<p><strong>ಬೆಳಗಾವಿ: ‘</strong>ಬಸವರಾಜ ಕಟ್ಟೀಮನಿಯವರು ತಮ್ಮ ಸಾಹಿತ್ಯದ ಮೂಲಕ ಸಮಾಜದ ಉದ್ಧಾರಕ್ಕಾಗಿ ಶ್ರಮಿಸಿದವರು. ಅವರ ಸಾಹಿತ್ಯ ಸಮಾಜಕ್ಕೆ ದಾರಿದೀಪವಾಗಿದೆ’ ಎಂದು ಕೆಎಲ್ಇ ಸಂಸ್ಥೆಯ ನಿರ್ದೇಶಕ ಮಹಾಂತೇಶ ಕವಟಗಿಮಠ ಹೇಳಿದರು.</p>.<p>ಇಲ್ಲಿನ ಲಿಂಗರಾಜ ಮಹಾವಿದ್ಯಾಲಯದಲ್ಲಿ ಬಸವರಾಜ ಕಟ್ಟೀಮನಿ ಪ್ರತಿಷ್ಠಾನದ ಸಹಯೋಗದಲ್ಲಿ ಶನಿವಾರ ಆಯೋಜಿಸಿದ್ದ ಬಸವರಾಜ ಕಟ್ಟೀಮನಿಯವರ ಮೂರು ಕೃತಿಗಳ ಬಿಡುಗಡೆ, ಗೌರವ ಸನ್ಮಾನ ಮತ್ತು ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಪುಸ್ತಕಗಳನ್ನು ಬಿಡುಗಡೆಗೊಳಿಸಿ ಮಾತನಾಡಿದ ಸಾಹಿತಿ ಪ್ರೊ.ಸಿದ್ಧಲಿಂಗ ಪಟ್ಟಣಶೆಟ್ಟಿ, ‘ಬಸವರಾಜ ಕಟ್ಟೀಮನಿಯವರು ಬಡವರ ಬದುಕು, ಕಷ್ಟ, ಅಸಹಾಯಕತೆ ತಿಳಿದು ಸಾಹಿತ್ಯ ರಚಿಸುತ್ತಿದ್ದರು. ಅವರು ತಮ್ಮ ಸಾಹಿತ್ಯದ ಮೂಲಕ ಜನರ ಮನದಲ್ಲಿ ಅಜರಾಮರಾಗಿದ್ದಾರೆ’ ಎಂದರು.</p>.<p>‘ಕಟ್ಟೀಮನಿ ಬದುಕು- ಬರಹ’ ಕೃತಿ ಕುರಿತು ಮಾತನಾಡಿದ ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ, ‘ಕಟ್ಟೀಮನಿ ನೇರ ನುಡಿಯ ಸಾಹಿತಿ ಮತ್ತು ಪತ್ರಕರ್ತರಾಗಿದ್ದರು. ಕನ್ನಡ ಸಾಹಿತ್ಯಕ್ಕೆ ಅಪಾರ ಕೊಡುಗೆ ನೀಡಿದ ಅವರ ಸಾಹಿತ್ಯವನ್ನು ವಿಶ್ವವಿದ್ಯಾಲಯಗಳು ತಮ್ಮ ಪಠ್ಯಕ್ರಮದಲ್ಲಿ ಅಳವಡಿಕೊಳ್ಳಬೇಕು’ ಎಂದು ತಿಳಿಸಿದರು.</p>.<p>‘ಬಸವರಾಜ ಕಟ್ಟೀಮನಿ ಕಥೆಗಳು:ಒಂದು ಅವಲೋಕನ’ ಕೃತಿ ಕುರಿತು ಮಾತನಾಡಿದ ಹಿರಿಯ ಲೇಖಕ ಚಂದ್ರಶೇಖರ ಅಕ್ಕಿ, ‘ಬಸವರಾಜ ಕಟ್ಟೀಮನಿ ಮಹಿಳಾ ಸಂವೇದನೆ ಕುರಿತಾಗಿಯೂ ಸಾಹಿತ್ಯ ರಚಿಸಿದ್ದರು. ಅವರ ಬರಹಗಳಲ್ಲಿ ಸಾಮಾಜಿಕ ಕಳಕಳಿಯಿತ್ತು. ಅದು ಜನರ ಮೆಚ್ಚುಗೆಗೆ ಪಾತ್ರವಾಗಿತ್ತು’ ಎಂದರು.</p>.<p>‘ಬಸವರಾಜ ಕಟ್ಟೀಮನಿಯವರ ಪ್ರಗತಿಶೀಲ ಕಾದಂಬರಿಗಳು’ ಕೃತಿ ಕುರಿತು ಮಾತನಾಡಿದ ಕಾದಂಬರಿಕಾರ ಡಾ.ಬಾಳಾಸಾಹೇಬ ಲೋಕಾಪುರ, ‘ಕಟ್ಟೀಮನಿಯವರು ಮಾನವತೆಯ ಧ್ವಜ ಎತ್ತಿಹಿಡಿದ ಸಾಹಿತಿ. ಅವರು ರಚಿಸಿದ್ದು ಮಾನವೀಯತೆ ಬೆಂಬಲಿಸುವ ಸಾಹಿತ್ಯವಾಗಿದೆ’ ಎಂದು ಪ್ರಶಂಸಿಸಿದರು.</p>.<p>ಅಧ್ಯಕ್ಷತೆ ವಹಿಸಿದ್ದ ಪ್ರತಿಷ್ಠಾನದ ಅಧ್ಯಕ್ಷ ಪ್ರೊ.ಮಲ್ಲಿಕಾರ್ಜುನ ಹಿರೇಮಠ, ‘ಕಟ್ಟೀಮನಿಯವರ ಸಾಹಿತ್ಯವನ್ನು ಸಮಾಜಕ್ಕೆ ತಲುಪಿಸುವ ಕಾರ್ಯವನ್ನು ಪ್ರತಿಷ್ಠಾನ ಮಾಡುತ್ತಿದೆ. ಈವರೆಗೆ ಅವರ 28 ಕೃತಿಗಳನ್ನು ಪ್ರಕಟಿಸಿದೆ’ ಎಂದು ಹೇಳಿದರು.</p>.<p>ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪಡೆದ ಸಾಹಿತಿ ಪ್ರೊ.ಧರಣೇಂದ್ರ ಕುರಕುರಿ ಅವರನ್ನು ಸನ್ಮಾನಿಸಲಾಯಿತು.</p>.<p>ವಿದ್ಯಾರ್ಥಿಗಳಾದ ಸ್ವಾತಿ ಕುರುಬರ, ಸಂಜನಾ ಯಂಬತ್ನಾಳ ಹಾಗೂ ಬಾಳೇಶ ಶಿರಣ್ಣವರ ಸಂವಾದ ನಡೆಸಿದರು. ಡಾ.ಸರಜೂ ಕಾಟ್ಕರ್, ಶಿರೀಷ ಜೋಷಿ, ದುರ್ಗಾದಾಸ್, ರಾಮಕೃಷ್ಣ ಮರಾಠೆ, ಪ್ರೇಮಾ ನಡುವಿನಮನಿ, ಪ್ರಾಚಾರ್ಯ ಹನುಮಂತ ಮೇಲಿನಮನಿ ಉಪಸ್ಥಿತರಿದ್ದರು. ವಿಜಯಲಕ್ಷ್ಮಿ ಅಕ್ಕನ್ನವರ ಪ್ರಾರ್ಥಿಸಿದರು. ಪ್ರತಿಷ್ಠಾನದ ಸದಸ್ಯ ಕಾರ್ಯದರ್ಶಿ ವಿದ್ಯಾವತಿ ಭಜಂತ್ರಿ ಸ್ವಾಗತಿಸಿದರು. ಡಾ.ಎಚ್.ಎಂ.ಚನ್ನಪ್ಪಗೋಳ ವಂದಿಸಿದರು. ಡಾ.ರೇಣುಕಾ ಕಠಾರಿ ಹಾಗೂ ಸಿದ್ದನಗೌಡ ಪಾಟೀಲ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ: ‘</strong>ಬಸವರಾಜ ಕಟ್ಟೀಮನಿಯವರು ತಮ್ಮ ಸಾಹಿತ್ಯದ ಮೂಲಕ ಸಮಾಜದ ಉದ್ಧಾರಕ್ಕಾಗಿ ಶ್ರಮಿಸಿದವರು. ಅವರ ಸಾಹಿತ್ಯ ಸಮಾಜಕ್ಕೆ ದಾರಿದೀಪವಾಗಿದೆ’ ಎಂದು ಕೆಎಲ್ಇ ಸಂಸ್ಥೆಯ ನಿರ್ದೇಶಕ ಮಹಾಂತೇಶ ಕವಟಗಿಮಠ ಹೇಳಿದರು.</p>.<p>ಇಲ್ಲಿನ ಲಿಂಗರಾಜ ಮಹಾವಿದ್ಯಾಲಯದಲ್ಲಿ ಬಸವರಾಜ ಕಟ್ಟೀಮನಿ ಪ್ರತಿಷ್ಠಾನದ ಸಹಯೋಗದಲ್ಲಿ ಶನಿವಾರ ಆಯೋಜಿಸಿದ್ದ ಬಸವರಾಜ ಕಟ್ಟೀಮನಿಯವರ ಮೂರು ಕೃತಿಗಳ ಬಿಡುಗಡೆ, ಗೌರವ ಸನ್ಮಾನ ಮತ್ತು ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಪುಸ್ತಕಗಳನ್ನು ಬಿಡುಗಡೆಗೊಳಿಸಿ ಮಾತನಾಡಿದ ಸಾಹಿತಿ ಪ್ರೊ.ಸಿದ್ಧಲಿಂಗ ಪಟ್ಟಣಶೆಟ್ಟಿ, ‘ಬಸವರಾಜ ಕಟ್ಟೀಮನಿಯವರು ಬಡವರ ಬದುಕು, ಕಷ್ಟ, ಅಸಹಾಯಕತೆ ತಿಳಿದು ಸಾಹಿತ್ಯ ರಚಿಸುತ್ತಿದ್ದರು. ಅವರು ತಮ್ಮ ಸಾಹಿತ್ಯದ ಮೂಲಕ ಜನರ ಮನದಲ್ಲಿ ಅಜರಾಮರಾಗಿದ್ದಾರೆ’ ಎಂದರು.</p>.<p>‘ಕಟ್ಟೀಮನಿ ಬದುಕು- ಬರಹ’ ಕೃತಿ ಕುರಿತು ಮಾತನಾಡಿದ ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ, ‘ಕಟ್ಟೀಮನಿ ನೇರ ನುಡಿಯ ಸಾಹಿತಿ ಮತ್ತು ಪತ್ರಕರ್ತರಾಗಿದ್ದರು. ಕನ್ನಡ ಸಾಹಿತ್ಯಕ್ಕೆ ಅಪಾರ ಕೊಡುಗೆ ನೀಡಿದ ಅವರ ಸಾಹಿತ್ಯವನ್ನು ವಿಶ್ವವಿದ್ಯಾಲಯಗಳು ತಮ್ಮ ಪಠ್ಯಕ್ರಮದಲ್ಲಿ ಅಳವಡಿಕೊಳ್ಳಬೇಕು’ ಎಂದು ತಿಳಿಸಿದರು.</p>.<p>‘ಬಸವರಾಜ ಕಟ್ಟೀಮನಿ ಕಥೆಗಳು:ಒಂದು ಅವಲೋಕನ’ ಕೃತಿ ಕುರಿತು ಮಾತನಾಡಿದ ಹಿರಿಯ ಲೇಖಕ ಚಂದ್ರಶೇಖರ ಅಕ್ಕಿ, ‘ಬಸವರಾಜ ಕಟ್ಟೀಮನಿ ಮಹಿಳಾ ಸಂವೇದನೆ ಕುರಿತಾಗಿಯೂ ಸಾಹಿತ್ಯ ರಚಿಸಿದ್ದರು. ಅವರ ಬರಹಗಳಲ್ಲಿ ಸಾಮಾಜಿಕ ಕಳಕಳಿಯಿತ್ತು. ಅದು ಜನರ ಮೆಚ್ಚುಗೆಗೆ ಪಾತ್ರವಾಗಿತ್ತು’ ಎಂದರು.</p>.<p>‘ಬಸವರಾಜ ಕಟ್ಟೀಮನಿಯವರ ಪ್ರಗತಿಶೀಲ ಕಾದಂಬರಿಗಳು’ ಕೃತಿ ಕುರಿತು ಮಾತನಾಡಿದ ಕಾದಂಬರಿಕಾರ ಡಾ.ಬಾಳಾಸಾಹೇಬ ಲೋಕಾಪುರ, ‘ಕಟ್ಟೀಮನಿಯವರು ಮಾನವತೆಯ ಧ್ವಜ ಎತ್ತಿಹಿಡಿದ ಸಾಹಿತಿ. ಅವರು ರಚಿಸಿದ್ದು ಮಾನವೀಯತೆ ಬೆಂಬಲಿಸುವ ಸಾಹಿತ್ಯವಾಗಿದೆ’ ಎಂದು ಪ್ರಶಂಸಿಸಿದರು.</p>.<p>ಅಧ್ಯಕ್ಷತೆ ವಹಿಸಿದ್ದ ಪ್ರತಿಷ್ಠಾನದ ಅಧ್ಯಕ್ಷ ಪ್ರೊ.ಮಲ್ಲಿಕಾರ್ಜುನ ಹಿರೇಮಠ, ‘ಕಟ್ಟೀಮನಿಯವರ ಸಾಹಿತ್ಯವನ್ನು ಸಮಾಜಕ್ಕೆ ತಲುಪಿಸುವ ಕಾರ್ಯವನ್ನು ಪ್ರತಿಷ್ಠಾನ ಮಾಡುತ್ತಿದೆ. ಈವರೆಗೆ ಅವರ 28 ಕೃತಿಗಳನ್ನು ಪ್ರಕಟಿಸಿದೆ’ ಎಂದು ಹೇಳಿದರು.</p>.<p>ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪಡೆದ ಸಾಹಿತಿ ಪ್ರೊ.ಧರಣೇಂದ್ರ ಕುರಕುರಿ ಅವರನ್ನು ಸನ್ಮಾನಿಸಲಾಯಿತು.</p>.<p>ವಿದ್ಯಾರ್ಥಿಗಳಾದ ಸ್ವಾತಿ ಕುರುಬರ, ಸಂಜನಾ ಯಂಬತ್ನಾಳ ಹಾಗೂ ಬಾಳೇಶ ಶಿರಣ್ಣವರ ಸಂವಾದ ನಡೆಸಿದರು. ಡಾ.ಸರಜೂ ಕಾಟ್ಕರ್, ಶಿರೀಷ ಜೋಷಿ, ದುರ್ಗಾದಾಸ್, ರಾಮಕೃಷ್ಣ ಮರಾಠೆ, ಪ್ರೇಮಾ ನಡುವಿನಮನಿ, ಪ್ರಾಚಾರ್ಯ ಹನುಮಂತ ಮೇಲಿನಮನಿ ಉಪಸ್ಥಿತರಿದ್ದರು. ವಿಜಯಲಕ್ಷ್ಮಿ ಅಕ್ಕನ್ನವರ ಪ್ರಾರ್ಥಿಸಿದರು. ಪ್ರತಿಷ್ಠಾನದ ಸದಸ್ಯ ಕಾರ್ಯದರ್ಶಿ ವಿದ್ಯಾವತಿ ಭಜಂತ್ರಿ ಸ್ವಾಗತಿಸಿದರು. ಡಾ.ಎಚ್.ಎಂ.ಚನ್ನಪ್ಪಗೋಳ ವಂದಿಸಿದರು. ಡಾ.ರೇಣುಕಾ ಕಠಾರಿ ಹಾಗೂ ಸಿದ್ದನಗೌಡ ಪಾಟೀಲ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>