<p><strong>ಮೂಡಲಗಿ</strong>: ‘ರಾಜ್ಯದಲ್ಲಿ ಕ್ರಿಮಿನಲ್ಗಳು ಮತ್ತು ಭಯೋತ್ಪಾದಕರಿಗೆ ದಂಡನೆ ಕೊಡಬೇಕಾದ ಸರ್ಕಾರವು ರಾಜಾಶ್ರಯವನ್ನು ನೀಡುತ್ತಿರುವುದು ಗೃಹ ಇಲಾಖೆಯು ರಾಜ್ಯದ ಮರ್ಯಾದೆಯನ್ನು ಹರಾಜು ಹಾಕುತ್ತಿದೆ’ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ದೂರಿದ್ದಾರೆ.</p>.<p>ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ಐಷಾರಾಮಿ ಸವಲತ್ತುಗಳು ದೊರೆಯುತ್ತಿರುವ ಬಗ್ಗೆ ಪ್ರಕಟಣೆ ಮೂಲಕ ಪ್ರತಿಕ್ರಿಯಿಸಿದ ಅವರು, ಎನ್ಐಎಗೆ ಒಳಪಡಿಸಬೇಕು ಎಂದು ಆಗ್ರಹಿಸಿದ್ದಾರೆ.</p>.<p>‘ರಾಜ್ಯದಲ್ಲಿ ಅಪರಾಧಿಗಳು ಜೈಲಿಗೆ ಹೋದರೆ ಸಾಕು ಅವರಿಗೆ ಐಷಾರಾಮಿ ವ್ಯವಸ್ಥೆ ದೊರೆಯುತ್ತದೆ ಎನ್ನುವಂತಾಗಿದೆ. ಇಂಥ ಕೃತ್ಯಗಳು ನಡೆಯುತ್ತಿರುವುದನ್ನು ನೋಡಿಯೂ ಕಣ್ಣು ಮುಚ್ಚಿ ಕುಳಿತಿರುವ ಗೃಹ ಸಚಿವರಿಗೆ ನಾಚಿಕೆಯಾಗಬೇಕು’ ಎಂದಿದ್ದಾರೆ.</p>.<p>ರಾಜ್ಯದ ಜೈಲಿನಲ್ಲಿ ಇಂಥ ಚಟುವಟಿಕೆಗಳು ನಡೆಯುತ್ತಿರುವ ಬಗ್ಗೆ ಎನ್ಐಎಯ ಇಲ್ಲಿಯ ಬೇಹುಗಾರಿಕೆ ದಳಕ್ಕೆ 4 ತಿಂಗಳ ಹಿಂದೆ ಎಚ್ಚರಿಕೆ ನೀಡಿದ್ದಾಗ್ಯೂ ನಿರ್ಲಕ್ಷ ಮಾಡಿರುವುದರಲ್ಲಿ ಸರ್ಕಾರದ ಕೈವಾಡವಿದೆ. ಮುಖ್ಯಮಂತ್ರಿಗಳು ಮತ್ತು ಗೃಹ ಸಚಿವರು ರಾಜೀನಾಮೆ ನೀಡಬೇಕು ಮತ್ತು ಈ ಕೃತ್ಯವನ್ನು ಎನ್ಐಎಗೆ ಒಪ್ಪಿಸಬೇಕು ಎಂದು ಕಡಾಡಿ ಅವರು ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೂಡಲಗಿ</strong>: ‘ರಾಜ್ಯದಲ್ಲಿ ಕ್ರಿಮಿನಲ್ಗಳು ಮತ್ತು ಭಯೋತ್ಪಾದಕರಿಗೆ ದಂಡನೆ ಕೊಡಬೇಕಾದ ಸರ್ಕಾರವು ರಾಜಾಶ್ರಯವನ್ನು ನೀಡುತ್ತಿರುವುದು ಗೃಹ ಇಲಾಖೆಯು ರಾಜ್ಯದ ಮರ್ಯಾದೆಯನ್ನು ಹರಾಜು ಹಾಕುತ್ತಿದೆ’ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ದೂರಿದ್ದಾರೆ.</p>.<p>ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ಐಷಾರಾಮಿ ಸವಲತ್ತುಗಳು ದೊರೆಯುತ್ತಿರುವ ಬಗ್ಗೆ ಪ್ರಕಟಣೆ ಮೂಲಕ ಪ್ರತಿಕ್ರಿಯಿಸಿದ ಅವರು, ಎನ್ಐಎಗೆ ಒಳಪಡಿಸಬೇಕು ಎಂದು ಆಗ್ರಹಿಸಿದ್ದಾರೆ.</p>.<p>‘ರಾಜ್ಯದಲ್ಲಿ ಅಪರಾಧಿಗಳು ಜೈಲಿಗೆ ಹೋದರೆ ಸಾಕು ಅವರಿಗೆ ಐಷಾರಾಮಿ ವ್ಯವಸ್ಥೆ ದೊರೆಯುತ್ತದೆ ಎನ್ನುವಂತಾಗಿದೆ. ಇಂಥ ಕೃತ್ಯಗಳು ನಡೆಯುತ್ತಿರುವುದನ್ನು ನೋಡಿಯೂ ಕಣ್ಣು ಮುಚ್ಚಿ ಕುಳಿತಿರುವ ಗೃಹ ಸಚಿವರಿಗೆ ನಾಚಿಕೆಯಾಗಬೇಕು’ ಎಂದಿದ್ದಾರೆ.</p>.<p>ರಾಜ್ಯದ ಜೈಲಿನಲ್ಲಿ ಇಂಥ ಚಟುವಟಿಕೆಗಳು ನಡೆಯುತ್ತಿರುವ ಬಗ್ಗೆ ಎನ್ಐಎಯ ಇಲ್ಲಿಯ ಬೇಹುಗಾರಿಕೆ ದಳಕ್ಕೆ 4 ತಿಂಗಳ ಹಿಂದೆ ಎಚ್ಚರಿಕೆ ನೀಡಿದ್ದಾಗ್ಯೂ ನಿರ್ಲಕ್ಷ ಮಾಡಿರುವುದರಲ್ಲಿ ಸರ್ಕಾರದ ಕೈವಾಡವಿದೆ. ಮುಖ್ಯಮಂತ್ರಿಗಳು ಮತ್ತು ಗೃಹ ಸಚಿವರು ರಾಜೀನಾಮೆ ನೀಡಬೇಕು ಮತ್ತು ಈ ಕೃತ್ಯವನ್ನು ಎನ್ಐಎಗೆ ಒಪ್ಪಿಸಬೇಕು ಎಂದು ಕಡಾಡಿ ಅವರು ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>