<p><strong>ಖಾನಾಪುರ</strong>: ತಾಲ್ಲೂಕಿನ ನಂದಗಡ ಗ್ರಾಮದ ವಿರಕ್ತಮಠದಲ್ಲಿ ಗೋಶಾಲೆ ನಿರ್ಮಾಣ ಮತ್ತು ಮಠದ ಜೀರ್ಣೋದ್ಧಾರಕ್ಕೆ ಸರ್ಕಾರದಿಂದ ವಿಶೇಷ ಅನುದಾನ ಮಂಜೂರು ಮಾಡುವಂತೆ ಮಠದ ಉತ್ತರಾಧಿಕಾರಿ ಚನ್ನವೀರದೇವರು ಅವರು ಡಿಸಿ ಮೊಹಮ್ಮದ ರೋಷನ್ ಅವರಿಗೆ ಮನವಿ ಸಲ್ಲಿಸಿದರು.</p>.<p>ಬೆಳಗಾವಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಶುಕ್ರವಾರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿ ಮಾತನಾಡಿದ ಶ್ರೀಗಳು, ’ನಂದಗಡ ವಿರಕ್ತಮಠಕ್ಕೆ ಶತಮಾನಗಳ ಇತಿಹಾಸವಿದೆ. ಈ ಮಠಕ್ಕೆ ಅಸಂಖ್ಯಾತ ಭಕ್ತರಿದ್ದಾರೆ. ಮಠದಲ್ಲಿ ನಿತ್ಯ ಧಾರ್ಮಿಕ ಕಾರ್ಯಕ್ರಮಗಳು, ಪೂಜೆ-ಪುನಸ್ಕಾರ, ಸತ್ಸಂಗಗಳು ನಡೆಯುತ್ತಿರುತ್ತವೆ. ಇತ್ತೀಚಿನ ದಿನಗಳಲ್ಲಿ ಮಠದ ಕಟ್ಟಡ ಶಿಥಿಲಗೊಂಡಿದ್ದು, ಭಕ್ತರು ಮತ್ತು ಸರ್ಕಾರದ ಸಹಯೋಗದಲ್ಲಿ ಕಟ್ಟಡವನ್ನು ಜೀರ್ಣೋದ್ಧಾರಗೊಳಿಸಬೇಕು ಮತ್ತು ಮಠದಲ್ಲಿ ಒಂದು ಸುಸಜ್ಜಿತ ಗೋಶಾಲೆ ಆರಂಭಿಸಬೇಕು ಎಂಬ ಉದ್ದೇಶವಿದೆ. ಹೀಗಾಗಿ ಸರ್ಕಾರದಿಂದ ಮಠಕ್ಕೆ ಅಗತ್ಯ ಸಹಾಯ-ಸಹಕಾರ ಒದಗಿಸಬೇಕು ಎಂದು ಕೋರಿದರು.</p>.<p>ನಂದಗಡ ಗ್ರಾಮದ ಮುಖಂಡರಾದ ಮಹಾಂತೇಶ ವಾಲಿ, ಮೋರೇಶ್ವರ ಮುನವಳ್ಳಿ, ಪ್ರಕಾಶ ಗುಡಿ, ರಾಜು ಜೋಡಂಗಿ, ಖಾನಾಪುರದ ಭಕ್ತರಾದ ಅಪ್ಪಯ್ಯ ಕೋಡೊಳಿ, ರವಿ ಕಾಡಗಿ ಮತ್ತಿತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಖಾನಾಪುರ</strong>: ತಾಲ್ಲೂಕಿನ ನಂದಗಡ ಗ್ರಾಮದ ವಿರಕ್ತಮಠದಲ್ಲಿ ಗೋಶಾಲೆ ನಿರ್ಮಾಣ ಮತ್ತು ಮಠದ ಜೀರ್ಣೋದ್ಧಾರಕ್ಕೆ ಸರ್ಕಾರದಿಂದ ವಿಶೇಷ ಅನುದಾನ ಮಂಜೂರು ಮಾಡುವಂತೆ ಮಠದ ಉತ್ತರಾಧಿಕಾರಿ ಚನ್ನವೀರದೇವರು ಅವರು ಡಿಸಿ ಮೊಹಮ್ಮದ ರೋಷನ್ ಅವರಿಗೆ ಮನವಿ ಸಲ್ಲಿಸಿದರು.</p>.<p>ಬೆಳಗಾವಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಶುಕ್ರವಾರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿ ಮಾತನಾಡಿದ ಶ್ರೀಗಳು, ’ನಂದಗಡ ವಿರಕ್ತಮಠಕ್ಕೆ ಶತಮಾನಗಳ ಇತಿಹಾಸವಿದೆ. ಈ ಮಠಕ್ಕೆ ಅಸಂಖ್ಯಾತ ಭಕ್ತರಿದ್ದಾರೆ. ಮಠದಲ್ಲಿ ನಿತ್ಯ ಧಾರ್ಮಿಕ ಕಾರ್ಯಕ್ರಮಗಳು, ಪೂಜೆ-ಪುನಸ್ಕಾರ, ಸತ್ಸಂಗಗಳು ನಡೆಯುತ್ತಿರುತ್ತವೆ. ಇತ್ತೀಚಿನ ದಿನಗಳಲ್ಲಿ ಮಠದ ಕಟ್ಟಡ ಶಿಥಿಲಗೊಂಡಿದ್ದು, ಭಕ್ತರು ಮತ್ತು ಸರ್ಕಾರದ ಸಹಯೋಗದಲ್ಲಿ ಕಟ್ಟಡವನ್ನು ಜೀರ್ಣೋದ್ಧಾರಗೊಳಿಸಬೇಕು ಮತ್ತು ಮಠದಲ್ಲಿ ಒಂದು ಸುಸಜ್ಜಿತ ಗೋಶಾಲೆ ಆರಂಭಿಸಬೇಕು ಎಂಬ ಉದ್ದೇಶವಿದೆ. ಹೀಗಾಗಿ ಸರ್ಕಾರದಿಂದ ಮಠಕ್ಕೆ ಅಗತ್ಯ ಸಹಾಯ-ಸಹಕಾರ ಒದಗಿಸಬೇಕು ಎಂದು ಕೋರಿದರು.</p>.<p>ನಂದಗಡ ಗ್ರಾಮದ ಮುಖಂಡರಾದ ಮಹಾಂತೇಶ ವಾಲಿ, ಮೋರೇಶ್ವರ ಮುನವಳ್ಳಿ, ಪ್ರಕಾಶ ಗುಡಿ, ರಾಜು ಜೋಡಂಗಿ, ಖಾನಾಪುರದ ಭಕ್ತರಾದ ಅಪ್ಪಯ್ಯ ಕೋಡೊಳಿ, ರವಿ ಕಾಡಗಿ ಮತ್ತಿತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>