<p><strong>ಚಿಕ್ಕೋಡಿ:</strong> ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಮಳೆ ಮತ್ತೇ ಹೆಚ್ಚಿರುವ ಪರಿಣಾಮವಾಗಿ ಕೃಷ್ಣಾ ಹಾಗೂ ಉಪನದಿಗಳ ಜಲಾವೃತಗೊಂಡ ಸೇತುವೆಗಳ ಸಂಖ್ಯೆ 7ಕ್ಕೆ ಏರಿದೆ. ಕಳೆದ ಒಂದು ವಾರದಿಂದ ಕೃಷ್ಣಾ ನದಿಯ ಕಲ್ಲೋಳ-ಯಡೂರ, ದೂಧಗಂಗಾ ನದಿಯ ಮಲಿಕವಾಡ-ದತ್ತವಾಡ, ಕಾರದಗಾ-ಭೋಜ, ಬಾರವಾಡ-ಕುನ್ನೂರ ಸೇತುವೆಗಳು ಜಲಾವೃತಗೊಂಡಿದ್ದವು.</p>.<p>ಇದೀಗ ವೇದಗಂಗಾ ನದಿಯ ಜತ್ರಾಟ-ಭೀವಶಿ, ಸಿದ್ನಾಳ-ಅಕ್ಕೋಳ ಹಾಗೂ ಭೋಜ-ಕುನ್ನೂರ ಸೇತುವೆಗಳು ಬುಧವಾರ ಮುಳುಗಡೆಯಾಗಿವೆ.</p>.<p>ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶದ ಕೊಯ್ನಾದಲ್ಲಿ 7.8 ಸೆಂ.ಮೀ, ವಾರಣಾ-10.3 ಸೆಂ.ಮೀ, ಕಾಳಮ್ಮವಾಡಿ-11.3 ಸೆಂ.ಮೀ, ಮಹಾಬಳೇಶ್ವರ-8.8 ಸೆಂ.ಮೀ, ನವಜಾ- 3.9 ಸೆಂ.ಮೀ, ರಾಧಾನಗರಿ-15.8 ಸೆಂ.ಮೀ ಮಳೆ ದಾಖಲಾಗಿದೆ.</p>.<p>ಕೊಲ್ಹಾಪುರ ಜಿಲ್ಲೆಯ ರಾಜಾಪೂರೆ ಬ್ಯಾರೇಜಿನಿಂದ ಕೃಷ್ಣಾ ನದಿಗೆ 73,042 ಕ್ಯೂಸೆಕ್ ಹೊರ ಹರಿವು ಇದ್ದು, ಕಲ್ಲೋಳ ಬಳಿಯಲ್ಲಿ ದೂಧಗಂಗಾ ನದಿಗೆ ಒಳ ಹರಿವು 19,008 ಕ್ಯೂಸೆಕ್ ಇದೆ. ತಾಲ್ಲೂಕಿನ ಕಲ್ಲೋಳ-ಯಡೂರ ಬ್ಯಾರೇಜ್ ಬಳಿಯಲ್ಲಿ ಕೃಷ್ಣಾ ನದಿಗೆ 92,050 ಕ್ಯೂಸೆಕ್ ಹೊರ ಹರಿವು ಇದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕೋಡಿ:</strong> ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಮಳೆ ಮತ್ತೇ ಹೆಚ್ಚಿರುವ ಪರಿಣಾಮವಾಗಿ ಕೃಷ್ಣಾ ಹಾಗೂ ಉಪನದಿಗಳ ಜಲಾವೃತಗೊಂಡ ಸೇತುವೆಗಳ ಸಂಖ್ಯೆ 7ಕ್ಕೆ ಏರಿದೆ. ಕಳೆದ ಒಂದು ವಾರದಿಂದ ಕೃಷ್ಣಾ ನದಿಯ ಕಲ್ಲೋಳ-ಯಡೂರ, ದೂಧಗಂಗಾ ನದಿಯ ಮಲಿಕವಾಡ-ದತ್ತವಾಡ, ಕಾರದಗಾ-ಭೋಜ, ಬಾರವಾಡ-ಕುನ್ನೂರ ಸೇತುವೆಗಳು ಜಲಾವೃತಗೊಂಡಿದ್ದವು.</p>.<p>ಇದೀಗ ವೇದಗಂಗಾ ನದಿಯ ಜತ್ರಾಟ-ಭೀವಶಿ, ಸಿದ್ನಾಳ-ಅಕ್ಕೋಳ ಹಾಗೂ ಭೋಜ-ಕುನ್ನೂರ ಸೇತುವೆಗಳು ಬುಧವಾರ ಮುಳುಗಡೆಯಾಗಿವೆ.</p>.<p>ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶದ ಕೊಯ್ನಾದಲ್ಲಿ 7.8 ಸೆಂ.ಮೀ, ವಾರಣಾ-10.3 ಸೆಂ.ಮೀ, ಕಾಳಮ್ಮವಾಡಿ-11.3 ಸೆಂ.ಮೀ, ಮಹಾಬಳೇಶ್ವರ-8.8 ಸೆಂ.ಮೀ, ನವಜಾ- 3.9 ಸೆಂ.ಮೀ, ರಾಧಾನಗರಿ-15.8 ಸೆಂ.ಮೀ ಮಳೆ ದಾಖಲಾಗಿದೆ.</p>.<p>ಕೊಲ್ಹಾಪುರ ಜಿಲ್ಲೆಯ ರಾಜಾಪೂರೆ ಬ್ಯಾರೇಜಿನಿಂದ ಕೃಷ್ಣಾ ನದಿಗೆ 73,042 ಕ್ಯೂಸೆಕ್ ಹೊರ ಹರಿವು ಇದ್ದು, ಕಲ್ಲೋಳ ಬಳಿಯಲ್ಲಿ ದೂಧಗಂಗಾ ನದಿಗೆ ಒಳ ಹರಿವು 19,008 ಕ್ಯೂಸೆಕ್ ಇದೆ. ತಾಲ್ಲೂಕಿನ ಕಲ್ಲೋಳ-ಯಡೂರ ಬ್ಯಾರೇಜ್ ಬಳಿಯಲ್ಲಿ ಕೃಷ್ಣಾ ನದಿಗೆ 92,050 ಕ್ಯೂಸೆಕ್ ಹೊರ ಹರಿವು ಇದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>