<p><strong>ಬೆಳಗಾವಿ:</strong> ನಗರವೂ ಸೇರಿದಂತೆ ಜಿಲ್ಲೆಯಾದ್ಯಂತ ಭಾನುವಾರವೂ ಮಳೆ ಸುರಿಯಿತು.</p><p>ಬೆಳಗಾವಿಯಲ್ಲಿ ಸತತ ಎರಡನೇ ದಿನವೂ ಗುಡುಗು–ಮಿಂಚು ಸಹಿತವಾಗಿ ವರುಣ ಅಬ್ಬರಿಸಿದ್ದರಿಂದ ವಾತಾವರಣ ತಂಪೇರಿತು. ಬೆಳಿಗ್ಗೆಯಿಂದ ಮೋಡ ಕವಿದಿತ್ತು. ಸಂಜೆ ಒಂದು ತಾಸಿಗೂ ಅಧಿಕ ಉತ್ತಮ ಮಳೆ ಸುರಿಯಿತು.</p><p>ಕೆಲವು ಮಾರ್ಗಗಳ ರಸ್ತೆಗಳಲ್ಲಿ ಅಪಾರ ಪ್ರಮಾಣದಲ್ಲಿ ನೀರು ನಿಂತಿದ್ದರಿಂದ ಸಂಚಾರಕ್ಕೆ ಸಮಸ್ಯೆಯಾಯಿತು. ಭಾನುವಾರ ರಜಾ ದಿನವಾದ್ದರಿಂದ ಮಾರುಕಟ್ಟೆಯಲ್ಲಿ ಜನದಟ್ಟಣೆ ಹೆಚ್ಚಿತ್ತು. ಏಕಾಏಕಿ ಮಳೆಯಾಗಿದ್ದರಿಂದ ವ್ಯಾಪಾರ ವಹಿವಾಟಿಗೆ ತೊಡಕಾಯಿತು. ಜನರು ಆಶ್ರಯಕ್ಕಾಗಿ ಪರದಾಡಿದರು.</p><p>ಗೋಕಾಕ, ಬೈಲಹೊಂಗಲ ತಾಲ್ಲೂಕಿನ ನೇಸರಗಿ, ಬೆಳಗಾವಿ ತಾಲ್ಲೂಕಿನ ಹಿರೇಬಾಗೇವಾಡಿ ಮತ್ತಿತರ ಕಡೆ ಮಳೆಯಾಗಿದೆ.</p>.<p><strong>ಧಾರಾಕಾರ ಮಳೆ: ನೆಲಕ್ಕುರುಳಿದ 25 ಮರ</strong></p><p><strong>ಮುನವಳ್ಳಿ:</strong> ಪಟ್ಟಣದಲ್ಲಿ ಶನಿವಾರ ಸಂಜೆ ಸುರಿದ ಧಾರಾಕಾರ ಮಳೆಯಿಂದಾಗಿ 25 ಮರಗಳು ಬಿದ್ದಿದ್ದು, 19 ವಿದ್ಯುತ್ ಕಂಬಗಳಿಗೆ ಹಾನಿಯಾಗಿದೆ. ಒಂದು ವಿದ್ಯುತ್ ಕಂಬ ಬಿದ್ದಿದ್ದರಿಂದ ಕಾರು ಜಖಂಗೊಂಡಿದೆ.</p><p>ಪಂಚಲಿಂಗೇಶ್ವರ ರೈತ ಸಂಪರ್ಕ ಕೇದ್ರದ ಗೋದಾಮಿನ ಪತ್ರಾಸ್ ಹಾರಿಹೋಗಿದ್ದು, 250 ಟನ್ ಗೊಬ್ಬರ ನೀರು ಪಾಲಾಗಿದೆ. ಪಪ್ಪಾಯಿ, ಬಾಳೆ, ಮೆಕ್ಕೆಜೋಳ, ಕಬ್ಬಿನ ಬೆಳೆಗೆ ಹಾನಿಯಾಗಿದೆ.</p><p>ಶಾಸಕ ವಿಶ್ವಾಸ ವೈದ್ಯ ಮತ್ತು ಅಧಿಕಾರಿಗಳು ಕೃಷಿಭೂಮಿಗೆ ತೆರಳಿ, ಬೆಳೆ ಹಾನಿ ಪರಿಶೀಲಿಸಿದರು. ‘ಸರ್ಕಾರದಿಂದ ಸೂಕ್ತ ಪರಿಹಾರ ಒದಗಿಸುತ್ತೇವೆ’ ಎಂದು ಭರವಸೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ನಗರವೂ ಸೇರಿದಂತೆ ಜಿಲ್ಲೆಯಾದ್ಯಂತ ಭಾನುವಾರವೂ ಮಳೆ ಸುರಿಯಿತು.</p><p>ಬೆಳಗಾವಿಯಲ್ಲಿ ಸತತ ಎರಡನೇ ದಿನವೂ ಗುಡುಗು–ಮಿಂಚು ಸಹಿತವಾಗಿ ವರುಣ ಅಬ್ಬರಿಸಿದ್ದರಿಂದ ವಾತಾವರಣ ತಂಪೇರಿತು. ಬೆಳಿಗ್ಗೆಯಿಂದ ಮೋಡ ಕವಿದಿತ್ತು. ಸಂಜೆ ಒಂದು ತಾಸಿಗೂ ಅಧಿಕ ಉತ್ತಮ ಮಳೆ ಸುರಿಯಿತು.</p><p>ಕೆಲವು ಮಾರ್ಗಗಳ ರಸ್ತೆಗಳಲ್ಲಿ ಅಪಾರ ಪ್ರಮಾಣದಲ್ಲಿ ನೀರು ನಿಂತಿದ್ದರಿಂದ ಸಂಚಾರಕ್ಕೆ ಸಮಸ್ಯೆಯಾಯಿತು. ಭಾನುವಾರ ರಜಾ ದಿನವಾದ್ದರಿಂದ ಮಾರುಕಟ್ಟೆಯಲ್ಲಿ ಜನದಟ್ಟಣೆ ಹೆಚ್ಚಿತ್ತು. ಏಕಾಏಕಿ ಮಳೆಯಾಗಿದ್ದರಿಂದ ವ್ಯಾಪಾರ ವಹಿವಾಟಿಗೆ ತೊಡಕಾಯಿತು. ಜನರು ಆಶ್ರಯಕ್ಕಾಗಿ ಪರದಾಡಿದರು.</p><p>ಗೋಕಾಕ, ಬೈಲಹೊಂಗಲ ತಾಲ್ಲೂಕಿನ ನೇಸರಗಿ, ಬೆಳಗಾವಿ ತಾಲ್ಲೂಕಿನ ಹಿರೇಬಾಗೇವಾಡಿ ಮತ್ತಿತರ ಕಡೆ ಮಳೆಯಾಗಿದೆ.</p>.<p><strong>ಧಾರಾಕಾರ ಮಳೆ: ನೆಲಕ್ಕುರುಳಿದ 25 ಮರ</strong></p><p><strong>ಮುನವಳ್ಳಿ:</strong> ಪಟ್ಟಣದಲ್ಲಿ ಶನಿವಾರ ಸಂಜೆ ಸುರಿದ ಧಾರಾಕಾರ ಮಳೆಯಿಂದಾಗಿ 25 ಮರಗಳು ಬಿದ್ದಿದ್ದು, 19 ವಿದ್ಯುತ್ ಕಂಬಗಳಿಗೆ ಹಾನಿಯಾಗಿದೆ. ಒಂದು ವಿದ್ಯುತ್ ಕಂಬ ಬಿದ್ದಿದ್ದರಿಂದ ಕಾರು ಜಖಂಗೊಂಡಿದೆ.</p><p>ಪಂಚಲಿಂಗೇಶ್ವರ ರೈತ ಸಂಪರ್ಕ ಕೇದ್ರದ ಗೋದಾಮಿನ ಪತ್ರಾಸ್ ಹಾರಿಹೋಗಿದ್ದು, 250 ಟನ್ ಗೊಬ್ಬರ ನೀರು ಪಾಲಾಗಿದೆ. ಪಪ್ಪಾಯಿ, ಬಾಳೆ, ಮೆಕ್ಕೆಜೋಳ, ಕಬ್ಬಿನ ಬೆಳೆಗೆ ಹಾನಿಯಾಗಿದೆ.</p><p>ಶಾಸಕ ವಿಶ್ವಾಸ ವೈದ್ಯ ಮತ್ತು ಅಧಿಕಾರಿಗಳು ಕೃಷಿಭೂಮಿಗೆ ತೆರಳಿ, ಬೆಳೆ ಹಾನಿ ಪರಿಶೀಲಿಸಿದರು. ‘ಸರ್ಕಾರದಿಂದ ಸೂಕ್ತ ಪರಿಹಾರ ಒದಗಿಸುತ್ತೇವೆ’ ಎಂದು ಭರವಸೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>