<p><strong>ಬೆಳಗಾವಿ:</strong> ‘ರಾಜ್ಯದಲ್ಲಿ ಮೊದಲ ಹಂತದಲ್ಲಿ 500 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಆರಂಭಿಸಲಾಗುತ್ತಿದೆ. ಇದಕ್ಕೆ ₹2,500 ಕೋಟಿ ಅನುದಾನ ಅಗತ್ಯ. ಈ ಸಂಬಂಧ ಎಡಿಬಿ ಬ್ಯಾಂಕ್ ಜೊತೆಗೆ ಒಪ್ಪಂದ ಮಾಡಿಕೊಳ್ಳಲಾಗಿದೆ’ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಹೇಳಿದರು.</p><p>ನಗರದಲ್ಲಿ ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಎಲ್ಲ ಶಾಸಕರಿಗೂ ತಲಾ 2 ಅಥವಾ 3 ಶಾಲೆಗಳನ್ನು ನೀಡಲಾಗುವುದು. ಗ್ರಾಮ ಮಟ್ಟದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಇದು ಪ್ರಮುಖ ಹೆಜ್ಜೆ’ ಎಂದರು.</p><p>‘ಮೂರು ವರ್ಷಗಳಲ್ಲಿ 13,500 ಪ್ರಾಥಮಿಕ ಶಾಲೆ ಶಿಕ್ಷಕರ ನೇಮಕಾತಿ ಆಗಿದೆ. ಶೀಗ್ರದಲ್ಲೇ 20 ಸಾವಿರ ಶಿಕ್ಷಕರ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುವುದು. </p><p>‘ಚುನಾವಣೆಯೂ ಸೇರಿದಂತೆ ಬೇರೆ ಯಾವುದೇ ಚಟುವಟಿಕೆಗೆ ಸರ್ಕಾರಿ ಶಾಲೆ ಶಿಕ್ಷಕರನ್ನು ನಿಯೋಜನೆ ಮಾಡಬಾರದು ಎಂಬ ನಿರ್ಧಾರ ತೆಗೆದುಕೊಂಡಿದ್ದೇವೆ. ಈ ಬಗ್ಗೆ ಮುಖ್ಯಮಂತ್ರಿ ಅವರಿಗೂ ಮನವರಿಕೆ ಮಾಡಿದ್ದೇನೆ. ಶಿಕ್ಷಕರು ಶಾಲೆಯಲ್ಲೇ ಹೆಚ್ಚು ಚಟುವಟಿಕೆ ಆರಂಭಿಸಲು ಅನುಕೂಲ ಮಾಡಿಕೊಡಲಾಗುವುದು’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.</p><p>‘ದ್ವಿಭಾಷಾ ನೀತಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ನಿರ್ಧಾರ ಕೈಗೊಳ್ಳಲಿದ್ದಾರೆ. ನಾನೊಬ್ಬನೇ ತೀರ್ಮಾಣ ಮಾಡುವುದಿಲ್ಲ. ಮಕ್ಕಳ ಹಿತದೃಷ್ಟಿಯಿಂದ ಏನು ಬೇಕೋ ಅದನ್ನು ಮಾಡುತ್ತೇವೆ’ ಎಂದರು.</p><p>‘1995ರ ನಂತರದ ಅನುದಾನ ರಹಿತ ಶಾಲೆಗಳನ್ನು ಅನುದಾನಕ್ಕೆ ಒಳಪಡಿಸುವ ಕುರಿತು ಚರ್ಚೆ ನಡೆದಿದೆ. ಹಣಕಾಸು ಇಲಾಖೆಗೂ ಪ್ರಸ್ತಾವ ಸಲ್ಲಿಸಿದ್ದೇವೆ. ಕನ್ನಡ ಶಾಲೆ ಉಳಿಸುವುದು, ಬೆಳೆಸುವುದು ನಮ್ಮ ಕರ್ತವ್ಯ. ಈ ಹಿಂದೆ 2016ರವರೆಗಿನ ಶಾಲೆಗಳ ಪ್ರಸ್ತಾವ ಮಾತ್ರ ಇತ್ತು. ನಾವು 2020ರವರೆಗಿನ ಶಾಲೆಗಳನ್ನೂ ಪರಿಗಣಿಸಲು ಉದ್ದೇಶಿಸಿದ್ದೇವೆ. ಮುಂದಿನ ವರ್ಷಕ್ಕೆ ಸಾಧ್ಯವಾಗಬಹುದು’ ಎಂದೂ ಭರವಸೆ ನೀಡಿದರು.</p>.ಶೀಘ್ರವೇ 20 ಸಾವಿರ ಶಿಕ್ಷಕರ ನೇಮಕ: ಸಚಿವ ಮಧು ಬಂಗಾರಪ್ಪ.ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಪ್ರವೇಶಾತಿ ಹೆಚ್ಚಾಗಬೇಕು: ಮಧು ಬಂಗಾರಪ್ಪ ತಾಕೀತು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ‘ರಾಜ್ಯದಲ್ಲಿ ಮೊದಲ ಹಂತದಲ್ಲಿ 500 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಆರಂಭಿಸಲಾಗುತ್ತಿದೆ. ಇದಕ್ಕೆ ₹2,500 ಕೋಟಿ ಅನುದಾನ ಅಗತ್ಯ. ಈ ಸಂಬಂಧ ಎಡಿಬಿ ಬ್ಯಾಂಕ್ ಜೊತೆಗೆ ಒಪ್ಪಂದ ಮಾಡಿಕೊಳ್ಳಲಾಗಿದೆ’ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಹೇಳಿದರು.</p><p>ನಗರದಲ್ಲಿ ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಎಲ್ಲ ಶಾಸಕರಿಗೂ ತಲಾ 2 ಅಥವಾ 3 ಶಾಲೆಗಳನ್ನು ನೀಡಲಾಗುವುದು. ಗ್ರಾಮ ಮಟ್ಟದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಇದು ಪ್ರಮುಖ ಹೆಜ್ಜೆ’ ಎಂದರು.</p><p>‘ಮೂರು ವರ್ಷಗಳಲ್ಲಿ 13,500 ಪ್ರಾಥಮಿಕ ಶಾಲೆ ಶಿಕ್ಷಕರ ನೇಮಕಾತಿ ಆಗಿದೆ. ಶೀಗ್ರದಲ್ಲೇ 20 ಸಾವಿರ ಶಿಕ್ಷಕರ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುವುದು. </p><p>‘ಚುನಾವಣೆಯೂ ಸೇರಿದಂತೆ ಬೇರೆ ಯಾವುದೇ ಚಟುವಟಿಕೆಗೆ ಸರ್ಕಾರಿ ಶಾಲೆ ಶಿಕ್ಷಕರನ್ನು ನಿಯೋಜನೆ ಮಾಡಬಾರದು ಎಂಬ ನಿರ್ಧಾರ ತೆಗೆದುಕೊಂಡಿದ್ದೇವೆ. ಈ ಬಗ್ಗೆ ಮುಖ್ಯಮಂತ್ರಿ ಅವರಿಗೂ ಮನವರಿಕೆ ಮಾಡಿದ್ದೇನೆ. ಶಿಕ್ಷಕರು ಶಾಲೆಯಲ್ಲೇ ಹೆಚ್ಚು ಚಟುವಟಿಕೆ ಆರಂಭಿಸಲು ಅನುಕೂಲ ಮಾಡಿಕೊಡಲಾಗುವುದು’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.</p><p>‘ದ್ವಿಭಾಷಾ ನೀತಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ನಿರ್ಧಾರ ಕೈಗೊಳ್ಳಲಿದ್ದಾರೆ. ನಾನೊಬ್ಬನೇ ತೀರ್ಮಾಣ ಮಾಡುವುದಿಲ್ಲ. ಮಕ್ಕಳ ಹಿತದೃಷ್ಟಿಯಿಂದ ಏನು ಬೇಕೋ ಅದನ್ನು ಮಾಡುತ್ತೇವೆ’ ಎಂದರು.</p><p>‘1995ರ ನಂತರದ ಅನುದಾನ ರಹಿತ ಶಾಲೆಗಳನ್ನು ಅನುದಾನಕ್ಕೆ ಒಳಪಡಿಸುವ ಕುರಿತು ಚರ್ಚೆ ನಡೆದಿದೆ. ಹಣಕಾಸು ಇಲಾಖೆಗೂ ಪ್ರಸ್ತಾವ ಸಲ್ಲಿಸಿದ್ದೇವೆ. ಕನ್ನಡ ಶಾಲೆ ಉಳಿಸುವುದು, ಬೆಳೆಸುವುದು ನಮ್ಮ ಕರ್ತವ್ಯ. ಈ ಹಿಂದೆ 2016ರವರೆಗಿನ ಶಾಲೆಗಳ ಪ್ರಸ್ತಾವ ಮಾತ್ರ ಇತ್ತು. ನಾವು 2020ರವರೆಗಿನ ಶಾಲೆಗಳನ್ನೂ ಪರಿಗಣಿಸಲು ಉದ್ದೇಶಿಸಿದ್ದೇವೆ. ಮುಂದಿನ ವರ್ಷಕ್ಕೆ ಸಾಧ್ಯವಾಗಬಹುದು’ ಎಂದೂ ಭರವಸೆ ನೀಡಿದರು.</p>.ಶೀಘ್ರವೇ 20 ಸಾವಿರ ಶಿಕ್ಷಕರ ನೇಮಕ: ಸಚಿವ ಮಧು ಬಂಗಾರಪ್ಪ.ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಪ್ರವೇಶಾತಿ ಹೆಚ್ಚಾಗಬೇಕು: ಮಧು ಬಂಗಾರಪ್ಪ ತಾಕೀತು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>