ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಖಾನಾಪುರ: ಅನುಚಿತ ವರ್ತನೆ- ಪಪಂ ಉಪಾಧ್ಯಕ್ಷೆ ಪುತ್ರನ ಬಂಧನ

Published 18 ಜೂನ್ 2023, 15:52 IST
Last Updated 18 ಜೂನ್ 2023, 15:52 IST
ಅಕ್ಷರ ಗಾತ್ರ

ಖಾನಾಪುರ: ನಗರದಲ್ಲಿ ಶನಿವಾರ ತಡರಾತ್ರಿ ಹೋಟೆಲ್‌ವೊಂದರಲ್ಲಿದ್ದ ಪಟ್ಟಣ ಪಂಚಾಯಿತಿ ಉಪಾಧ್ಯಕ್ಷೆಯ ಪುತ್ರ ಶ್ರೀಧರ ಅಂಕಲಗಿ ಅವರಿಗೆ ಹೊರಹೋಗುವಂತೆ ಸೂಚಿಸಿದ ಪೊಲೀಸ್‌ ಸಿಬ್ಬಂದಿ ವಿರುದ್ಧ ಅನುಚಿತವಾಗಿ ವರ್ತನೆ ಮಾಡಿರುವುದಕ್ಕೆ ಸಂಬಂಧಿಸಿದಂತೆ ಖಾನಾಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಬಂಧಿಸಿದ್ದಾರೆ.

ಹೋಟೆಲ್‌ ಸಿಬ್ಬಂದಿ ಸೂಚಿಸಿದರೂ ಸ್ನೇಹಿತರೊಂದಿಗೆ ಊಟ ಮಾಡಿ ಶ್ರೀಧರ ಹರಟೆ ಹೊಡೆಯುತ್ತಾ ಕುಳಿತಿದ್ದರು. ಇದರಿಂದ ರೋಸಿಹೋದ ಹೋಟೆಲ್‌ ಮಾಲೀಕ ಪೊಲೀಸರಿಗೆ ಫೋನ್‌ ಮಾಡಿ ವಿಷಯ ತಿಳಿಸಿದ. ಕೂಡಲೇ ಸ್ಥಳಕ್ಕೆ ಧಾವಿಸಿದ ಗಸ್ತು ಪೊಲೀಸರನ್ನು ಕೂಡಾ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಪೊಲೀಸ್ ಗಸ್ತು ಸಿಬ್ಬಂದಿ ನೀಡಿದ ದೂರಿನನ್ವಯ ಶ್ರೀಧರನನ್ನು ಬಂಧಿಸಿ ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಧೀಶರ ಸೂಚನೆಯಂತೆ ಬೆಳಗಾವಿಯ ಜಿಲ್ಲಾ ಕಾರಾಗೃಹಕ್ಕೆ ರವಾನಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT