ಬೆಳಗಾವಿ: ‘ರಾಜ್ಯದಲ್ಲಿ ಲಿಂಗಾಯತರೆಲ್ಲರೂ ಒಂದಾದರೆ ಮತ್ತು ಪಕ್ಷದಲ್ಲಿರುವವರು ಒಬ್ಬರ ಕಾಲನ್ನು ಮತ್ತೊಬ್ಬರು ಎಳೆಯುವುದನ್ನು ನಿಲ್ಲಿಸಿ ಚುನಾವಣೆಗೆ ಒಗ್ಗಟ್ಟಾಗಿ ಹೋದರೆ ಮುಂದಿನ ಬಾರಿ (2023ಕ್ಕೆ) ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುತ್ತದೆ’ ಕಾಂಗ್ರೆಸ್ ಮುಖಂಡ ಪ್ರಕಾಶ ಹುಕ್ಕೇರಿ ಹೇಳಿದರು.
ಇಲ್ಲಿ ಶುಕ್ರವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ನಾನು ದೊಡ್ಡವನು, ನೀನು ದೊಡ್ಡವನು ಎನ್ನುವುದು, ಕಾಲೆಳೆಯುವುದು ನಮ್ಮೊಳಗೆಯೇ ನಡೆದಿದೆ. ಇದು ನಿಲ್ಲಬೇಕು. ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿಗಳನ್ನು ನಮ್ಮ ಪಕ್ಷದವರೇ ಸೋಲಿಸುವ ಕೆಲಸ ಮಾಡುತ್ತಾರೆ. ಅದು ನಡೆಯಬಾರದು’ ಎಂದರು.
‘ನಾನು ನನ್ನ ಅನುಭವದ ಮಾತುಗಳನ್ನು ಹೇಳುತ್ತಿದ್ದೇನೆ’ ಎಂದುತಿಳಿಸಿದರು.