ಹಾವೇರಿ ಜಿಲ್ಲೆಯ ಸವಣೂರು ತಾಲ್ಲೂಕು ಪಂಚಾಯ್ತಿ ಸಹಾಯಕ ನಿರ್ದೇಶಕರಾಗಿರುವ ಅವರು ಅ.23ರಂದು ಕಾಶ್ಮೀರದಿಂದ ಸೈಕಲ್ ಯಾತ್ರೆ ಆರಂಭಿಸಿದ್ದರು. ಪಂಜಾಬ್, ಹರಿಯಾಣ, ರಾಜಸ್ತಾನ, ಗುಜರಾತ್, ಮಹಾರಾಷ್ಟ್ರದ ಮೂಲಕ ಕರ್ನಾಟಕಕ್ಕೆ ಬಂದಿದ್ದಾರೆ. 19 ದಿನಗಳಲ್ಲಿ 7 ರಾಜ್ಯಗಳಲ್ಲಿ ಸಂಚರಿಸಿ ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವದ ಮಹತ್ವ ಸಾರಿದ್ದಾರೆ. ಪಂಚಾಯತ್ರಾಜ್ ಇಲಾಖೆಯ ಯೋಜನೆಗಳು ಹಾಗೂ ವ್ಯಸನಮುಕ್ತ ಸಮಾಜ ನಿರ್ಮಾಣದ ಕುರಿತು ಜಾಗೃತಿ ಮೂಡಿಸುತ್ತಿದ್ದಾರೆ.