<p>ಚನ್ನಮ್ಮನ ಕಿತ್ತೂರು: ನಾರಿಶಕ್ತಿ ವಂದನ ಮಸೂದೆ ವಿರೋಧಿಸಿ ಕಾಂಗ್ರೆಸ್ ಹಾಗೂ ಮಿತ್ರ ಪಕ್ಷಗಳ ವಿರುದ್ಧ ಮಾಜಿ ಶಾಸಕ ಮಹಾಂತೇಶ ದೊಡ್ಡಗೌಡರ ನೇತೃತ್ವದಲ್ಲಿ ಬಿಜೆಪಿ ಸೋಮವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿತು.</p>.<p>ಬಳಿಕ ಮಾತನಾಡಿದ ದೊಡ್ಡಗೌಡರ, ಸಂಸತ್ತಿನಲ್ಲಿ ಮಂಡಿಸಿದ ಕಾನೂನು ಬಿದ್ದ ನಂತರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿಜಯೋತ್ಸವ ಆಚರಿಸಿದರು. ಕಿತ್ತೂರು ಚನ್ನಮ್ಮ, ಬೆಳವಡಿ ಮಲ್ಲಮ್ಮ, ಝಾನ್ಸಿ ಲಕ್ಷ್ಮಿಬಾಯಿ, ಒನಕೆ ಒಬವ್ವ ಅಂಥ ಧೀರ ಮಹಿಳೆಯರಿಗೆ ಈ ಮೂಲಕ ಅವಮಾನ ಮಾಡಲಾಯಿತು. ದೇಶದಲ್ಲಿಯ ಎಲ್ಲ ಮಹಿಳೆಯರ ಮನಸಿಗೆ ಇದರಿಂದ ನೋವಾಗಿದೆ ಎಂದು ಹೇಳಿದರು.</p>.<p>ಮುಖಂಡರಾದ ಲಕ್ಷ್ಮಿ ಇನಾಮದಾರ, ಶ್ರೀಕರ ಕುಲಕರ್ಣಿ, ರಾಧಾಶ್ಯಾಮ ಕಾದ್ರೊಳ್ಳಿ, ಸಂದೀಪ ದೇಶಪಾಂಡೆ ಮಾತನಾಡಿದರು.</p>.<p>ರಾಷ್ಟ್ರೀಯ ಹೆದ್ದಾರಿ ಬಳಿಯ ಚನ್ನಮ್ಮ ವರ್ತುಲದಿಂದ ಹೊರಟ ಮೆರವಣಿಗೆ ಅರಳಿಕಟ್ಟಿ ವೃತ್ತಕ್ಕೆ ಬಂದು ಮುಕ್ತಾಯಗೊಂಡಿತು.</p>.<p>ಉಳವಪ್ಪ ಉಳ್ಳಾಗಡ್ಡಿ, ಬಸನಗೌಡ ಸಿದ್ರಾಮನಿ, ಕಿರಣ ಪಾಟೀಲ, ಬಸವರಾಜ ಮಾತನವರ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260428-21-1264864534</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚನ್ನಮ್ಮನ ಕಿತ್ತೂರು: ನಾರಿಶಕ್ತಿ ವಂದನ ಮಸೂದೆ ವಿರೋಧಿಸಿ ಕಾಂಗ್ರೆಸ್ ಹಾಗೂ ಮಿತ್ರ ಪಕ್ಷಗಳ ವಿರುದ್ಧ ಮಾಜಿ ಶಾಸಕ ಮಹಾಂತೇಶ ದೊಡ್ಡಗೌಡರ ನೇತೃತ್ವದಲ್ಲಿ ಬಿಜೆಪಿ ಸೋಮವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿತು.</p>.<p>ಬಳಿಕ ಮಾತನಾಡಿದ ದೊಡ್ಡಗೌಡರ, ಸಂಸತ್ತಿನಲ್ಲಿ ಮಂಡಿಸಿದ ಕಾನೂನು ಬಿದ್ದ ನಂತರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿಜಯೋತ್ಸವ ಆಚರಿಸಿದರು. ಕಿತ್ತೂರು ಚನ್ನಮ್ಮ, ಬೆಳವಡಿ ಮಲ್ಲಮ್ಮ, ಝಾನ್ಸಿ ಲಕ್ಷ್ಮಿಬಾಯಿ, ಒನಕೆ ಒಬವ್ವ ಅಂಥ ಧೀರ ಮಹಿಳೆಯರಿಗೆ ಈ ಮೂಲಕ ಅವಮಾನ ಮಾಡಲಾಯಿತು. ದೇಶದಲ್ಲಿಯ ಎಲ್ಲ ಮಹಿಳೆಯರ ಮನಸಿಗೆ ಇದರಿಂದ ನೋವಾಗಿದೆ ಎಂದು ಹೇಳಿದರು.</p>.<p>ಮುಖಂಡರಾದ ಲಕ್ಷ್ಮಿ ಇನಾಮದಾರ, ಶ್ರೀಕರ ಕುಲಕರ್ಣಿ, ರಾಧಾಶ್ಯಾಮ ಕಾದ್ರೊಳ್ಳಿ, ಸಂದೀಪ ದೇಶಪಾಂಡೆ ಮಾತನಾಡಿದರು.</p>.<p>ರಾಷ್ಟ್ರೀಯ ಹೆದ್ದಾರಿ ಬಳಿಯ ಚನ್ನಮ್ಮ ವರ್ತುಲದಿಂದ ಹೊರಟ ಮೆರವಣಿಗೆ ಅರಳಿಕಟ್ಟಿ ವೃತ್ತಕ್ಕೆ ಬಂದು ಮುಕ್ತಾಯಗೊಂಡಿತು.</p>.<p>ಉಳವಪ್ಪ ಉಳ್ಳಾಗಡ್ಡಿ, ಬಸನಗೌಡ ಸಿದ್ರಾಮನಿ, ಕಿರಣ ಪಾಟೀಲ, ಬಸವರಾಜ ಮಾತನವರ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260428-21-1264864534</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>