2018ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಡಾ.ಅಂಜಲಿ ನಿಂಬಾಳ್ಕರ ಜಯ ಗಳಿಸುವ ಮೂಲಕ ತಾಲ್ಲೂಕಿನ ಪ್ರಥಮ ಶಾಸಕಿ ಎಂಬ ಹೆಗ್ಗಳಿಕೆ ಪಡೆದಿದ್ದಾರೆ. ತಾಲ್ಲೂಕಿನ ಜಾಂಬೋಟಿ ಗ್ರಾಮದ ಧನಶ್ರೀ ದೇಸಾಯಿ ಬಿಜೆಪಿ ರಾಜ್ಯ ಮಹಿಳಾ ಕಾರ್ಯಕಾರಿಣಿ ಸದಸ್ಯೆಯಾಗಿದ್ದಾರೆ. ತಹಶೀಲ್ದಾರ್ ಆಗಿ ರೇಷ್ಮಾ ತಾಳಿಕೋಟಿ, ಸ್ಥಳೀಯ ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾಯಾಧೀಶರಾಗಿ ಕೆ.ವಿದ್ಯಾ, ತಾಲ್ಲೂಕಿನ ಕಣಕುಂಬಿ ವಲಯದ ಆರ್.ಎಫ್.ಒ. ಆಗಿ ಕವಿತಾ ಈರನಟ್ಟಿ, ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಡಾ.ಪರ್ವೀನ್ ಶೇಖ್, ಹೆಸ್ಕಾಂ ಖಾನಾಪುರ ಉಪ ವಲಯದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಕಲ್ಪನಾ ತಿರವೀರ, ನಂದಗಡ ಪೊಲೀಸ್ ಠಾಣೆಯ ಪಿ.ಎಸ್.ಐ. ಸುಮನಾ ನಾಯ್ಕ್, ಪಟ್ಟಣ ಪಂಚಾಯ್ತಿ ಸಮುದಾಯ ಅಭಿವೃದ್ಧಿ ಅಧಿಕಾರಿ ರಾಜೇಶ್ವರಿ ವೇರಣೆಕರ ಸಾರ್ವಜನಿಕ ಸೇವೆಯಲ್ಲಿರುವ ಪ್ರಮುಖ ಅಧಿಕಾರಿಗಳಾಗಿದ್ದಾರೆ.