<p><strong>ಬೆಳಗಾವಿ</strong>: ‘ಕರ್ನಾಟಕ ರೆಡ್ಡಿ ಜನಸಂಘದ ಶತಮಾನೋತ್ಸವ ಸಮಾರಂಭವನ್ನು ಬೆಂಗಳೂರಿನ ಗಾಯತ್ರಿ ವಿಹಾರದ ಅರಮನೆ ಮೈದಾನದಲ್ಲಿ ಸೆ.24ರಂದು ಬೆಳಿಗ್ಗೆ 10ಕ್ಕೆ ಆಯೋಜಿಸಲಾಗಿದೆ’ ಎಂದು ಎರೆಹೊಸಹಳ್ಳಿಯ ರೆಡ್ಡಿ ಗುರುಪೀಠದ ವೇಮನಾನಂದ ಸ್ವಾಮೀಜಿ ಹೇಳಿದರು.</p>.<p>ಇಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕರ್ನಾಟಕ ರೆಡ್ಡಿ ಜನಸಂಘ 100ನೇ ವಸಂತಕ್ಕೆ ಕಾಲಿಟ್ಟಿದೆ. ಈ ಸಂಭ್ರಮಕ್ಕಾಗಿ ಆಯೋಜಿಸಿದ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ರೆಡ್ಡಿ ಸಮಾಜದ ಶಾಸಕರು, ಮಾಜಿ ಶಾಸಕರು, ಮುಖಂಡರು ಮತ್ತು ಸ್ವಾಮೀಜಿಗಳು ಆಗಮಿಸುವರು’ ಎಂದು ತಿಳಿಸಿದರು.</p>.<p>‘ರಾಜ್ಯದಲ್ಲಿ ಐದಾರು ಪಂಗಡಗಳಿಂದ ಗುರುತಿಸಿಕೊಂಡ ರೆಡ್ಡಿ ಸಮುದಾಯದ ಜನಸಂಖ್ಯೆ 35 ಲಕ್ಷ ಇದೆ. ಆದರೆ, 7 ಲಕ್ಷ ಜನಸಂಖ್ಯೆ ಎಂದು ಕಾಂತರಾಜು ವರದಿ ತಿಳಿಸಿದೆ. ಈ ತಪ್ಪು ಮಾಹಿತಿಯಿಂದಾಗಿ ನಾವು ಸರ್ಕಾರಿ ಸೌಲಭ್ಯದಿಂದ ವಂಚಿತರಾಗಿದ್ದೇವೆ. ಹಾಗಾಗಿ ಇದೇ 22ರಿಂದ ಆರಂಭವಾಗುವ ಸಮೀಕ್ಷೆಯಲ್ಲಿ ಯಾರೂ ಉಪ ಪಂಗಡಗಳ ಹೆಸರು ಬರೆಯಿಸಬಾರದು. ಧರ್ಮದ ಕಾಲಂನಲ್ಲಿ ಹಿಂದೂ ಮತ್ತು ಜಾತಿ ಕಾಲಂನಲ್ಲಿ ರೆಡ್ಡಿ ಎಂದೇ ಬರೆಯಿಸಬೇಕು. ಆಗ ನಿಖರವಾದ ಜನಸಂಖ್ಯೆ ಗೊತ್ತಾಗುತ್ತದೆ’ ಎಂದರು.</p>.<p>ಕರ್ನಾಟಕ ರೆಡ್ಡಿ ಜನಸಂಘದ ಉಪಾಧ್ಯಕ್ಷ ಲಕ್ಷ್ಮಣ ರೆಡ್ಡಿ, ನಿರ್ದೇಶಕ ಕೃಷ್ಣ ರೆಡ್ಡಿ, ಬಾಬುರೆಡ್ಡಿ ಭೈರತಿ, <br />ಪ್ರಭಾಕರ ರೆಡ್ಡಿ, ರಾಜು ರೆಡ್ಡಿ, ಐನಾಥ ರೆಡ್ಡಿ, ಅಚ್ಯುತಾನ ರೆಡ್ಡಿ, ಕಾಂತು ಜಾಲಿಬೇರಿ, ಮಂಜುನಾಥ ಪಾಟೀಲ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ</strong>: ‘ಕರ್ನಾಟಕ ರೆಡ್ಡಿ ಜನಸಂಘದ ಶತಮಾನೋತ್ಸವ ಸಮಾರಂಭವನ್ನು ಬೆಂಗಳೂರಿನ ಗಾಯತ್ರಿ ವಿಹಾರದ ಅರಮನೆ ಮೈದಾನದಲ್ಲಿ ಸೆ.24ರಂದು ಬೆಳಿಗ್ಗೆ 10ಕ್ಕೆ ಆಯೋಜಿಸಲಾಗಿದೆ’ ಎಂದು ಎರೆಹೊಸಹಳ್ಳಿಯ ರೆಡ್ಡಿ ಗುರುಪೀಠದ ವೇಮನಾನಂದ ಸ್ವಾಮೀಜಿ ಹೇಳಿದರು.</p>.<p>ಇಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕರ್ನಾಟಕ ರೆಡ್ಡಿ ಜನಸಂಘ 100ನೇ ವಸಂತಕ್ಕೆ ಕಾಲಿಟ್ಟಿದೆ. ಈ ಸಂಭ್ರಮಕ್ಕಾಗಿ ಆಯೋಜಿಸಿದ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ರೆಡ್ಡಿ ಸಮಾಜದ ಶಾಸಕರು, ಮಾಜಿ ಶಾಸಕರು, ಮುಖಂಡರು ಮತ್ತು ಸ್ವಾಮೀಜಿಗಳು ಆಗಮಿಸುವರು’ ಎಂದು ತಿಳಿಸಿದರು.</p>.<p>‘ರಾಜ್ಯದಲ್ಲಿ ಐದಾರು ಪಂಗಡಗಳಿಂದ ಗುರುತಿಸಿಕೊಂಡ ರೆಡ್ಡಿ ಸಮುದಾಯದ ಜನಸಂಖ್ಯೆ 35 ಲಕ್ಷ ಇದೆ. ಆದರೆ, 7 ಲಕ್ಷ ಜನಸಂಖ್ಯೆ ಎಂದು ಕಾಂತರಾಜು ವರದಿ ತಿಳಿಸಿದೆ. ಈ ತಪ್ಪು ಮಾಹಿತಿಯಿಂದಾಗಿ ನಾವು ಸರ್ಕಾರಿ ಸೌಲಭ್ಯದಿಂದ ವಂಚಿತರಾಗಿದ್ದೇವೆ. ಹಾಗಾಗಿ ಇದೇ 22ರಿಂದ ಆರಂಭವಾಗುವ ಸಮೀಕ್ಷೆಯಲ್ಲಿ ಯಾರೂ ಉಪ ಪಂಗಡಗಳ ಹೆಸರು ಬರೆಯಿಸಬಾರದು. ಧರ್ಮದ ಕಾಲಂನಲ್ಲಿ ಹಿಂದೂ ಮತ್ತು ಜಾತಿ ಕಾಲಂನಲ್ಲಿ ರೆಡ್ಡಿ ಎಂದೇ ಬರೆಯಿಸಬೇಕು. ಆಗ ನಿಖರವಾದ ಜನಸಂಖ್ಯೆ ಗೊತ್ತಾಗುತ್ತದೆ’ ಎಂದರು.</p>.<p>ಕರ್ನಾಟಕ ರೆಡ್ಡಿ ಜನಸಂಘದ ಉಪಾಧ್ಯಕ್ಷ ಲಕ್ಷ್ಮಣ ರೆಡ್ಡಿ, ನಿರ್ದೇಶಕ ಕೃಷ್ಣ ರೆಡ್ಡಿ, ಬಾಬುರೆಡ್ಡಿ ಭೈರತಿ, <br />ಪ್ರಭಾಕರ ರೆಡ್ಡಿ, ರಾಜು ರೆಡ್ಡಿ, ಐನಾಥ ರೆಡ್ಡಿ, ಅಚ್ಯುತಾನ ರೆಡ್ಡಿ, ಕಾಂತು ಜಾಲಿಬೇರಿ, ಮಂಜುನಾಥ ಪಾಟೀಲ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>