ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳಗಾವಿ| ಕುಡಚಿ–ಉಗಾರ ಸೇತುವೆ ಜಲಾವೃತ

Last Updated 16 ಅಕ್ಟೋಬರ್ 2020, 15:21 IST
ಅಕ್ಷರ ಗಾತ್ರ

ಬೆಳಗಾವಿ: ‘ಕೃಷ್ಣಾ ನದಿ ನೀರಿನ ಮಟ್ಟ ಏರಿಕೆಯಾಗಿರುವುದರಿಂದಾಗಿ, ನೆರೆಯ ಮಹಾರಾಷ್ಟ್ರಕ್ಕೆ ಸಂಪರ್ಕ ಕಲ್ಪಿಸುವ ರಾಯಬಾಗದ ಕುಡಚಿ–ಉಗಾರ ಸೇತುವೆ ಶುಕ್ರವಾರ ಜಲಾವೃತಗೊಂಡು ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ.

ರಾಯಬಾಗ ತಾಲ್ಲೂಕಿನ ನದಿ ಪಾತ್ರದ ಗ್ರಾಮಗಳ ಜನ ಪ್ರವಾಹದ ಭೀತಿಗೆ ಒಳಗಾಗಿದ್ದಾರೆ.

ಸೇತುವೆ ಜಲಾವೃತವಾಗಿರುವುದನ್ನು ತಹಶೀಲ್ದಾರ್‌ ಚಂದ್ರಕಾಂತ ಭಂಜತ್ರಿ ಪರಿಶೀಲಿಸಿದರು.

‘ಸತತ ಮಳೆಯಿಂದಾಗಿ ತಾಲ್ಲೂಕಿನ ಪ್ರಮುಖ ರಸ್ತೆಗಳು ಹಾಳಾಗಿವೆ. ಈ ಬಗ್ಗೆ ಕ್ರಮ ಕೈಗೊಳ್ಳಲು ಸಂಬಂಧಿಸಿದ ಇಲಾಖೆಗೆ ಸೂಚಿಸಲಾಗುವುದು. ವಿವಿಧ 11 ಗ್ರಾಮಗಳಲ್ಲಿ ಬೆಳೆ ಹಾನಿಯಾಗಿದ್ದು ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ. 25 ಮನೆಗಳಿಗೆ ಹಾನಿಯಾಗಿದೆ. ಸಂಪೂರ್ಣ ವರದಿ ಜಿಲ್ಲಾಧಿಕಾರಿಗೆ ಸಲ್ಲಿಸಲಾಗುವುದು. ನಂತರ ಪರಿಹಾರ ದೊರೆಯಲಿದೆ’ ಎಂದು ತಿಳಿಸಿದರು.

ಉಪ ತಹಶೀಲ್ದಾರ ಐ.ಕೆ. ಹಿರೇಮಠ, ಪುರಸಭೆ ಮುಖ್ಯಾಧಿಕಾರಿ ಎಸ್.ಎ. ಮಹಾಜನ, ಕಂದಾಯ ನಿರೀಕ್ಷಕ ರಾಜು ದಾನೋಳಿ, ಗ್ರಾಮ ಲೆಕ್ಕಾಧಿಕಾರಿ ಹನುಮಂತ ದಶವಂತ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT