ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಶ್ಮೀರದಲ್ಲಿ ಪಾಕ್‌ ಸೇನೆಯೊಂದಿಗೆ ಗುಂಡಿನ ಚಕಮಕಿ: ಬೆಳಗಾವಿ ಯೋಧ ಹುತಾತ್ಮ

Last Updated 8 ನವೆಂಬರ್ 2019, 14:16 IST
ಅಕ್ಷರ ಗಾತ್ರ

ಶ್ರೀನಗರ: ಪೂಂಛ್‌ ಜಿಲ್ಲೆಯ ಕೃಷ್ಣ ಘಾಟಿ ವಲಯದಲ್ಲಿ ನುಸುಳುಕೋರರಿಗೆ ನೆರವಾಗಲೆಂದು ಪಾಕ್‌ ಸೇನೆ ಗುರುವಾರ ನಡೆಸಿದ ತೀವ್ರ ಗುಂಡಿನ ದಾಳಿಯಲ್ಲಿ ಬೆಳಗಾವಿ ಜಿಲ್ಲೆ ಉಚ್ಚಗಾವ್‌ನ ಯೋಧ ರಾಹುಲ್ ಭೈರು ಸುಳಗೇಕರ್ ಹುತಾತ್ಮರಾದರು.

ಪಾಕ್‌ ಸೇನೆಯ ಅಪ್ರಚೋದಿತ ಗುಂಡಿನ ದಾಳಿಗೆ ಭಾರತೀಯ ಸೇನೆ ಸೂಕ್ತ ಪ್ರತ್ಯುತ್ತರ ನೀಡಿತು. ಗುಂಡಿನ ಚಕಮಕಿಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಸುಳಗೇಕರ್‌ ಅವರನ್ನು ತಕ್ಷಣ ಸಮೀಪದ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಲಾಯಿತು.

ಚಿಕಿತ್ಸೆ ಫಲಕಾರಿಯಾಗದೆ ಅವರು ಹುತಾತ್ಮರಾದರು ಎಂದು ಸೇನೆ ಹೇಳಿದೆ.ಮೃತ ಯೋಧ ಸುಳಗೇಕರ್ ಅವರಿಗೆ 21 ವರ್ಷ ವಯಸ್ಸು.ತಾಯಿ ಗೀತಾ ಇದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT