ಬೆಳಗಾವಿ: ಸಚಿವ ಸಂಪುಟಕ್ಕೆ ಮತ್ತೆ ಸೇರಲು ಕಸರತ್ತು ನಡೆಸುತ್ತಿರುವ ಗೋಕಾಕದ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಮುಂಬೈ ಪ್ರವಾಸದ ನಂತರ ಮಠಗಳಿಗೆ ಭೇಟಿಗೆ ಮುಂದಾಗಿದ್ದಾರೆ. ಮೈಸೂರಿನ ಸುತ್ತೂರು ಮಠದಲ್ಲಿ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರನ್ನು ಭೇಟಿಯಾಗಲು ಇಲ್ಲಿನ ಸಾಂಬ್ರಾ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಶುಕ್ರವಾರ ತೆರಳಿದರು.