<p><strong>ಖಾನಾಪುರ:</strong> ‘ಖಾನಾಪುರ ರೈಲು ನಿಲ್ದಾಣವನ್ನು 2026ರ ಜೂನ್ ಒಳಗಾಗಿ, ಹೈಟೆಕ್ ದರ್ಜೆಗೆ ಏರಿಸಲು ಪ್ರಯತ್ನಿಸಲಾಗುವುದು’ ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಭರವಸೆ ನೀಡಿದರು.</p>.<p>ಸ್ಥಳೀಯ ರೈಲು ನಿಲ್ದಾಣದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಸೋಮವಾರ ಚಾಲನೆ ನೀಡಿ ಅವರು ಮಾತನಾಡಿದರು.</p>.<p>‘ಖಾನಾಪುರ ರೈಲು ನಿಲ್ದಾಣದಲ್ಲಿ ₹3 ಕೋಟಿ ವೆಚ್ಚದಲ್ಲಿ ಪ್ರಯಾಣಿಕರಿಗೆ ಮೂಲಸೌಕರ್ಯ ಒದಗಿಸುವ, ₹11 ಕೋಟಿ ವೆಚ್ಚದಲ್ಲಿ ನಿಲ್ದಾಣದ ಪಕ್ಕದಲ್ಲಿ ಕೆಳಸೇತುವೆ ನಿರ್ಮಿಸುವ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಲಾಗಿದೆ. ಬೆಳಗಾವಿ ಮತ್ತು ಖಾನಾಪುರ ನಿಲ್ದಾಣಗಳನ್ನು ಮಾದರಿಯಾಗಿಸುವ ನಿಟ್ಟಿನಲ್ಲಿ ರೈಲ್ವೆ ಇಲಾಖೆ ಯೋಜನೆ ರೂಪಿಸಿದೆ’ ಎಂದರು.</p>.<p>‘ಹುಬ್ಬಳ್ಳಿ-ದಾಂಡೇಲಿ ರೈಲ್ವೆ ಮಾರ್ಗದ ಕಾಮಗಾರಿ ಪೂರ್ಣಗೊಂಡಿದೆ. ಮುಂದಿನ ತಿಂಗಳು ಈ ಮಾರ್ಗದಲ್ಲಿ ರೈಲು ಸೇವೆ ಆರಂಭಗೊಳ್ಳಲಿದೆ. ಲೋಂಡಾ-ಮೀರಜ್ ಮಾರ್ಗದ 186 ಕಿ.ಮೀ. ವಿದ್ಯುದೀಕರಣ ಕಾರ್ಯವೂ ಮುಗಿದಿದೆ’ ಎಂದು ತಿಳಿಸಿದರು.</p>.<p>‘ವಾಸ್ಕೋ–ನಿಜಾಮುದ್ದೀನ್ ಗೋವಾ ಎಕ್ಸ್ಪ್ರೆಸ್, ಬೆಳಗಾವಿ-ಬೆಂಗಳೂರು ಎಕ್ಸ್ಪ್ರೆಸ್ ರೈಲುಗಳಿಗೆ ಖಾನಾಪುರ ನಿಲ್ದಾಣದಲ್ಲಿ ನಿಲುಗಡೆಗೆ ಅವಕಾಶ ಕಲ್ಪಿಸಬೇಕು. ವಾಸ್ಕೋ– ಪಂಢರಪುರ ಮಾರ್ಗದಲ್ಲಿ ನಿತ್ಯ ರೈಲು ಸೇವೆ ಆರಂಭಿಸಬೇಕು ಎಂದು ಜನಪ್ರತಿನಿಧಿಗಳು, ಸಾರ್ವಜನಿಕರು ಮನವಿ ಸಲ್ಲಿಸಿದ್ದಾರೆ. ಹಂತ-ಹಂತವಾಗಿ ಬೇಡಿಕೆ ಈಡೇರಿಸಲಾಗುವುದು’ ಎಂದು ಭರವಸೆ ಕೊಟ್ಟರು.</p>.<p>‘ರೈಲು ನಿಲ್ದಾಣಗಳು ಜನಸಾಮಾನ್ಯರ ಜೀವನಾಡಿಗಳಾಗಿವೆ. ಯುಪಿಎ ಸರ್ಕಾರದ ಅವಧಿಯಲ್ಲಿ ರೈಲು ನಿಲ್ದಾಣಗಳ ಅಭಿವೃದ್ಧಿ ನಿರ್ಲಕ್ಷಿಸಲಾಗಿತ್ತು. ಎನ್ಡಿಎ ಸರ್ಕಾರದ ಅವಧಿಯಲ್ಲಿ ನಿಲ್ದಾಣಗಳು, ಮಾರ್ಗಗಳು ಮತ್ತು ರೈಲುಗಳನ್ನು ಉನ್ನತೀಕರಿಸಲಾಗಿದೆ. ₹29 ಸಾವಿರ ಕೋಟಿ ವೆಚ್ಚದಲ್ಲಿ ರೈಲ್ವೆ ಇಲಾಖೆ ವಿವಿಧ ಜನಪರ ಕಾರ್ಯ ಕೈಗೊಂಡಿದೆ’ ಎಂದರು.</p>.<p>ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ, ‘ಹುಬ್ಬಳ್ಳಿ–ದಾದರ ಎಕ್ಸ್ಪ್ರೆಸ್ ರೈಲನ್ನು ಖಾನಾಪುರ ನಿಲ್ದಾಣದಲ್ಲಿ ಒಂದು ನಿಮಿಷ ನಿಲ್ಲಿಸಲು ಸೋಮಣ್ಣ ಚಾಲನೆ ಕೊಟ್ಟಿದ್ದಾರೆ’ ಎಂದು ತಿಳಿಸಿದರು.</p>.<p>ಶಾಸಕ ವಿಠ್ಠಲ ಹಲಗೇಕರ, ‘ಈ ಭಾಗಕ್ಕೆ ಹೆಚ್ಚಿನ ರೈಲ್ವೆ ಸೇವೆ ಒದಗಿಸಬೇಕು’ ಎಂದು ಮನವಿ ಮಾಡಿದರು.</p>.<p>ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಮಾಜಿ ಶಾಸಕ ಅರವಿಂದ ಪಾಟೀಲ, ಪ್ರಮೋದ ಕೊಚೇರಿ, ಬಸವರಾಜ ಸಾಣಿಕೊಪ್ಪ, ನೈಋತ್ಯ ರೈಲ್ವೆ ಅಧಿಕಾರಿ ಬೇಲಾ ಮೀನಾ, ಅಜಯ ಶರ್ಮಾ ಉಪಸ್ಥಿತರಿದ್ದರು.</p>.<blockquote>₹3 ಕೋಟಿ ವೆಚ್ಚದಲ್ಲಿ ಪ್ರಯಾಣಿಕರಿಗೆ ಮೂಲಸೌಕರ್ಯ | ಹುಬ್ಬಳ್ಳಿ-ದಾಂಡೇಲಿ ರೈಲ್ವೆ ಮಾರ್ಗದ ಕಾಮಗಾರಿ ಪೂರ್ಣ | ₹29 ಸಾವಿರ ಕೋಟಿ ವೆಚ್ಚದಲ್ಲಿ ರೈಲ್ವೆ ಇಲಾಖೆಯಿಂದ ವಿವಿಧ ಜನಪರ ಕಾರ್ಯ</blockquote>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಖಾನಾಪುರ:</strong> ‘ಖಾನಾಪುರ ರೈಲು ನಿಲ್ದಾಣವನ್ನು 2026ರ ಜೂನ್ ಒಳಗಾಗಿ, ಹೈಟೆಕ್ ದರ್ಜೆಗೆ ಏರಿಸಲು ಪ್ರಯತ್ನಿಸಲಾಗುವುದು’ ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಭರವಸೆ ನೀಡಿದರು.</p>.<p>ಸ್ಥಳೀಯ ರೈಲು ನಿಲ್ದಾಣದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಸೋಮವಾರ ಚಾಲನೆ ನೀಡಿ ಅವರು ಮಾತನಾಡಿದರು.</p>.<p>‘ಖಾನಾಪುರ ರೈಲು ನಿಲ್ದಾಣದಲ್ಲಿ ₹3 ಕೋಟಿ ವೆಚ್ಚದಲ್ಲಿ ಪ್ರಯಾಣಿಕರಿಗೆ ಮೂಲಸೌಕರ್ಯ ಒದಗಿಸುವ, ₹11 ಕೋಟಿ ವೆಚ್ಚದಲ್ಲಿ ನಿಲ್ದಾಣದ ಪಕ್ಕದಲ್ಲಿ ಕೆಳಸೇತುವೆ ನಿರ್ಮಿಸುವ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಲಾಗಿದೆ. ಬೆಳಗಾವಿ ಮತ್ತು ಖಾನಾಪುರ ನಿಲ್ದಾಣಗಳನ್ನು ಮಾದರಿಯಾಗಿಸುವ ನಿಟ್ಟಿನಲ್ಲಿ ರೈಲ್ವೆ ಇಲಾಖೆ ಯೋಜನೆ ರೂಪಿಸಿದೆ’ ಎಂದರು.</p>.<p>‘ಹುಬ್ಬಳ್ಳಿ-ದಾಂಡೇಲಿ ರೈಲ್ವೆ ಮಾರ್ಗದ ಕಾಮಗಾರಿ ಪೂರ್ಣಗೊಂಡಿದೆ. ಮುಂದಿನ ತಿಂಗಳು ಈ ಮಾರ್ಗದಲ್ಲಿ ರೈಲು ಸೇವೆ ಆರಂಭಗೊಳ್ಳಲಿದೆ. ಲೋಂಡಾ-ಮೀರಜ್ ಮಾರ್ಗದ 186 ಕಿ.ಮೀ. ವಿದ್ಯುದೀಕರಣ ಕಾರ್ಯವೂ ಮುಗಿದಿದೆ’ ಎಂದು ತಿಳಿಸಿದರು.</p>.<p>‘ವಾಸ್ಕೋ–ನಿಜಾಮುದ್ದೀನ್ ಗೋವಾ ಎಕ್ಸ್ಪ್ರೆಸ್, ಬೆಳಗಾವಿ-ಬೆಂಗಳೂರು ಎಕ್ಸ್ಪ್ರೆಸ್ ರೈಲುಗಳಿಗೆ ಖಾನಾಪುರ ನಿಲ್ದಾಣದಲ್ಲಿ ನಿಲುಗಡೆಗೆ ಅವಕಾಶ ಕಲ್ಪಿಸಬೇಕು. ವಾಸ್ಕೋ– ಪಂಢರಪುರ ಮಾರ್ಗದಲ್ಲಿ ನಿತ್ಯ ರೈಲು ಸೇವೆ ಆರಂಭಿಸಬೇಕು ಎಂದು ಜನಪ್ರತಿನಿಧಿಗಳು, ಸಾರ್ವಜನಿಕರು ಮನವಿ ಸಲ್ಲಿಸಿದ್ದಾರೆ. ಹಂತ-ಹಂತವಾಗಿ ಬೇಡಿಕೆ ಈಡೇರಿಸಲಾಗುವುದು’ ಎಂದು ಭರವಸೆ ಕೊಟ್ಟರು.</p>.<p>‘ರೈಲು ನಿಲ್ದಾಣಗಳು ಜನಸಾಮಾನ್ಯರ ಜೀವನಾಡಿಗಳಾಗಿವೆ. ಯುಪಿಎ ಸರ್ಕಾರದ ಅವಧಿಯಲ್ಲಿ ರೈಲು ನಿಲ್ದಾಣಗಳ ಅಭಿವೃದ್ಧಿ ನಿರ್ಲಕ್ಷಿಸಲಾಗಿತ್ತು. ಎನ್ಡಿಎ ಸರ್ಕಾರದ ಅವಧಿಯಲ್ಲಿ ನಿಲ್ದಾಣಗಳು, ಮಾರ್ಗಗಳು ಮತ್ತು ರೈಲುಗಳನ್ನು ಉನ್ನತೀಕರಿಸಲಾಗಿದೆ. ₹29 ಸಾವಿರ ಕೋಟಿ ವೆಚ್ಚದಲ್ಲಿ ರೈಲ್ವೆ ಇಲಾಖೆ ವಿವಿಧ ಜನಪರ ಕಾರ್ಯ ಕೈಗೊಂಡಿದೆ’ ಎಂದರು.</p>.<p>ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ, ‘ಹುಬ್ಬಳ್ಳಿ–ದಾದರ ಎಕ್ಸ್ಪ್ರೆಸ್ ರೈಲನ್ನು ಖಾನಾಪುರ ನಿಲ್ದಾಣದಲ್ಲಿ ಒಂದು ನಿಮಿಷ ನಿಲ್ಲಿಸಲು ಸೋಮಣ್ಣ ಚಾಲನೆ ಕೊಟ್ಟಿದ್ದಾರೆ’ ಎಂದು ತಿಳಿಸಿದರು.</p>.<p>ಶಾಸಕ ವಿಠ್ಠಲ ಹಲಗೇಕರ, ‘ಈ ಭಾಗಕ್ಕೆ ಹೆಚ್ಚಿನ ರೈಲ್ವೆ ಸೇವೆ ಒದಗಿಸಬೇಕು’ ಎಂದು ಮನವಿ ಮಾಡಿದರು.</p>.<p>ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಮಾಜಿ ಶಾಸಕ ಅರವಿಂದ ಪಾಟೀಲ, ಪ್ರಮೋದ ಕೊಚೇರಿ, ಬಸವರಾಜ ಸಾಣಿಕೊಪ್ಪ, ನೈಋತ್ಯ ರೈಲ್ವೆ ಅಧಿಕಾರಿ ಬೇಲಾ ಮೀನಾ, ಅಜಯ ಶರ್ಮಾ ಉಪಸ್ಥಿತರಿದ್ದರು.</p>.<blockquote>₹3 ಕೋಟಿ ವೆಚ್ಚದಲ್ಲಿ ಪ್ರಯಾಣಿಕರಿಗೆ ಮೂಲಸೌಕರ್ಯ | ಹುಬ್ಬಳ್ಳಿ-ದಾಂಡೇಲಿ ರೈಲ್ವೆ ಮಾರ್ಗದ ಕಾಮಗಾರಿ ಪೂರ್ಣ | ₹29 ಸಾವಿರ ಕೋಟಿ ವೆಚ್ಚದಲ್ಲಿ ರೈಲ್ವೆ ಇಲಾಖೆಯಿಂದ ವಿವಿಧ ಜನಪರ ಕಾರ್ಯ</blockquote>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>