<p><strong>ಬೆಳಗಾವಿ</strong>: ‘ಶೀಘ್ರದಲ್ಲಿಯೇ ಬರಲಿರುವ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆ ಹಾಗೂ ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುವುದು’ ಎಂದು ಅಧ್ಯಕ್ಷ ರವಿ ಕೃಷ್ಣಾರೆಡ್ಡಿ ತಿಳಿಸಿದರು.</p>.<p>ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಶನಿವಾರ ನಡೆದ ಪಕ್ಷದ ಸಂಘಟನಾ ಸಭೆಯಲ್ಲಿ ಅವರು ಮಾತನಾಡಿದರು.</p>.<p>‘ರಾಜ್ಯದಲ್ಲಿ ಪಕ್ಷವು ಒಂದು ವರ್ಷದಲ್ಲಿ ತನ್ನ ತತ್ವ, ಸಿದ್ಧಾಂತ ಮತ್ತು ಚುನಾವಣಾ ರಾಜಕಾರಣದ ಮೂಲಕ ಸ್ವಚ್ಛ, ಪ್ರಾಮಾಣಿಕ, ಜನಪರ ರಾಜಕಾರಣದ ಚಾಪನ್ನು ಮೂಡಿಸುತ್ತಿದೆ. ಪ್ರಾಮಾಣಿಕ ಮತ್ತು ಅರ್ಹರು ಚುನಾವಣೆಗೆ ಸ್ಪರ್ಧಿಸಲು ಪ್ರೇರೇಪಣೆ ನೀಡುತ್ತಿದೆ’ ಎಂದು ಹೇಳಿದರು.</p>.<p>‘ಇತ್ತೀಚೆಗೆ ನಡೆದ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಪಕ್ಷದ ನೂರಾರು ಕಾರ್ಯಕರ್ತರು ಸ್ಪರ್ಧಿಸಿದ್ದರು. ಯಾವುದೇ ರೀತಿಯಲ್ಲಿ ಚುನಾವಣಾ ಅಕ್ರಮ ಮಾಡದೆ ಹಲವರು ಗೆದ್ದಿದ್ದಾರೆ. ಅದು ಪರಿಸ್ಥಿತಿ ಬದಲಾಗುತ್ತಿರುವುದಕ್ಕೆ ನಿದರ್ಶನವಾಗಿದೆ’ ಎಂದರು.</p>.<p>‘ಬೆಳಗಾವಿಯು ಸಾಕಷ್ಟು ಸಂಪನ್ಮೂಲ ಹೊಂದಿದ್ದರೂ, ಸಮಸ್ಯೆಗಳಿಂದ ಮತ್ತು ಹಲವು ರೀತಿಯ ಮಾಫಿಯಾಗಳಿಂದ ನರಳುತ್ತಿದೆ. ಭ್ರಷ್ಟ ಹಾಗೂ ಅಯೋಗ್ಯ ರಾಜಕಾರಣಿಗಳು ಜಿಲ್ಲೆಯಲ್ಲಿ ಹಣ–ಹೆಂಡ ಮತ್ತು ಆಮಿಷಗಳ ರಾಜಕಾರಣ ಮಾಡುವ ಮೂಲಕ ಪ್ರಜಾಪ್ರಭುತ್ವದ ಕತ್ತನ್ನು ಹಿಸುಕುತ್ತಿದ್ದಾರೆ’ ಎಂದು ದೂರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ</strong>: ‘ಶೀಘ್ರದಲ್ಲಿಯೇ ಬರಲಿರುವ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆ ಹಾಗೂ ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುವುದು’ ಎಂದು ಅಧ್ಯಕ್ಷ ರವಿ ಕೃಷ್ಣಾರೆಡ್ಡಿ ತಿಳಿಸಿದರು.</p>.<p>ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಶನಿವಾರ ನಡೆದ ಪಕ್ಷದ ಸಂಘಟನಾ ಸಭೆಯಲ್ಲಿ ಅವರು ಮಾತನಾಡಿದರು.</p>.<p>‘ರಾಜ್ಯದಲ್ಲಿ ಪಕ್ಷವು ಒಂದು ವರ್ಷದಲ್ಲಿ ತನ್ನ ತತ್ವ, ಸಿದ್ಧಾಂತ ಮತ್ತು ಚುನಾವಣಾ ರಾಜಕಾರಣದ ಮೂಲಕ ಸ್ವಚ್ಛ, ಪ್ರಾಮಾಣಿಕ, ಜನಪರ ರಾಜಕಾರಣದ ಚಾಪನ್ನು ಮೂಡಿಸುತ್ತಿದೆ. ಪ್ರಾಮಾಣಿಕ ಮತ್ತು ಅರ್ಹರು ಚುನಾವಣೆಗೆ ಸ್ಪರ್ಧಿಸಲು ಪ್ರೇರೇಪಣೆ ನೀಡುತ್ತಿದೆ’ ಎಂದು ಹೇಳಿದರು.</p>.<p>‘ಇತ್ತೀಚೆಗೆ ನಡೆದ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಪಕ್ಷದ ನೂರಾರು ಕಾರ್ಯಕರ್ತರು ಸ್ಪರ್ಧಿಸಿದ್ದರು. ಯಾವುದೇ ರೀತಿಯಲ್ಲಿ ಚುನಾವಣಾ ಅಕ್ರಮ ಮಾಡದೆ ಹಲವರು ಗೆದ್ದಿದ್ದಾರೆ. ಅದು ಪರಿಸ್ಥಿತಿ ಬದಲಾಗುತ್ತಿರುವುದಕ್ಕೆ ನಿದರ್ಶನವಾಗಿದೆ’ ಎಂದರು.</p>.<p>‘ಬೆಳಗಾವಿಯು ಸಾಕಷ್ಟು ಸಂಪನ್ಮೂಲ ಹೊಂದಿದ್ದರೂ, ಸಮಸ್ಯೆಗಳಿಂದ ಮತ್ತು ಹಲವು ರೀತಿಯ ಮಾಫಿಯಾಗಳಿಂದ ನರಳುತ್ತಿದೆ. ಭ್ರಷ್ಟ ಹಾಗೂ ಅಯೋಗ್ಯ ರಾಜಕಾರಣಿಗಳು ಜಿಲ್ಲೆಯಲ್ಲಿ ಹಣ–ಹೆಂಡ ಮತ್ತು ಆಮಿಷಗಳ ರಾಜಕಾರಣ ಮಾಡುವ ಮೂಲಕ ಪ್ರಜಾಪ್ರಭುತ್ವದ ಕತ್ತನ್ನು ಹಿಸುಕುತ್ತಿದ್ದಾರೆ’ ಎಂದು ದೂರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>