ಬೆಳಗಾವಿ: ‘ಬಿಜೆಪಿಯ 40 ಶಾಸಕರು ಕಾಂಗ್ರೆಸ್ಗೆ ಸೇರ್ಪಡೆಯಾಗಲಿದ್ದಾರೆ’ ಎಂದು ಕಾಂಗ್ರೆಸ್ ಮುಖಂಡ ರಾಜು ಕಾಗೆ ಹೇಳಿದರು.
ಕಾಗವಾಡ ತಾಲ್ಲೂಕಿನ ಮದಭಾವಿಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಬೆಳಗಾವಿ ಜಿಲ್ಲೆಯ 2–3 ಶಾಸಕರು ಕೂಡ ಬರಲಿದ್ದಾರೆ’ ಎಂದರು.
‘ರಾಜ್ಯ ಸರ್ಕಾರದಲ್ಲಿ ಹೊಂದಾಣಿಕೆ ಇಲ್ಲ. ಎಲ್ಲ ರಂಗಗಳಲ್ಲೂ ವಿಫಲವಾಗಿದೆ. ಅಲ್ಲಿ ಬೇಸರವಾಗಿರುವವರು ನಮ್ಮೊಂದಿಗೆ ಬರುತ್ತಾರೆ’ ಎಂದು ತಿಳಿಸಿದರು.
ಈ ವಿಷಯದ ಬಗ್ಗೆ ಹುಕ್ಕೇರಿ ತಾಲ್ಲೂಕಿನ ಕರಗುಪ್ಪಿಯಲ್ಲಿ ಪ್ರತಿಕ್ರಿಯಿಸಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ, ‘ಬಿಜೆಪಿ ಶಾಸಕರು ಕಾಂಗ್ರೆಸ್ಗೆ ಬರುವ ಬಗ್ಗೆ ವರಿಷ್ಠರ ಮಟ್ಟದಲ್ಲಿ ಚರ್ಚೆ ಆಗಿರುವುದು ನಿಜ. ಯಾರಾರು ಬರುತ್ತಾರೆ ಎಂಬ ಮಾಹಿತಿ ಸದ್ಯಕ್ಕೆ ನನಗಿಲ್ಲ’ ಎಂದರು.