ಹೋಟೆಲ್ ಸಿಬ್ಬಂದಿ ಸೂಚಿಸಿದರೂ ಸ್ನೇಹಿತರೊಂದಿಗೆ ಊಟ ಮಾಡಿ ಶ್ರೀಧರ ಹರಟೆ ಹೊಡೆಯುತ್ತಾ ಕುಳಿತಿದ್ದರು. ಇದರಿಂದ ರೋಸಿಹೋದ ಹೋಟೆಲ್ ಮಾಲೀಕ ಪೊಲೀಸರಿಗೆ ಫೋನ್ ಮಾಡಿ ವಿಷಯ ತಿಳಿಸಿದ. ಕೂಡಲೇ ಸ್ಥಳಕ್ಕೆ ಧಾವಿಸಿದ ಗಸ್ತು ಪೊಲೀಸರನ್ನು ಕೂಡಾ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಪೊಲೀಸ್ ಗಸ್ತು ಸಿಬ್ಬಂದಿ ನೀಡಿದ ದೂರಿನನ್ವಯ ಶ್ರೀಧರನನ್ನು ಬಂಧಿಸಿ ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಧೀಶರ ಸೂಚನೆಯಂತೆ ಬೆಳಗಾವಿಯ ಜಿಲ್ಲಾ ಕಾರಾಗೃಹಕ್ಕೆ ರವಾನಿಸಲಾಗಿದೆ.