<p>ಬೆಳಗಾವಿ: ಬೆಂಗಳೂರಿನ ಬಸವ ಸಮಿತಿಯು ಬಸವ ಭವನದಲ್ಲಿ ಶುಕ್ರವಾರ ಆಯೋಜಿಸಿದ್ದ ಬಸವ ಜಯಂತಿ ಸಮಾರಂಭದಲ್ಲಿ ಕೆಎಲ್ಇ ಸಂಸ್ಥೆಯ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ ಅವರಿಗೆ ‘ಕಾಯಕರತ್ನ’ ಪ್ರಶಸ್ತಿ ಪ್ರದಾನ ಮಾಡಲಾಯಿತು.</p>.<p>ಕೋರೆ ಅವರು 40 ವರ್ಷಗಳಿಂದ ಕೆಎಲ್ಇ ಸಂಸ್ಥೆಯ ಕಾರ್ಯಾಧ್ಯಕ್ಷರಾಗಿ, ಸಹಕಾರ, ಕೃಷಿ, ಶಿಕ್ಷಣ, ಆರೋಗ್ಯ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆ ಪರಿಗಣಿಸಿ ಈ ಪ್ರಶಸ್ತಿ ನೀಡಲಾಯಿತು.</p>.<p>ಬೇಲಿಮಠದ ಶಿವರುದ್ರ ಸ್ವಾಮೀಜಿ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ, ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವ ಈಶ್ವರ ಖಂಡ್ರೆ, ಬಸವ ಸಮಿತಿ ಅಧ್ಯಕ್ಷ ಅರವಿಂದ ಜತ್ತಿ ಅವರು ಕೋರೆ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು.</p>.<p>ಈ ಸಂದರ್ಭದಲ್ಲಿ ಪ್ರಭಾಕರ ಕೋರೆ ಮಾತನಾಡಿ, ‘ಬಸವಣ್ಣ ಈ ಜಗತ್ತು ಕಂಡ ಅಪ್ರತಿಮ ದಾರ್ಶನಿಕರು. 850 ವರ್ಷಗಳ ಹಿಂದೆ ಅವರು ಕೈಗೊಂಡ ಸಾಮಾಜಿಕ, ಧಾರ್ಮಿಕ, ಸಾಹಿತ್ಯ ಮತ್ತು ಶೈಕ್ಷಣಿಕ ಕ್ರಾಂತಿಯು ಇಂದಿಗೂ ಇಡೀ ಜಗತ್ತಿಗೆ ಆದರ್ಶಪ್ರಾಯವಾಗಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಳಗಾವಿ: ಬೆಂಗಳೂರಿನ ಬಸವ ಸಮಿತಿಯು ಬಸವ ಭವನದಲ್ಲಿ ಶುಕ್ರವಾರ ಆಯೋಜಿಸಿದ್ದ ಬಸವ ಜಯಂತಿ ಸಮಾರಂಭದಲ್ಲಿ ಕೆಎಲ್ಇ ಸಂಸ್ಥೆಯ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ ಅವರಿಗೆ ‘ಕಾಯಕರತ್ನ’ ಪ್ರಶಸ್ತಿ ಪ್ರದಾನ ಮಾಡಲಾಯಿತು.</p>.<p>ಕೋರೆ ಅವರು 40 ವರ್ಷಗಳಿಂದ ಕೆಎಲ್ಇ ಸಂಸ್ಥೆಯ ಕಾರ್ಯಾಧ್ಯಕ್ಷರಾಗಿ, ಸಹಕಾರ, ಕೃಷಿ, ಶಿಕ್ಷಣ, ಆರೋಗ್ಯ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆ ಪರಿಗಣಿಸಿ ಈ ಪ್ರಶಸ್ತಿ ನೀಡಲಾಯಿತು.</p>.<p>ಬೇಲಿಮಠದ ಶಿವರುದ್ರ ಸ್ವಾಮೀಜಿ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ, ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವ ಈಶ್ವರ ಖಂಡ್ರೆ, ಬಸವ ಸಮಿತಿ ಅಧ್ಯಕ್ಷ ಅರವಿಂದ ಜತ್ತಿ ಅವರು ಕೋರೆ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು.</p>.<p>ಈ ಸಂದರ್ಭದಲ್ಲಿ ಪ್ರಭಾಕರ ಕೋರೆ ಮಾತನಾಡಿ, ‘ಬಸವಣ್ಣ ಈ ಜಗತ್ತು ಕಂಡ ಅಪ್ರತಿಮ ದಾರ್ಶನಿಕರು. 850 ವರ್ಷಗಳ ಹಿಂದೆ ಅವರು ಕೈಗೊಂಡ ಸಾಮಾಜಿಕ, ಧಾರ್ಮಿಕ, ಸಾಹಿತ್ಯ ಮತ್ತು ಶೈಕ್ಷಣಿಕ ಕ್ರಾಂತಿಯು ಇಂದಿಗೂ ಇಡೀ ಜಗತ್ತಿಗೆ ಆದರ್ಶಪ್ರಾಯವಾಗಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>