<p><strong>ಕೌಜಲಗಿ:</strong> ಸ್ಥಳೀಯರ ಅಗತ್ಯಕ್ಕನುಗುಣವಾಗಿ ಬಸ್ ತಂಗುದಾಣ ಮತ್ತು ಗ್ರಾಮೀಣ ಪ್ರದೇಶದ ಜನತೆಯ ಮನರಂಜನೆಗೆ ಬಯಲು ರಂಗ ಮಂದಿರಗಳನ್ನು ನಿರ್ಮಿಸಿ ಕೊಡಲಾಗುತ್ತಿದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು.</p>.<p>ಪಟ್ಟಣದ ಹಳೆ ಬಸ್ ನಿಲ್ದಾಣದಲ್ಲಿ ಶನಿವಾರ ರಡ್ಡೆರಟ್ಟಿ, ಮನ್ನಿಕೇರಿ, ಮೆಳವಂಕಿ ಗ್ರಾಮಗಳಲ್ಲಿ ರಾಜ್ಯ ಸಭಾ ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯ ಅನುದಾನದಡಿ ನಿರ್ಮಿಸಲಾದ ಬಸ್ ತಂಗುದಾನ ಉದ್ಘಾಟಿಸಿ ಮಾತನಾಡಿದರು.</p>.<p>ಸಮಾಜ ಅಭಿವೃದ್ಧಿ ಕಾರ್ಯಗಳಿಗೆ ಗ್ರಾಮಸ್ಥರ ಸಹಕಾರವಿರಬೇಕು. ಪರಸ್ಪರ ಸಹಕಾರ ಮನೋಭಾವದಿಂದ ಉತ್ತಮ ಸಮಾಜ ನಿರ್ಮಿಸಲು ಸಾಧ್ಯ. ಗ್ರಾಮದ ಪ್ರತಿ ಸಮುದಾಯಗಳ ಅಭಿವೃದ್ಧಿಗೆ ಸರ್ಕಾರ ಹಲವು ಯೋಜನೆಗಳನ್ನು ಸವಲತ್ತುಗಳನ್ನು ರೂಪಿಸಿದೆ. ಗ್ರಾಮಸ್ಥರು ಯೋಜನೆಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದರು.</p>.<p>ಪ್ರಮುಖರಾದ ಈರಪ್ಪ ನಾಯ್ಕರ, ಮುತ್ತೆಪ್ಪ ನಾಂವಿ, ಮಹಾಂತೇಶ ದಳವಾಯಿ, , ಬಸವರಾಜ ಅಂಗಡಿ, ಯಲ್ಲಪ್ಪ ನಾಯ್ಕರ, ಬಸವರಾಜ ನಾಯ್ಕರ, ರಾಜು ಗೌಡರ, ಬಸವರಾಜ ಒಣಕಣವಿ, ಮಹಾಂತೇಶ ಕಂಬಾರ, ಗೂಳಪ್ಪ ನಾಡಗೌಡ, ಬಸು ತೋಟಗಿ, ಮಹಾಂತೇಶ ಅಂಗಡಿ, ಸುಭಾಸ ಪೂಜೇರಿ ಸೇರಿದಂತೆ ಕೌಜಲಗಿ, ಮನ್ನಿಕೇರಿ, ಮೇಳವಂಕಿ ಗ್ರಾಮಗಳ ಮುಖಂಡರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೌಜಲಗಿ:</strong> ಸ್ಥಳೀಯರ ಅಗತ್ಯಕ್ಕನುಗುಣವಾಗಿ ಬಸ್ ತಂಗುದಾಣ ಮತ್ತು ಗ್ರಾಮೀಣ ಪ್ರದೇಶದ ಜನತೆಯ ಮನರಂಜನೆಗೆ ಬಯಲು ರಂಗ ಮಂದಿರಗಳನ್ನು ನಿರ್ಮಿಸಿ ಕೊಡಲಾಗುತ್ತಿದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು.</p>.<p>ಪಟ್ಟಣದ ಹಳೆ ಬಸ್ ನಿಲ್ದಾಣದಲ್ಲಿ ಶನಿವಾರ ರಡ್ಡೆರಟ್ಟಿ, ಮನ್ನಿಕೇರಿ, ಮೆಳವಂಕಿ ಗ್ರಾಮಗಳಲ್ಲಿ ರಾಜ್ಯ ಸಭಾ ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯ ಅನುದಾನದಡಿ ನಿರ್ಮಿಸಲಾದ ಬಸ್ ತಂಗುದಾನ ಉದ್ಘಾಟಿಸಿ ಮಾತನಾಡಿದರು.</p>.<p>ಸಮಾಜ ಅಭಿವೃದ್ಧಿ ಕಾರ್ಯಗಳಿಗೆ ಗ್ರಾಮಸ್ಥರ ಸಹಕಾರವಿರಬೇಕು. ಪರಸ್ಪರ ಸಹಕಾರ ಮನೋಭಾವದಿಂದ ಉತ್ತಮ ಸಮಾಜ ನಿರ್ಮಿಸಲು ಸಾಧ್ಯ. ಗ್ರಾಮದ ಪ್ರತಿ ಸಮುದಾಯಗಳ ಅಭಿವೃದ್ಧಿಗೆ ಸರ್ಕಾರ ಹಲವು ಯೋಜನೆಗಳನ್ನು ಸವಲತ್ತುಗಳನ್ನು ರೂಪಿಸಿದೆ. ಗ್ರಾಮಸ್ಥರು ಯೋಜನೆಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದರು.</p>.<p>ಪ್ರಮುಖರಾದ ಈರಪ್ಪ ನಾಯ್ಕರ, ಮುತ್ತೆಪ್ಪ ನಾಂವಿ, ಮಹಾಂತೇಶ ದಳವಾಯಿ, , ಬಸವರಾಜ ಅಂಗಡಿ, ಯಲ್ಲಪ್ಪ ನಾಯ್ಕರ, ಬಸವರಾಜ ನಾಯ್ಕರ, ರಾಜು ಗೌಡರ, ಬಸವರಾಜ ಒಣಕಣವಿ, ಮಹಾಂತೇಶ ಕಂಬಾರ, ಗೂಳಪ್ಪ ನಾಡಗೌಡ, ಬಸು ತೋಟಗಿ, ಮಹಾಂತೇಶ ಅಂಗಡಿ, ಸುಭಾಸ ಪೂಜೇರಿ ಸೇರಿದಂತೆ ಕೌಜಲಗಿ, ಮನ್ನಿಕೇರಿ, ಮೇಳವಂಕಿ ಗ್ರಾಮಗಳ ಮುಖಂಡರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>