‘ಕರ್ನಾಟಕ ನೀರಾವರಿ ನಿಗಮದಿಂದ ₹ 58 ಕೋಟಿ ವೆಚ್ಚದಲ್ಲಿ ಡ್ಯಾಂ ನಿರ್ಮಿಸಲಾಗುತ್ತಿದೆ. ಈಗ ಮುಕ್ತಾಯವಾಗುತ್ತಿರುವುದರಿಂದ ₹ 14 ಕೋಟಿ ವೆಚ್ಚದಲ್ಲಿ ಎಡದಂಡೆ ಮತ್ತು ಬಲದಂಡೆ ಕಾಲುವೆ ನಿರ್ಮಾಣದ ಕಾಮಗಾರಿ ಕೈಗೊಳ್ಳಲಾಗಿದೆ. ಬಲದಂಡೆ ಕಾಲುವೆ 6 ಕಿಲೋ ಮೀಟರ್ ಉದ್ದವಿರಲಿದೆ. ಇದರಿಂದ ಕಿಣಯೇ, ರಣಕುಂಡೆ, ಸಂತಿಬಸ್ತವಾಡ, ವಾಗವಾಡೆ ಗ್ರಾಮಗಳ ಸುಮಾರು 2500 ಎಕರೆ ಪ್ರದೇಶಕ್ಕೆ ನೀರಾವರಿ ಸೌಲಭ್ಯ ದೊರೆಯಲಿದೆ’ ಎಂದು ಮಾಹಿತಿ ನೀಡಿದರು.