ಬೆಳಗಾವಿ: ಇಲ್ಲಿನ ಮಹಾನಗರ ಪಾಲಿಕೆಗೆ ಕಚೇರಿ ಆವರಣದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹಾಗೂ ವಿಧಾನಪರಿಷತ್ ಬಿಜೆಪಿ ಅಭ್ಯರ್ಥಿ ಮಹಾಂತೇಶ ಕವಟಗಿಮಠ ಮುಖಾಮುಖಿಯಾದರು.
ಶಾಸಕ ಸತೀಶ ಜಾರಕಿಹೊಳಿ ಮತ ಚಲಾಯಿಸಲು ಪಾಲಿಕೆ ಕಚೇರಿ ಆವರಣದಲ್ಲಿ ನಿಂತಿದ್ದರು. ಇದೇ ವೇಳೆ, ಕವಟಗಿಮಠ ಕುಟುಂಬ ಸಮೇತರಾಗಿ ಆಗಮಿಸಿದರು. ಈ ವೇಳೆ ಪರಸ್ಪರರು ಉಭಯ ಕುಶಲೋಪರಿ ವಿಚಾರಿಸಿದರು.