<p><strong>ಬೆಳಗಾವಿ: </strong>‘ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸಿದ್ದರಾಮಯ್ಯ ಸೇರಿದಂತೆ ಯಾರು ಏನೇ ಹೇಳಿದರೂ ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ. ನಮ್ಮ ಪಕ್ಷದವರು ಏನಾದರೂ ಆ ಬಗ್ಗೆ ಹೇಳಿದ್ದರೆ ಪ್ರತಿಕ್ರಿಯಿಸಬಹುದು’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು.</p>.<p>‘ಏಪ್ರಿಲ್ನಲ್ಲಿ ಮುಖ್ಯಮಂತ್ರಿ ಬದಲಾವಣೆ ಆಗಲಿದೆ. ಆ ವಿಷಯ ಆರ್ಎಸ್ಎಸ್ ಮೂಲದಿಂದ ನನಗೆ ತಿಳಿದುಬಂದಿದೆ’ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಇಲ್ಲಿ ಭಾನುವಾರ ಪ್ರತಿಕ್ರಿಯಿಸಿದ ಅವರು, ಸಿದ್ದರಾಮಯ್ಯ ಎಲ್ಲಿಂದ ಬಂದಿದ್ದಾರೆ? ಅವರೇನು ಆರ್ಎಸ್ಎಸ್ನಲ್ಲಿ ಇದ್ದವರಾ? ಅವರ ಹೇಳಿಕೆಯ ಮೂಲ ಯಾವುದು?’ ಎಂದು ಕೇಳಿದರು.</p>.<p>‘ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಜೊತೆ ಫೋನ್ ನಲ್ಲಿ ಸರಿಯಾಗಿ ಸಂಪರ್ಕ ಇಟ್ಟುಕೊಳ್ಳಲು ಅವರಿಗೆ ಹೇಳಬೇಕು. ಅವರ ನಾಯಕರ ಜೊತೆಯೇ ಸರಿಯಾಗಿ ಸಂಪರ್ಕ ಇಟ್ಟುಕೊಳ್ಳದವರ ಜೊತೆ ಆರ್ಎಸ್ಎಸ್ ನವರು ಮಾತನಾಡುತ್ತಾರೆಯೇ’ ಎಂದು ಪ್ರಶ್ನಿಸಿದರು.</p>.<p><strong>ಅಸಮಾಧಾನವಿದೆ, ಇಲ್ಲಿ ಪ್ರಸ್ತಾಪಿಸುವುದಿಲ್ಲ: ಅರವಿಂದ ಬೆಲ್ಲದ<br />ಬೆಳಗಾವಿ:</strong> ಸಚಿವ ಸಂಪುಟದಲ್ಲಿ ಸ್ಥಾನ ಸಿಗದ ಶಾಸಕರಲ್ಲಿ ಅಸಮಾಧಾನ ಇರುವುದು ಸಹಜ. ಆದರೆ, ಆ ಕುರಿತು ಪ್ರಸ್ತಾಪಿಸಲು ಇದು ಸ್ಥಳವಲ್ಲ. ದೆಹಲಿಗೆ ಹೋಗಿ ವರಿಷ್ಠರೊಂದಿಗೆ ಚರ್ಚಿಸುತ್ತೇವೆ ಎಂದು ಶಾಸಕ ಅರವಿಂದ ಬೆಲ್ಲದ ಪ್ರತಿಕ್ರಿಯಿಸಿದರು.</p>.<p>ಜನಸೇವಕ ಸಮಾವೇಶ ಸಮಾರೋಪದಲ್ಲಿ ಕೇಂದ್ರ ಸಚಿವ ಅಮಿತ್ ಶಾ, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೇರಿದಂತೆ ಬಿಜೆಪಿ ನಾಯಕರು ಪಾಲ್ಗೊಳ್ಳಲು ಬಂದಿದ್ದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದರು.</p>.<p>ಅಸಮಾಧಾನ ಇರುವುದನ್ನು ನಾವು ಭೇಟಿಯಾದಾಗ ಚರ್ಚಿಸುತ್ತೇವೆ. ಪ್ರಸ್ತಾಪಿಸಲು ಇದು ಸ್ಥಳವಲ್ಲ ಎಂದರು.</p>.<p>ಬಸನಗೌಡ ಪಾಟೀಲ ಯತ್ನಾಳ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸುವುದಿಲ್ಲ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ: </strong>‘ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸಿದ್ದರಾಮಯ್ಯ ಸೇರಿದಂತೆ ಯಾರು ಏನೇ ಹೇಳಿದರೂ ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ. ನಮ್ಮ ಪಕ್ಷದವರು ಏನಾದರೂ ಆ ಬಗ್ಗೆ ಹೇಳಿದ್ದರೆ ಪ್ರತಿಕ್ರಿಯಿಸಬಹುದು’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು.</p>.<p>‘ಏಪ್ರಿಲ್ನಲ್ಲಿ ಮುಖ್ಯಮಂತ್ರಿ ಬದಲಾವಣೆ ಆಗಲಿದೆ. ಆ ವಿಷಯ ಆರ್ಎಸ್ಎಸ್ ಮೂಲದಿಂದ ನನಗೆ ತಿಳಿದುಬಂದಿದೆ’ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಇಲ್ಲಿ ಭಾನುವಾರ ಪ್ರತಿಕ್ರಿಯಿಸಿದ ಅವರು, ಸಿದ್ದರಾಮಯ್ಯ ಎಲ್ಲಿಂದ ಬಂದಿದ್ದಾರೆ? ಅವರೇನು ಆರ್ಎಸ್ಎಸ್ನಲ್ಲಿ ಇದ್ದವರಾ? ಅವರ ಹೇಳಿಕೆಯ ಮೂಲ ಯಾವುದು?’ ಎಂದು ಕೇಳಿದರು.</p>.<p>‘ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಜೊತೆ ಫೋನ್ ನಲ್ಲಿ ಸರಿಯಾಗಿ ಸಂಪರ್ಕ ಇಟ್ಟುಕೊಳ್ಳಲು ಅವರಿಗೆ ಹೇಳಬೇಕು. ಅವರ ನಾಯಕರ ಜೊತೆಯೇ ಸರಿಯಾಗಿ ಸಂಪರ್ಕ ಇಟ್ಟುಕೊಳ್ಳದವರ ಜೊತೆ ಆರ್ಎಸ್ಎಸ್ ನವರು ಮಾತನಾಡುತ್ತಾರೆಯೇ’ ಎಂದು ಪ್ರಶ್ನಿಸಿದರು.</p>.<p><strong>ಅಸಮಾಧಾನವಿದೆ, ಇಲ್ಲಿ ಪ್ರಸ್ತಾಪಿಸುವುದಿಲ್ಲ: ಅರವಿಂದ ಬೆಲ್ಲದ<br />ಬೆಳಗಾವಿ:</strong> ಸಚಿವ ಸಂಪುಟದಲ್ಲಿ ಸ್ಥಾನ ಸಿಗದ ಶಾಸಕರಲ್ಲಿ ಅಸಮಾಧಾನ ಇರುವುದು ಸಹಜ. ಆದರೆ, ಆ ಕುರಿತು ಪ್ರಸ್ತಾಪಿಸಲು ಇದು ಸ್ಥಳವಲ್ಲ. ದೆಹಲಿಗೆ ಹೋಗಿ ವರಿಷ್ಠರೊಂದಿಗೆ ಚರ್ಚಿಸುತ್ತೇವೆ ಎಂದು ಶಾಸಕ ಅರವಿಂದ ಬೆಲ್ಲದ ಪ್ರತಿಕ್ರಿಯಿಸಿದರು.</p>.<p>ಜನಸೇವಕ ಸಮಾವೇಶ ಸಮಾರೋಪದಲ್ಲಿ ಕೇಂದ್ರ ಸಚಿವ ಅಮಿತ್ ಶಾ, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೇರಿದಂತೆ ಬಿಜೆಪಿ ನಾಯಕರು ಪಾಲ್ಗೊಳ್ಳಲು ಬಂದಿದ್ದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದರು.</p>.<p>ಅಸಮಾಧಾನ ಇರುವುದನ್ನು ನಾವು ಭೇಟಿಯಾದಾಗ ಚರ್ಚಿಸುತ್ತೇವೆ. ಪ್ರಸ್ತಾಪಿಸಲು ಇದು ಸ್ಥಳವಲ್ಲ ಎಂದರು.</p>.<p>ಬಸನಗೌಡ ಪಾಟೀಲ ಯತ್ನಾಳ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸುವುದಿಲ್ಲ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>