<p><strong>ಬೆಳಗಾವಿ</strong>: ‘ಎಸ್.ಜಿ.ಬಾಳೇಕುಂದ್ರಿ ಬೆಳಗಾವಿ ಜಿಲ್ಲೆಯಲ್ಲಿ ಹಲವು ಸೇತುವೆ ನಿರ್ಮಿಸಿದ್ದರು. ಉತ್ತರ ಕರ್ನಾಟಕಕ್ಕೆ ನೀರಾವರಿ ಸೌಕರ್ಯ ಕಲ್ಪಿಸಿದ ಹಿಡಕಲ್, ಆಲಮಟ್ಟಿ, ನವಿಲುತೀರ್ಥ ಮತ್ತು ನಾರಾಯಣಪುರ ಜಲಾಶಯಗಳನ್ನು ನಿರ್ಮಿಸುವಲ್ಲಿ ಅವರ ಸೇವೆ ಸ್ಮರಣೀಯ’ ಎಂದು ನಿವೃತ್ತ ನ್ಯಾಯಾಧೀಶ ಉಲ್ಲಾಸ ಬಾಳೇಕುಂದ್ರಿ ಹೇಳಿದರು.<br><br>ಇಲ್ಲಿನ ಕನ್ನಡ ಭವನದಲ್ಲಿ ಹಮ್ಮಿಕೊಂಡಿದ್ದ ಕನ್ನಡ ಸಾಹಿತ್ಯ ಪರಿಷತ್ 110ನೇ ಸಂಸ್ಥಾಪನಾ ದಿನಾಚರಣೆ ಹಾಗೂ ಶತಮಾನ ಕಂಡ ಸಾಹಿತಿ, ನೀರಾವರಿ ತಜ್ಞ ಎಸ್.ಜಿ.ಬಾಳೇಕುಂದ್ರಿ ಬದುಕು–ಬರಹ ಕುರಿತಾದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಎಂಜಿನಿಯರ್ ಬಸವರಾಜ ಚೆಟ್ಟರ, ‘ಎಸ್.ಜಿ.ಬಾಳೇಕುಂದ್ರಿ ನೀರಾವರಿ ಕ್ಷೇತ್ರಕ್ಕೆ ನೀಡಿದ ಕೊಡುಗೆ ಅಪಾರ. ಲೋಕೋಪಯೋಗಿ ಇಲಾಖೆ ಮುಖ್ಯ ಸಿವಿಲ್ ಎಂಜಿನಿಯರ್ ಆಗಿದ್ದ ಅವರು, ಉತ್ತರ ಕರ್ನಾಟಕದಲ್ಲಿನ ಹಲವು ಪ್ರದೇಶಗಳ ನೀರಿನ ಅಭಾವ ನೀಗಿಸಿದ್ದರು’ ಎಂದು ಸ್ಮರಿಸಿದರು.</p>.<p>ಸಾಹಿತಿ ಅಶೋಕ ಉಳ್ಳೇಗಡ್ಡಿ ಮಾತನಾಡಿದರು. ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷೆ ಮಂಗಲಾ ಮೆಟಗುಡ್ಡ ಅಧ್ಯಕ್ಷತೆ ವಹಿಸಿದ್ದರು. ಸುರೇಶ ಹಂಜಿ, ಅವಿನಾಶ ಶಿಂಧಿಹಟ್ಟಿ, ಸ.ರಾ.ಸುಳಕೂಡೆ, ಬಿ.ಬಿ.ಮಠಪತಿ, ಆರ್.ಬಿ.ಬನಶಂಕರಿ, ಹೇಮಾ ಸೋನೊಳ್ಳಿ, ಜಯಶೀಲಾ ಬ್ಯಾಕೋಡ, ಬೀನಾ ಕತ್ತಿ ಉಪಸ್ಥಿತರಿದ್ದರು.</p>.<p>ಎಂ.ವೈ.ಮೆಣಸಿನಕಾಯಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಹೇಮಾವತಿ ಸೊನೊಳ್ಳಿ ಸ್ವಾಗತಿಸಿದರು. ವೀರಭದ್ರಪ್ಪ ಅಂಗಡಿ ಅತಿಥಿ ಪರಿಚಯಿಸಿದರು. ಮಲ್ಲಿಕಾರ್ಜುನ ಕೋಳಿ ನಿರೂಪಿಸಿದರು. ಶಿವಾನಂದ ತಲ್ಲೂರ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ</strong>: ‘ಎಸ್.ಜಿ.ಬಾಳೇಕುಂದ್ರಿ ಬೆಳಗಾವಿ ಜಿಲ್ಲೆಯಲ್ಲಿ ಹಲವು ಸೇತುವೆ ನಿರ್ಮಿಸಿದ್ದರು. ಉತ್ತರ ಕರ್ನಾಟಕಕ್ಕೆ ನೀರಾವರಿ ಸೌಕರ್ಯ ಕಲ್ಪಿಸಿದ ಹಿಡಕಲ್, ಆಲಮಟ್ಟಿ, ನವಿಲುತೀರ್ಥ ಮತ್ತು ನಾರಾಯಣಪುರ ಜಲಾಶಯಗಳನ್ನು ನಿರ್ಮಿಸುವಲ್ಲಿ ಅವರ ಸೇವೆ ಸ್ಮರಣೀಯ’ ಎಂದು ನಿವೃತ್ತ ನ್ಯಾಯಾಧೀಶ ಉಲ್ಲಾಸ ಬಾಳೇಕುಂದ್ರಿ ಹೇಳಿದರು.<br><br>ಇಲ್ಲಿನ ಕನ್ನಡ ಭವನದಲ್ಲಿ ಹಮ್ಮಿಕೊಂಡಿದ್ದ ಕನ್ನಡ ಸಾಹಿತ್ಯ ಪರಿಷತ್ 110ನೇ ಸಂಸ್ಥಾಪನಾ ದಿನಾಚರಣೆ ಹಾಗೂ ಶತಮಾನ ಕಂಡ ಸಾಹಿತಿ, ನೀರಾವರಿ ತಜ್ಞ ಎಸ್.ಜಿ.ಬಾಳೇಕುಂದ್ರಿ ಬದುಕು–ಬರಹ ಕುರಿತಾದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಎಂಜಿನಿಯರ್ ಬಸವರಾಜ ಚೆಟ್ಟರ, ‘ಎಸ್.ಜಿ.ಬಾಳೇಕುಂದ್ರಿ ನೀರಾವರಿ ಕ್ಷೇತ್ರಕ್ಕೆ ನೀಡಿದ ಕೊಡುಗೆ ಅಪಾರ. ಲೋಕೋಪಯೋಗಿ ಇಲಾಖೆ ಮುಖ್ಯ ಸಿವಿಲ್ ಎಂಜಿನಿಯರ್ ಆಗಿದ್ದ ಅವರು, ಉತ್ತರ ಕರ್ನಾಟಕದಲ್ಲಿನ ಹಲವು ಪ್ರದೇಶಗಳ ನೀರಿನ ಅಭಾವ ನೀಗಿಸಿದ್ದರು’ ಎಂದು ಸ್ಮರಿಸಿದರು.</p>.<p>ಸಾಹಿತಿ ಅಶೋಕ ಉಳ್ಳೇಗಡ್ಡಿ ಮಾತನಾಡಿದರು. ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷೆ ಮಂಗಲಾ ಮೆಟಗುಡ್ಡ ಅಧ್ಯಕ್ಷತೆ ವಹಿಸಿದ್ದರು. ಸುರೇಶ ಹಂಜಿ, ಅವಿನಾಶ ಶಿಂಧಿಹಟ್ಟಿ, ಸ.ರಾ.ಸುಳಕೂಡೆ, ಬಿ.ಬಿ.ಮಠಪತಿ, ಆರ್.ಬಿ.ಬನಶಂಕರಿ, ಹೇಮಾ ಸೋನೊಳ್ಳಿ, ಜಯಶೀಲಾ ಬ್ಯಾಕೋಡ, ಬೀನಾ ಕತ್ತಿ ಉಪಸ್ಥಿತರಿದ್ದರು.</p>.<p>ಎಂ.ವೈ.ಮೆಣಸಿನಕಾಯಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಹೇಮಾವತಿ ಸೊನೊಳ್ಳಿ ಸ್ವಾಗತಿಸಿದರು. ವೀರಭದ್ರಪ್ಪ ಅಂಗಡಿ ಅತಿಥಿ ಪರಿಚಯಿಸಿದರು. ಮಲ್ಲಿಕಾರ್ಜುನ ಕೋಳಿ ನಿರೂಪಿಸಿದರು. ಶಿವಾನಂದ ತಲ್ಲೂರ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>