<p><strong>ಬೆಳಗಾವಿ: </strong>ಒಂದು ಕಾಲದಲ್ಲಿ ಬಿಜೆಪಿ ಪದಾಧಿಕಾರಿಗಳನ್ನು ಹಾಗೂ ಚುನಾವಣೆಯಲ್ಲಿ ಅಭ್ಯರ್ಥಿಗಳನ್ನು ಹುಡುಕಬೇಕಾದ ಪರಿಸ್ಥಿತಿ ಇತ್ತು. ಈಗ ಪೈಪೋಟಿ ಕಂಡುಬರುತ್ತಿದೆ. ಅಧಿಕಾರದ ಚುಕ್ಕಾಣಿಯನ್ನು ಹಿಡಿಯುತ್ತಿದ್ದೇವೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು.</p>.<p>ಗೋಕಾಕದಲ್ಲಿ ಭಾನುವಾರ ನಡೆದ ಬಿಜೆಪಿ ಗೋಕಾಕ ನಗರ ಹಾಗೂ ಗ್ರಾಮೀಣ ಘಟಕದ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ಬೇರೆ ಕಡೆಯವರನ್ನು ತಂದು ಇಲ್ಲಿ ನಿಲ್ಲಿಸುತ್ತಿದ್ದೆವು. ಸೋಲುತ್ತೇವೆ ಎನ್ನುವುದು ಗೊತ್ತಿತ್ತು. ಆದರೆ ಪಕ್ಷದ ಚಿಹ್ನೆ ಜನರ ಮನದಲ್ಲಿ ಅಚ್ಚೊತ್ತಬೇಕು. ಮುಂದೆಯಾದರೂ ಗೆಲ್ಲುತ್ತೇವೆ ಎಂ ವಿಶ್ವಾಸದಲ್ಲಿರುತ್ತಿದ್ದೆವು. ಆ ಕನಸು ಈಗ ನನಸಾಗಿದೆ’ ಎಂದರು.</p>.<p>‘ಜನರು ಈಗ ಸಂಪೂರ್ಣವಾಗಿ ಬಿಜೆಪಿಯನ್ನು ಒಪ್ಪಿದ್ದಾರೆ. ಹೀಗಾಗಿ ಪದಾಧಿಕಾರಿಗಳ ಕೆಲಸ ಈಗ ಸುಲಭವಾಗಿದೆ. ಮತ ಗಳಿಕೆ ಹೆಚ್ಚಾಗಬೇಕೇ ಹೊರತು ಕಡಿಮೆ ಆಗದಂತೆ ನೋಡಿಕೊಳ್ಳಬೇಕು’ ಎಂದು ಪದಾಧಿಕಾರಿಗಳಿಗೆ ಸೂಚಿಸಿದರು.</p>.<p>‘ಪಕ್ಷ, ಸರ್ಕಾರ ಹಾಗೂ ಜನರ ನಡುವೆ ಸಂಪರ್ಕ ಸೇತುವೆಯಾಗಿ ಮೋರ್ಚಾಗಳು ಕೆಲಸ ಮಾಡಬೇಕು. ಸರ್ಕಾರದ ಯೋಜನೆಗಳನ್ನು ತಿಳಿಸಿ, ಸೌಲಭ್ಯಗಳನ್ನು ಕಲ್ಪಿಸಿಕೊಡಬೇಕು’ ಎಂದು ತಿಳಿಸಿದರು.</p>.<p>‘ಯುವಕರು ಹೊಸ ನಾಯಕತ್ವವನ್ನು ಬಯಸುತ್ತಿದ್ದಾರೆ. ಹೀಗಾಗಿ ಎಲ್ಲ ವರ್ಗದಲ್ಲೂ ಯುವಕರನ್ನು ಬೆಳೆಸಲು ನಾವು ಮುಂದಾಗಬೇಕಿದೆ. ಪದಾಧಿಕಾರಿ ಹುದ್ದೆಯ ಆಯುಧವನ್ನು ಬಳಸಿಕೊಂಡು ವೈಯಕ್ತಿಕವಾಗಿ ಬೆಳೆಯುವ ಜೊತೆಗೆ ಪಕ್ಷವನ್ನೂ ಬೆಳೆಸಬೇಕು’ ಎಂದು ಸಲಹೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ: </strong>ಒಂದು ಕಾಲದಲ್ಲಿ ಬಿಜೆಪಿ ಪದಾಧಿಕಾರಿಗಳನ್ನು ಹಾಗೂ ಚುನಾವಣೆಯಲ್ಲಿ ಅಭ್ಯರ್ಥಿಗಳನ್ನು ಹುಡುಕಬೇಕಾದ ಪರಿಸ್ಥಿತಿ ಇತ್ತು. ಈಗ ಪೈಪೋಟಿ ಕಂಡುಬರುತ್ತಿದೆ. ಅಧಿಕಾರದ ಚುಕ್ಕಾಣಿಯನ್ನು ಹಿಡಿಯುತ್ತಿದ್ದೇವೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು.</p>.<p>ಗೋಕಾಕದಲ್ಲಿ ಭಾನುವಾರ ನಡೆದ ಬಿಜೆಪಿ ಗೋಕಾಕ ನಗರ ಹಾಗೂ ಗ್ರಾಮೀಣ ಘಟಕದ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ಬೇರೆ ಕಡೆಯವರನ್ನು ತಂದು ಇಲ್ಲಿ ನಿಲ್ಲಿಸುತ್ತಿದ್ದೆವು. ಸೋಲುತ್ತೇವೆ ಎನ್ನುವುದು ಗೊತ್ತಿತ್ತು. ಆದರೆ ಪಕ್ಷದ ಚಿಹ್ನೆ ಜನರ ಮನದಲ್ಲಿ ಅಚ್ಚೊತ್ತಬೇಕು. ಮುಂದೆಯಾದರೂ ಗೆಲ್ಲುತ್ತೇವೆ ಎಂ ವಿಶ್ವಾಸದಲ್ಲಿರುತ್ತಿದ್ದೆವು. ಆ ಕನಸು ಈಗ ನನಸಾಗಿದೆ’ ಎಂದರು.</p>.<p>‘ಜನರು ಈಗ ಸಂಪೂರ್ಣವಾಗಿ ಬಿಜೆಪಿಯನ್ನು ಒಪ್ಪಿದ್ದಾರೆ. ಹೀಗಾಗಿ ಪದಾಧಿಕಾರಿಗಳ ಕೆಲಸ ಈಗ ಸುಲಭವಾಗಿದೆ. ಮತ ಗಳಿಕೆ ಹೆಚ್ಚಾಗಬೇಕೇ ಹೊರತು ಕಡಿಮೆ ಆಗದಂತೆ ನೋಡಿಕೊಳ್ಳಬೇಕು’ ಎಂದು ಪದಾಧಿಕಾರಿಗಳಿಗೆ ಸೂಚಿಸಿದರು.</p>.<p>‘ಪಕ್ಷ, ಸರ್ಕಾರ ಹಾಗೂ ಜನರ ನಡುವೆ ಸಂಪರ್ಕ ಸೇತುವೆಯಾಗಿ ಮೋರ್ಚಾಗಳು ಕೆಲಸ ಮಾಡಬೇಕು. ಸರ್ಕಾರದ ಯೋಜನೆಗಳನ್ನು ತಿಳಿಸಿ, ಸೌಲಭ್ಯಗಳನ್ನು ಕಲ್ಪಿಸಿಕೊಡಬೇಕು’ ಎಂದು ತಿಳಿಸಿದರು.</p>.<p>‘ಯುವಕರು ಹೊಸ ನಾಯಕತ್ವವನ್ನು ಬಯಸುತ್ತಿದ್ದಾರೆ. ಹೀಗಾಗಿ ಎಲ್ಲ ವರ್ಗದಲ್ಲೂ ಯುವಕರನ್ನು ಬೆಳೆಸಲು ನಾವು ಮುಂದಾಗಬೇಕಿದೆ. ಪದಾಧಿಕಾರಿ ಹುದ್ದೆಯ ಆಯುಧವನ್ನು ಬಳಸಿಕೊಂಡು ವೈಯಕ್ತಿಕವಾಗಿ ಬೆಳೆಯುವ ಜೊತೆಗೆ ಪಕ್ಷವನ್ನೂ ಬೆಳೆಸಬೇಕು’ ಎಂದು ಸಲಹೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>