<p><strong>ಬೆಳಗಾವಿ:</strong> ‘ಸುಪ್ರೀಂಕೋರ್ಟ್ನಲ್ಲಿ ಮಹಾರಾಷ್ಟ್ರ ಸರ್ಕಾರ ದಾಖಲಿಸಿರುವ ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಪ್ರಕರಣಕ್ಕೆ ಸಂಬಂಧಿಸಿ ರಾಜ್ಯದ ಪರ ಗಟ್ಟಿಯಾಗಿ ವಾದ ಮಂಡಿಸಲು ರಾಜ್ಯ ಸರ್ಕಾರವು ತನ್ನ ಕಾನೂನು ತಂಡ ಬಲಪಡಿಸಬೇಕು’ ಎಂದು ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಅಧ್ಯಕ್ಷ ಅಶೋಕ ಚಂದರಗಿ ಆಗ್ರಹಿಸಿದರು.</p>.ಬೆಳಗಾವಿ | ರೈತರ ಹೋರಾಟ; ಜಿಲ್ಲಾಡಳಿತಕ್ಕೆ ಐದು ದಿನಗಳ ಗಡುವು: ಮೋದಗಿ.<p>‘ಪ್ರಕರಣದ ಮುಂದಿನ ವಿಚಾರಣೆಯನ್ನು 2026ರ ಜನವರಿ 21ರಂದು ಸುಪ್ರೀಂಕೋರ್ಟ್ ನಿಗದಿಪಡಿಸಿದೆ. ಆ ವೇಳೆಗೆ ಕಾನೂನು ತಂಡಕ್ಕೆ ಮಾರ್ಗದರ್ಶನ ನೀಡಲು ತಜ್ಞರ ಸಮಿತಿಯನ್ನು ಸರ್ಕಾರ ನೇಮಿಸಬೇಕು’ ಎಂದು ಇಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು.</p><p>‘2004ರಲ್ಲಿ ಮಹಾರಾಷ್ಟ್ರ ಸುಪ್ರೀಂಕೋರ್ಟ್ನಲ್ಲಿ ದಾಖಲಿಸಿದ ಪ್ರಕರಣ ಕಳೆದ ಮೂರು ವರ್ಷಗಳಿಂದ ವಿಚಾರಣೆಗೆ ಬಂದಿರಲಿಲ್ಲ. ಆ ಪೀಠದಲ್ಲಿದ್ದ ನ್ಯಾಯಾಧೀಶರಲ್ಲಿ ಕರ್ನಾಟಕದವರೊಬ್ಬರು ವಿಚಾರಣೆಗೆ ಹಿಂದೆ ಸರಿದಿದ್ದರು. ಈಗ ಪ್ರಕರಣ ವಿಚಾರಣೆಗೆ ಬರುತ್ತಿರುವುದರಿಂದ ಸರ್ಕಾರ ಕಾನೂನು ತಂಡ ಬಲಪಡಿಸಬೇಕಿದೆ’ ಎಂದರು.</p>.ಬೆಳಗಾವಿ | ಎಂಇಎಸ್ ವಿರುದ್ಧ ಪ್ರತಿಭಟನೆ: ಕನ್ನಡ ಹೋರಾಟಗಾರರು ಪೊಲೀಸರ ವಶಕ್ಕೆ.<p>‘ಗಡಿ ವಿವಾದ ಪ್ರಕರಣದಲ್ಲಿ ವಾದ ಮಂಡಿಸಲು ಒಬ್ಬ ವಕೀಲರನ್ನು ಹೊರತುಪಡಿಸಿ, ಉಳಿದ ವಕೀಲರು ಉತ್ತರ ಭಾರತದವರಿದ್ದಾರೆ. ಹಾಗಾಗಿ ಈ ಪ್ರಕರಣದ ಸಮರ್ಥನೆಗೆ ನಾವು ರಾಜ್ಯದ ಹೆಚ್ಚಿನ ವಕೀಲರನ್ನು ಬಯಸುತ್ತೇವೆ. ಕನ್ನಡ ಸಂಘಟನೆಗಳ ಬೇಡಿಕೆ ನಂತರ ಸರ್ಕಾರವು ಕಾನೂನು ಸಚಿವ ಎಚ್.ಕೆ.ಪಾಟೀಲ ಅವರನ್ನು ಗಡಿ ಉಸ್ತುವಾರಿ ಸಚಿವರನ್ನಾಗಿ ನೇಮಿಸಿತು. ಪ್ರಸ್ತುತ ಅವರಿಗೆ ಮತ್ತೆ ಅದೇ ಜವಾಬ್ದಾರಿ ನೀಡಲಾಗಿದೆ’ ಎಂದು ತಿಳಿಸಿದರು.</p><p>‘ರಾಜ್ಯದ ಕಾನೂನು ತಂಡ ಬಲಪಡಿಸುವ ದೃಷ್ಟಿಯಿಂದ ರಾಜ್ಯ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ, ಹಿರಿಯ ವಕೀಲರಾದ ಮೋಹನ ಕಾತರಕಿ, ಅಶೋಕ ಹಾರನಹಳ್ಳಿ ಮತ್ತು ಕಪಿಲ್ ಸಿಬಲ್ ಅವರ ಸಭೆಯನ್ನು ರಾಜ್ಯ ಸರ್ಕಾರ ಕರೆಯಬೇಕು’ ಎಂದು ಆಗ್ರಹಿಸಿದರು. </p>.ಬೆಳಗಾವಿ: ಸುಗಮವಾಗಿ ನಡೆದ ಕೆ–ಸೆಟ್ ಪರೀಕ್ಷೆ .<p>‘ಕರ್ನಾಟಕ ಗಡಿ ಮತ್ತು ನದಿಗಳ ಸಂರಕ್ಷಣಾ ಆಯೋಗದ ಕಚೇರಿಯನ್ನು ಸುವರ್ಣ ವಿಧಾನಸೌಧಕ್ಕೆ ಸ್ಥಳಾಂತರಿಸಿ, ಈ ಭಾಗದ ನಿವೃತ್ತ ಐಎಎಸ್ ಅಧಿಕಾರಿಯನ್ನು ಅಧ್ಯಕ್ಷರನ್ನಾಗಿ ನೇಮಿಸಬೇಕು’ ಎಂದು ಚಂದರಗಿ ಒತ್ತಾಯಿಸಿದರು.</p><p>ಮಹಾರಾಷ್ಟ್ರ ಏಕೀಕರಣ ಸಮಿತಿ ಕರಾಳ ದಿನ ಆಚರಿಸುವುದನ್ನು ತಡೆಯಲು ಕರ್ನಾಟಕ ಹೈಕೋರ್ಟ್ನಲ್ಲಿ ಮೊಕದ್ದಮೆ ಹೂಡಿರುವ ಮಲ್ಲಪ್ಪ ಅಕ್ಷರದ, ‘ಕರಾಳ ದಿನ ಆಚರಣೆಗೆ ಎಂಇಎಸ್ಗೆ ಅವಕಾಶ ಕೊಟ್ಟಿರುವ ಜಿಲ್ಲಾಡಳಿತದ ದ್ವಂದ್ವ ನೀತಿಯನ್ನು ನ್ಯಾಯಾಲಯದ ಗಮನಕ್ಕೆ ತರುತ್ತೇನೆ’ ಎಂದರು.</p><p>ಮುಖಂಡ ಮಹಾದೇವ ತಳವಾರ, ‘ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕವು ಗಡಿಯಲ್ಲಿ ಕಾರ್ಯಕ್ರಮಗಳ ಆಯೋಜನೆ ಜತೆಗೆ, ಗಡಿಗೆ ಸಂಬಂಧಿಸಿದ ವಿದ್ಯಮಾನಗಳಿಗೂ ಪ್ರತಿಕ್ರಿಯಿಸಬೇಕು’ ಎಂದು ಆಗ್ರಹಿಸಿದರು.</p> .ಬೆಳಗಾವಿ| ಕಬ್ಬಿಗೆ ₹3,500 ದರ ನಿಗದಿಪಡಿಸಲು ಪ್ರತಿಭಟನೆ: ರೈತರು ಪೊಲೀಸ್ ವಶಕ್ಕೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ‘ಸುಪ್ರೀಂಕೋರ್ಟ್ನಲ್ಲಿ ಮಹಾರಾಷ್ಟ್ರ ಸರ್ಕಾರ ದಾಖಲಿಸಿರುವ ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಪ್ರಕರಣಕ್ಕೆ ಸಂಬಂಧಿಸಿ ರಾಜ್ಯದ ಪರ ಗಟ್ಟಿಯಾಗಿ ವಾದ ಮಂಡಿಸಲು ರಾಜ್ಯ ಸರ್ಕಾರವು ತನ್ನ ಕಾನೂನು ತಂಡ ಬಲಪಡಿಸಬೇಕು’ ಎಂದು ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಅಧ್ಯಕ್ಷ ಅಶೋಕ ಚಂದರಗಿ ಆಗ್ರಹಿಸಿದರು.</p>.ಬೆಳಗಾವಿ | ರೈತರ ಹೋರಾಟ; ಜಿಲ್ಲಾಡಳಿತಕ್ಕೆ ಐದು ದಿನಗಳ ಗಡುವು: ಮೋದಗಿ.<p>‘ಪ್ರಕರಣದ ಮುಂದಿನ ವಿಚಾರಣೆಯನ್ನು 2026ರ ಜನವರಿ 21ರಂದು ಸುಪ್ರೀಂಕೋರ್ಟ್ ನಿಗದಿಪಡಿಸಿದೆ. ಆ ವೇಳೆಗೆ ಕಾನೂನು ತಂಡಕ್ಕೆ ಮಾರ್ಗದರ್ಶನ ನೀಡಲು ತಜ್ಞರ ಸಮಿತಿಯನ್ನು ಸರ್ಕಾರ ನೇಮಿಸಬೇಕು’ ಎಂದು ಇಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು.</p><p>‘2004ರಲ್ಲಿ ಮಹಾರಾಷ್ಟ್ರ ಸುಪ್ರೀಂಕೋರ್ಟ್ನಲ್ಲಿ ದಾಖಲಿಸಿದ ಪ್ರಕರಣ ಕಳೆದ ಮೂರು ವರ್ಷಗಳಿಂದ ವಿಚಾರಣೆಗೆ ಬಂದಿರಲಿಲ್ಲ. ಆ ಪೀಠದಲ್ಲಿದ್ದ ನ್ಯಾಯಾಧೀಶರಲ್ಲಿ ಕರ್ನಾಟಕದವರೊಬ್ಬರು ವಿಚಾರಣೆಗೆ ಹಿಂದೆ ಸರಿದಿದ್ದರು. ಈಗ ಪ್ರಕರಣ ವಿಚಾರಣೆಗೆ ಬರುತ್ತಿರುವುದರಿಂದ ಸರ್ಕಾರ ಕಾನೂನು ತಂಡ ಬಲಪಡಿಸಬೇಕಿದೆ’ ಎಂದರು.</p>.ಬೆಳಗಾವಿ | ಎಂಇಎಸ್ ವಿರುದ್ಧ ಪ್ರತಿಭಟನೆ: ಕನ್ನಡ ಹೋರಾಟಗಾರರು ಪೊಲೀಸರ ವಶಕ್ಕೆ.<p>‘ಗಡಿ ವಿವಾದ ಪ್ರಕರಣದಲ್ಲಿ ವಾದ ಮಂಡಿಸಲು ಒಬ್ಬ ವಕೀಲರನ್ನು ಹೊರತುಪಡಿಸಿ, ಉಳಿದ ವಕೀಲರು ಉತ್ತರ ಭಾರತದವರಿದ್ದಾರೆ. ಹಾಗಾಗಿ ಈ ಪ್ರಕರಣದ ಸಮರ್ಥನೆಗೆ ನಾವು ರಾಜ್ಯದ ಹೆಚ್ಚಿನ ವಕೀಲರನ್ನು ಬಯಸುತ್ತೇವೆ. ಕನ್ನಡ ಸಂಘಟನೆಗಳ ಬೇಡಿಕೆ ನಂತರ ಸರ್ಕಾರವು ಕಾನೂನು ಸಚಿವ ಎಚ್.ಕೆ.ಪಾಟೀಲ ಅವರನ್ನು ಗಡಿ ಉಸ್ತುವಾರಿ ಸಚಿವರನ್ನಾಗಿ ನೇಮಿಸಿತು. ಪ್ರಸ್ತುತ ಅವರಿಗೆ ಮತ್ತೆ ಅದೇ ಜವಾಬ್ದಾರಿ ನೀಡಲಾಗಿದೆ’ ಎಂದು ತಿಳಿಸಿದರು.</p><p>‘ರಾಜ್ಯದ ಕಾನೂನು ತಂಡ ಬಲಪಡಿಸುವ ದೃಷ್ಟಿಯಿಂದ ರಾಜ್ಯ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ, ಹಿರಿಯ ವಕೀಲರಾದ ಮೋಹನ ಕಾತರಕಿ, ಅಶೋಕ ಹಾರನಹಳ್ಳಿ ಮತ್ತು ಕಪಿಲ್ ಸಿಬಲ್ ಅವರ ಸಭೆಯನ್ನು ರಾಜ್ಯ ಸರ್ಕಾರ ಕರೆಯಬೇಕು’ ಎಂದು ಆಗ್ರಹಿಸಿದರು. </p>.ಬೆಳಗಾವಿ: ಸುಗಮವಾಗಿ ನಡೆದ ಕೆ–ಸೆಟ್ ಪರೀಕ್ಷೆ .<p>‘ಕರ್ನಾಟಕ ಗಡಿ ಮತ್ತು ನದಿಗಳ ಸಂರಕ್ಷಣಾ ಆಯೋಗದ ಕಚೇರಿಯನ್ನು ಸುವರ್ಣ ವಿಧಾನಸೌಧಕ್ಕೆ ಸ್ಥಳಾಂತರಿಸಿ, ಈ ಭಾಗದ ನಿವೃತ್ತ ಐಎಎಸ್ ಅಧಿಕಾರಿಯನ್ನು ಅಧ್ಯಕ್ಷರನ್ನಾಗಿ ನೇಮಿಸಬೇಕು’ ಎಂದು ಚಂದರಗಿ ಒತ್ತಾಯಿಸಿದರು.</p><p>ಮಹಾರಾಷ್ಟ್ರ ಏಕೀಕರಣ ಸಮಿತಿ ಕರಾಳ ದಿನ ಆಚರಿಸುವುದನ್ನು ತಡೆಯಲು ಕರ್ನಾಟಕ ಹೈಕೋರ್ಟ್ನಲ್ಲಿ ಮೊಕದ್ದಮೆ ಹೂಡಿರುವ ಮಲ್ಲಪ್ಪ ಅಕ್ಷರದ, ‘ಕರಾಳ ದಿನ ಆಚರಣೆಗೆ ಎಂಇಎಸ್ಗೆ ಅವಕಾಶ ಕೊಟ್ಟಿರುವ ಜಿಲ್ಲಾಡಳಿತದ ದ್ವಂದ್ವ ನೀತಿಯನ್ನು ನ್ಯಾಯಾಲಯದ ಗಮನಕ್ಕೆ ತರುತ್ತೇನೆ’ ಎಂದರು.</p><p>ಮುಖಂಡ ಮಹಾದೇವ ತಳವಾರ, ‘ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕವು ಗಡಿಯಲ್ಲಿ ಕಾರ್ಯಕ್ರಮಗಳ ಆಯೋಜನೆ ಜತೆಗೆ, ಗಡಿಗೆ ಸಂಬಂಧಿಸಿದ ವಿದ್ಯಮಾನಗಳಿಗೂ ಪ್ರತಿಕ್ರಿಯಿಸಬೇಕು’ ಎಂದು ಆಗ್ರಹಿಸಿದರು.</p> .ಬೆಳಗಾವಿ| ಕಬ್ಬಿಗೆ ₹3,500 ದರ ನಿಗದಿಪಡಿಸಲು ಪ್ರತಿಭಟನೆ: ರೈತರು ಪೊಲೀಸ್ ವಶಕ್ಕೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>