<p><strong>ಬೆಳಗಾವಿ</strong>: ಮುಳುಗುವ ಹಡಗಿನಲ್ಲಿ ಯಾರಾದರೂ ಕೂರುತ್ತಾರೆಯೇ?– ‘ಬಿಜೆಪಿ ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ’ ಎಂಬ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಹೇಳಿಕೆಗೆ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರು ಮೇಲಿನಂತೆ ಪ್ರತಿಕ್ರಿಯಿಸಿದರು.</p>.<p>ಇಲ್ಲಿ ಪತ್ರಕರ್ತರೊಂದಿಗೆ ಮಂಗಳವಾರ ಮಾತನಾಡಿದ ಅವರು, ಕಾಂಗ್ರೆಸ್ನವರ ಮೋಸ ದಂಧೆ ನಡೆಯುವುದಿಲ್ಲ. ಇದರಿಂದಾಗಿಯೇ ಅವರು ಅಧಿಕಾರ ಕಳೆದುಕೊಂಡು ಕುಳಿತಿದ್ದಾರೆ. ಹೆಚ್ಚು ರಾಜ್ಯಗಳಲ್ಲಿ ಬಿಜೆಪಿ ಅಧಿಕಾರದಲ್ಲಿದೆ. 5 ರಾಜ್ಯಗಳ ಚುನಾವಣೆ ಮುಗಿದ ನಂತರ ಮತ್ತಷ್ಟು ಕಿತ್ತುಕೊಂಡು ಹೋಗಲಿದೆ. ಕಾಂಗ್ರೆಸ್ ಮುಕ್ತ ಭಾರತ ಆಗುತ್ತದೆ ಎಂದರು.</p>.<p>ಅಧಿಕಾರದಲ್ಲಿದ್ದಾಗ ಕುಂಭಕರ್ಣ ನಿದ್ರೆ ಮಾಡಿ ಈಗ ನೀರಾವರಿ ಯೋಜನೆಗಳ ಅನುಷ್ಠಾನಕ್ಕೆ ಪಾದಯಾತ್ರೆ ನಡೆಸಿದರೆ ಆಗುವ ಲಾಭವೇನು? ಎಂದು ಕಾಂಗ್ರೆಸ್ ನಾಯಕರನ್ನು ಛೇಡಿಸಿದರು. ಜನರಿಗೆ ಮೋಸ ಮಾಡುವ ಪಾದಯಾತ್ರೆ ನಡೆಸುತ್ತಿದ್ದಾರೆ. ಈ ಬಗ್ಗೆ ಕಾಂಗ್ರೆಸ್ ನಾಯಕರು ಉತ್ತರ ಹೇಳಲಿ ಎಂದು ಸವಾಲೆಸೆದರು.</p>.<p>ಕೃಷ್ಣಾ ಮೇಲ್ದಂಡೆ, ಮಹದಾಯಿ ಹಾಗೂ ಮೇಕೆದಾಟು ಯೋಜನೆಗಳು ನ್ಯಾಯಾಲಯದಲ್ಲಿವೆ. ಅಲ್ಲಿಂದಲೇ ನ್ಯಾಯ ಪಡೆದುಕೊಳ್ಳಲು ನಾವು ಪ್ರಯತ್ನಿಸುತ್ತಿದ್ದೇವೆ. ಹೀಗಾಗಿ ಅನುಷ್ಠಾನಕ್ಕೆ ಸಮಯ ಬೇಕಾಗುತ್ತದೆ ಎಂದು ಪ್ರತಿಕ್ರಿಯಿಸಿದರು.</p>.<p>ಕೃಷ್ಣಾ ಮೇಲ್ದಂಡೆ ಯೋಜನೆಗಾಗಿ ಕಾಂಗ್ರೆಸ್ನವರು 2013ರ ಜ.7ರಿಂದ ಜ.14ರವರೆಗೆ ಹೊಸಪೇಟೆಯಿಂದ ಕೂಡಲಸಂಗಮದವರೆಗೆ ಪಾದಯಾತ್ರೆ (ಕಾಂಗ್ರೆಸ್ ನಡಿಗೆ ಕೃಷ್ಣೆಯ ಕಡೆಗೆ) ನಡೆಸಿದ್ದರು. ನಮಗೆ ಅಧಿಕಾರ ಕೊಡಿ, 5 ವರ್ಷಗಳಲ್ಲಿ 130 ಟಿಎಂಸಿ ನೀರನ್ನು ಬಳಸಿಕೊಂಡು 7 ಜಿಲ್ಲೆಗಳಲ್ಲಿ ನೀರಾವರಿಗೆ ಅನುಕೂಲ ಕಲ್ಪಿಸಿಕೊಡುತ್ತೇವೆ ಎಂದು ಭರವಸೆ ನೀಡಿದ್ದರು. ಆದರೆ, ಸರ್ಕಾರ ಬಂದಾಗ ನಿದ್ರೆ ಮಾಡಿ ಹೋದರು ಎಂದು ಟೀಕಿಸಿದರು.</p>.<p><a href="https://www.prajavani.net/district/vijayapura/will-work-to-bring-congress-back-in-power-at-karnataka-says-m-b-patil-905005.html" itemprop="url">ಕಾಂಗ್ರೆಸ್ ಅಧಿಕಾರಕ್ಕೆ ತರಲು ಆದ್ಯತೆ: ಎಂ.ಬಿ. ಪಾಟೀಲ್ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ</strong>: ಮುಳುಗುವ ಹಡಗಿನಲ್ಲಿ ಯಾರಾದರೂ ಕೂರುತ್ತಾರೆಯೇ?– ‘ಬಿಜೆಪಿ ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ’ ಎಂಬ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಹೇಳಿಕೆಗೆ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರು ಮೇಲಿನಂತೆ ಪ್ರತಿಕ್ರಿಯಿಸಿದರು.</p>.<p>ಇಲ್ಲಿ ಪತ್ರಕರ್ತರೊಂದಿಗೆ ಮಂಗಳವಾರ ಮಾತನಾಡಿದ ಅವರು, ಕಾಂಗ್ರೆಸ್ನವರ ಮೋಸ ದಂಧೆ ನಡೆಯುವುದಿಲ್ಲ. ಇದರಿಂದಾಗಿಯೇ ಅವರು ಅಧಿಕಾರ ಕಳೆದುಕೊಂಡು ಕುಳಿತಿದ್ದಾರೆ. ಹೆಚ್ಚು ರಾಜ್ಯಗಳಲ್ಲಿ ಬಿಜೆಪಿ ಅಧಿಕಾರದಲ್ಲಿದೆ. 5 ರಾಜ್ಯಗಳ ಚುನಾವಣೆ ಮುಗಿದ ನಂತರ ಮತ್ತಷ್ಟು ಕಿತ್ತುಕೊಂಡು ಹೋಗಲಿದೆ. ಕಾಂಗ್ರೆಸ್ ಮುಕ್ತ ಭಾರತ ಆಗುತ್ತದೆ ಎಂದರು.</p>.<p>ಅಧಿಕಾರದಲ್ಲಿದ್ದಾಗ ಕುಂಭಕರ್ಣ ನಿದ್ರೆ ಮಾಡಿ ಈಗ ನೀರಾವರಿ ಯೋಜನೆಗಳ ಅನುಷ್ಠಾನಕ್ಕೆ ಪಾದಯಾತ್ರೆ ನಡೆಸಿದರೆ ಆಗುವ ಲಾಭವೇನು? ಎಂದು ಕಾಂಗ್ರೆಸ್ ನಾಯಕರನ್ನು ಛೇಡಿಸಿದರು. ಜನರಿಗೆ ಮೋಸ ಮಾಡುವ ಪಾದಯಾತ್ರೆ ನಡೆಸುತ್ತಿದ್ದಾರೆ. ಈ ಬಗ್ಗೆ ಕಾಂಗ್ರೆಸ್ ನಾಯಕರು ಉತ್ತರ ಹೇಳಲಿ ಎಂದು ಸವಾಲೆಸೆದರು.</p>.<p>ಕೃಷ್ಣಾ ಮೇಲ್ದಂಡೆ, ಮಹದಾಯಿ ಹಾಗೂ ಮೇಕೆದಾಟು ಯೋಜನೆಗಳು ನ್ಯಾಯಾಲಯದಲ್ಲಿವೆ. ಅಲ್ಲಿಂದಲೇ ನ್ಯಾಯ ಪಡೆದುಕೊಳ್ಳಲು ನಾವು ಪ್ರಯತ್ನಿಸುತ್ತಿದ್ದೇವೆ. ಹೀಗಾಗಿ ಅನುಷ್ಠಾನಕ್ಕೆ ಸಮಯ ಬೇಕಾಗುತ್ತದೆ ಎಂದು ಪ್ರತಿಕ್ರಿಯಿಸಿದರು.</p>.<p>ಕೃಷ್ಣಾ ಮೇಲ್ದಂಡೆ ಯೋಜನೆಗಾಗಿ ಕಾಂಗ್ರೆಸ್ನವರು 2013ರ ಜ.7ರಿಂದ ಜ.14ರವರೆಗೆ ಹೊಸಪೇಟೆಯಿಂದ ಕೂಡಲಸಂಗಮದವರೆಗೆ ಪಾದಯಾತ್ರೆ (ಕಾಂಗ್ರೆಸ್ ನಡಿಗೆ ಕೃಷ್ಣೆಯ ಕಡೆಗೆ) ನಡೆಸಿದ್ದರು. ನಮಗೆ ಅಧಿಕಾರ ಕೊಡಿ, 5 ವರ್ಷಗಳಲ್ಲಿ 130 ಟಿಎಂಸಿ ನೀರನ್ನು ಬಳಸಿಕೊಂಡು 7 ಜಿಲ್ಲೆಗಳಲ್ಲಿ ನೀರಾವರಿಗೆ ಅನುಕೂಲ ಕಲ್ಪಿಸಿಕೊಡುತ್ತೇವೆ ಎಂದು ಭರವಸೆ ನೀಡಿದ್ದರು. ಆದರೆ, ಸರ್ಕಾರ ಬಂದಾಗ ನಿದ್ರೆ ಮಾಡಿ ಹೋದರು ಎಂದು ಟೀಕಿಸಿದರು.</p>.<p><a href="https://www.prajavani.net/district/vijayapura/will-work-to-bring-congress-back-in-power-at-karnataka-says-m-b-patil-905005.html" itemprop="url">ಕಾಂಗ್ರೆಸ್ ಅಧಿಕಾರಕ್ಕೆ ತರಲು ಆದ್ಯತೆ: ಎಂ.ಬಿ. ಪಾಟೀಲ್ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>