ಬೆಳಗಾವಿ: ನೆರೆಯ ಮಹಾರಾಷ್ಟ್ರದಲ್ಲಿ ಮಳೆ ಅಬ್ಬರ ಮುಂದುವರಿದಿರುವುದರಿಂದ ಅಲ್ಲಿನ ಕೊಯ್ನಾ ಜಲಾಶಯದಿಂದ ಶುಕ್ರವಾರ ಬೆಳಿಗ್ಗೆ 10ಸಾವಿರ ಕ್ಯುಸೆಕ್ ನೀರನ್ನು ಹೊರ ಬಿಡಲಾಗುತ್ತಿದೆ.
ಇದರಿಂದ ಕೃಷ್ಣಾ ನದಿಯಲ್ಲಿ ನೀರಿನ ಹರಿವಿನ ಪ್ರಮಾಣ ಹೆಚ್ಚಾಗಲಿದೆ. ಕ್ರಮೇಣ ಹೊರಹರಿವಿನ ಪ್ರಮಾಣವನ್ನು 20ಸಾವಿರ ಕ್ಯುಸೆಕ್ಗೆ ಹೆಚ್ಚಿಸಲಾಗುವುದು ಎಂದು ಅಲ್ಲಿನ ಅಧಿಕಾರಿಗಳು ತಿಳಿಸಿದ್ದಾರೆ ಎಂದು ಎಸ್ಪಿ ಲಕ್ಷ್ಮಣ ನಿಂಬರಗಿ ತಿಳಿಸಿದ್ದಾರೆ.
ಕೊಯ್ನಾದಿಂದ ಬಿಡುಗಡೆಯಾಗುವ ನೀರು ಜಿಲ್ಲೆಯ ಚಿಕ್ಕೋಡಿ ತಾಲ್ಲೂಕಿನ ಕಲ್ಲೋಳ ಬಳಿ ಕೃಷ್ಣಾ ನದಿ ಸೇರುತ್ತದೆ.