನಂತರ ಅವರು ಕೊಲ್ಹಾಪುರದ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದರು. ದೇವಸ್ಥಾನದ ವತಿಯಿಂದ ಗೆಹಲೋತ್ ದಂಪತಿಯನ್ನು ಸನ್ಮಾನಿಸಲಾಯಿತು.</p>.<p>ಈ ಸಭೆಯಲ್ಲಿ ಬೆಳಗಾವಿ, ವಿಜಯಪುರ, ಕಲಬುರಗಿ ಹಾಗೂ ಬೀದರ್ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಕೂಡ ಪಾಲ್ಗೊಂಡಿದ್ದಾರೆ. ಗಡಿ ವಿವಾದದ ಹೊರತಾಗಿ ಈ ಭಾಗದ ಕುಡಿಯುವ ನೀರು, ನೀರಾವರಿ, ರಸ್ತೆ, ಶೈಕ್ಷಣಿಕ ಸಮಸ್ಯೆಗಳ ಚರ್ಚೆ, ಅಪರಾಧ ಕೃತ್ಯಗಳ ನಿಯಂತ್ರಣ ಸಂಬಂಧ ಚರ್ಚೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>