ಪೊಲೀಸರು ಬ್ಯಾರಿಕೇಡ್ಗಳನ್ನು ಇಟ್ಟು ರಸ್ತೆ ಬಂದ್ ಮಾಡಿದ್ದಾರೆ. ವಾಹನಗಳ ಮಾರ್ಗ ಬದಲಿಸುವಂತೆ ಸೂಚಿಸುತ್ತಿದ್ದಾರೆ. ಬೆಂಗಳೂರು, ತುಮಕೂರು, ದಾವಣಗೆರೆ, ಧಾರವಾಡ, ಹಾವೇರಿ ಮೊದಲಾದ ಕಡೆಗಳಿಂದ ಮಹಾರಾಷ್ಟ್ರ ಮತ್ತು ಉತ್ತರ ಭಾರತಕ್ಕೆ ತೆರಳುವ ವಾಹನಗಳು ಈ ಮಾರ್ಗದಲ್ಲಿ ಬರಬಾರದು ಎಂದು ಎಸ್ಪಿ ಲಕ್ಷ್ಮಣ ನಿಂಬರಗಿ ತಿಳಿಸಿದ್ದಾರೆ.