ಬೆಳಗಾವಿ ನಗರದ ಶಿವಬಸವ ನಗರದ ಅವರ ಮನೆ, ಬೆಲ್ಲದ ಬಾಗೇವಾಡಿಯ ಮನೆಯಲ್ಲೂ ಅಪಾರ ಸಂಖ್ಯೆಯ ಜನ ಸೇರಿದ್ದಾರೆ. ಸಚಿವರು ಇನ್ನಿಲ್ಲ ಎಂಬ ಸುದ್ದಿ ತಡರಾತ್ರಿ ಕಾಳ್ಗಿಚ್ಚಿನಂತೆ ಹಬ್ಬಿತು. ಜನ ತಂಡೋಪ ತಂಡವಾಗಿ ಅವರ ಮನೆಗಳ ಮುಂದೆ ಸೇರಿದರು. ಹಿರಿಯ ರಾಜಕಾರಣಿಗಳು, ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ, ಬೆಳಗಾವಿ ಕಾರಂಜಿ ಮಠದ ಗುರುಸಿದ್ಧ ಸ್ವಾಮೀಜಿ ಸೇರಿದಂತೆ ನಾಡಿನ ವಿವಿಧ ಮಠಗಳ ಪೀಠಾಧಿಪತಿಗಳು ಸಹ ಬೆಲ್ಲದ ಬಾಗೇವಾಡಿಗೆ ಧಾವಿಸಿದ್ದಾರೆ.