<p><strong>ಚಿಕ್ಕೋಡಿ</strong>: ತಾಲ್ಲೂಕಿನ ಕರಗಾಂವ ಹಾಗೂ ಹನುಮಾನ ಏತನೀರಾವರಿ ಯೋಜನೆಗಳನ್ನು ಕೂಡಲೇ ಜಾರಿಗೆ ಆಗ್ರಹಿಸಿ ಡಿ.4 ರಂದು ಚಿಕ್ಕೋಡಿ ಸಂಪೂರ್ಣ ಬಂದ್ ಗೆ ಕರ್ನಾಟಕ ರಾಜ್ಯ ರೈತ ಸಂಘ ರಾಜ್ಯಾಧ್ಯಕ್ಷ ಚೂನಪ್ಪ ಪೂಜಾರಿ ಕರೆ ನೀಡಿದರು.</p>.<p>ಪಟ್ಟಣ ಲೋಕೋಪಯೋಗಿ ಇಲಾಖೆಯ ಪ್ರವಾಸಿ ಮಂದಿರದಲ್ಲಿ ಭಾನುವಾರ ಸುದ್ದಿಗೋಷ್ಢಿಯಲ್ಲಿ ಮಾತನಾಡಿದ ಅವರು, ಕರಗಾಂವ ಹಾಗು ಹನುಮಾನ ಏತನೀರಾವರಿ ಯೋಜನೆಗೊಳಪಡುವ ಗ್ರಾಮಗಳು ಹನಿ ನೀರಿಗೂ ಪರಿತಪಿಸುವ ಪರಿಸ್ಥಿತಿ ಎದುರಿಸಬೇಕಾಗಿದೆ. ಡಿ. 4 ರಂದು ಚಿಕ್ಕೋಡಿ ಪಟ್ಟಣದಲ್ಲಿ ಸಹಸ್ರಾರು ರೈತರು ಒಗ್ಗೂಡಿ ಬಸವೇಶ್ವರ ವೃತ್ತದಲ್ಲಿ ರಸ್ತೆ ತಡೆ ನಡೆಸಲಾಗುವುದು ಎಂದರು.</p>.<p>33 ಗ್ರಾಮಗಳನ್ನು ಒಳಪಡುವ ಈ ಎರಡೂ ನೀರಾವರಿ ಯೋಜನೆ ಜಾರಿಗೊಳಿಸುವುದಾಗಿ ಆಡಳಿದ ಸರ್ಕಾರಗಳು ಪೊಳ್ಳು ಭರವಸೆ ನೀಡುತ್ತ ಬಂದಿವೆ. ಚಿಕ್ಕೋಡಿ ಸದಗಲಾ ಶಾಸಕ ಗಣೇಶ ಹುಕ್ಕೇರಿ, ರಾಯಬಾಗ ಶಾಸಕ ದುರ್ಯೋಧನ ಐಹೊಳೆ ಹಲವು ಬಾರಿ ಯೋಜನೆಗೆ ಕಾಟಾಚಾರದ ಚಾಲನೆ ನೀಡಿದ್ದಾರೆ ಎಂದು ಕಿಡಿಕಾರಿದರು.</p>.<p>ಸುದ್ದಿಗೋಷ್ಢಿಯಲ್ಲಿ ರೈತ ಸಂಘದ ರಾಜ್ಯ ಕಾರ್ಯದರ್ಶಿ ರಾಜು ಪವಾರ, ದುಂಡಪ್ಪಾ ಬೆಂಡವಾಡೆ, ಪ್ರಭು ಡಬ್ಬನ್ನವರ, ಪ್ರಶಾಂತ ಹುಕ್ಕೇರಿ, ಚಂದ್ರಕಾಂತ ಹುಕ್ಕೇರಿ ಮುಂತಾದವರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕೋಡಿ</strong>: ತಾಲ್ಲೂಕಿನ ಕರಗಾಂವ ಹಾಗೂ ಹನುಮಾನ ಏತನೀರಾವರಿ ಯೋಜನೆಗಳನ್ನು ಕೂಡಲೇ ಜಾರಿಗೆ ಆಗ್ರಹಿಸಿ ಡಿ.4 ರಂದು ಚಿಕ್ಕೋಡಿ ಸಂಪೂರ್ಣ ಬಂದ್ ಗೆ ಕರ್ನಾಟಕ ರಾಜ್ಯ ರೈತ ಸಂಘ ರಾಜ್ಯಾಧ್ಯಕ್ಷ ಚೂನಪ್ಪ ಪೂಜಾರಿ ಕರೆ ನೀಡಿದರು.</p>.<p>ಪಟ್ಟಣ ಲೋಕೋಪಯೋಗಿ ಇಲಾಖೆಯ ಪ್ರವಾಸಿ ಮಂದಿರದಲ್ಲಿ ಭಾನುವಾರ ಸುದ್ದಿಗೋಷ್ಢಿಯಲ್ಲಿ ಮಾತನಾಡಿದ ಅವರು, ಕರಗಾಂವ ಹಾಗು ಹನುಮಾನ ಏತನೀರಾವರಿ ಯೋಜನೆಗೊಳಪಡುವ ಗ್ರಾಮಗಳು ಹನಿ ನೀರಿಗೂ ಪರಿತಪಿಸುವ ಪರಿಸ್ಥಿತಿ ಎದುರಿಸಬೇಕಾಗಿದೆ. ಡಿ. 4 ರಂದು ಚಿಕ್ಕೋಡಿ ಪಟ್ಟಣದಲ್ಲಿ ಸಹಸ್ರಾರು ರೈತರು ಒಗ್ಗೂಡಿ ಬಸವೇಶ್ವರ ವೃತ್ತದಲ್ಲಿ ರಸ್ತೆ ತಡೆ ನಡೆಸಲಾಗುವುದು ಎಂದರು.</p>.<p>33 ಗ್ರಾಮಗಳನ್ನು ಒಳಪಡುವ ಈ ಎರಡೂ ನೀರಾವರಿ ಯೋಜನೆ ಜಾರಿಗೊಳಿಸುವುದಾಗಿ ಆಡಳಿದ ಸರ್ಕಾರಗಳು ಪೊಳ್ಳು ಭರವಸೆ ನೀಡುತ್ತ ಬಂದಿವೆ. ಚಿಕ್ಕೋಡಿ ಸದಗಲಾ ಶಾಸಕ ಗಣೇಶ ಹುಕ್ಕೇರಿ, ರಾಯಬಾಗ ಶಾಸಕ ದುರ್ಯೋಧನ ಐಹೊಳೆ ಹಲವು ಬಾರಿ ಯೋಜನೆಗೆ ಕಾಟಾಚಾರದ ಚಾಲನೆ ನೀಡಿದ್ದಾರೆ ಎಂದು ಕಿಡಿಕಾರಿದರು.</p>.<p>ಸುದ್ದಿಗೋಷ್ಢಿಯಲ್ಲಿ ರೈತ ಸಂಘದ ರಾಜ್ಯ ಕಾರ್ಯದರ್ಶಿ ರಾಜು ಪವಾರ, ದುಂಡಪ್ಪಾ ಬೆಂಡವಾಡೆ, ಪ್ರಭು ಡಬ್ಬನ್ನವರ, ಪ್ರಶಾಂತ ಹುಕ್ಕೇರಿ, ಚಂದ್ರಕಾಂತ ಹುಕ್ಕೇರಿ ಮುಂತಾದವರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>