ಈ ಸಭೆಯಲ್ಲಿ ಬೆಳಗಾವಿ, ವಿಜಯಪುರ, ಕಲಬುರಗಿ ಹಾಗೂ ಬೀದರ್ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಕೂಡ ಪಾಲ್ಗೊಂಡಿದ್ದಾರೆ. ಗಡಿ ವಿವಾದದ ಹೊರತಾಗಿ ಈ ಭಾಗದ ಕುಡಿಯುವ ನೀರು, ನೀರಾವರಿ, ರಸ್ತೆ, ಶೈಕ್ಷಣಿಕ ಸಮಸ್ಯೆಗಳ ಚರ್ಚೆ, ಅಪರಾಧ ಕೃತ್ಯಗಳ ನಿಯಂತ್ರಣ ಸಂಬಂಧ ಚರ್ಚೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲತಿಳಿಸಿದ್ದಾರೆ.