ನಗರದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕೋಟೆಯ ಅಭಿವೃದ್ಧಿ, ಕೆರೆ ಅಭಿವೃದ್ಧಿ, ಸಂಗ್ರಹಾಲಯ ಅಭಿವೃದ್ಧಿ, ಉದ್ಯಾನ ಅಭಿವೃದ್ಧಿ ಸೇರಿದಂತೆ 33 ಕಾಮಗಾರಿಗಳನ್ನು ಒಳಗೊಂಡಂತೆ ಕೋಟೆ ಅಭಿವೃದ್ಧಿಗಾಗಿ ಕ್ರಿಯಾ ಯೋಜನೆಗೆ ಅನುಮೋದನೆ ನೀಡಲಾಗಿತ್ತು. ಹಣಕಾಸು ಇಲಾಖೆಯೂ ಒಪ್ಪಿಗೆ ನೀಡಿತ್ತು. ಹಣ ಬಿಡುಗಡೆ ಮಾಡುವುದು ಮಾತ್ರ ಬಾಕಿ ಉಳಿದಿತ್ತು. ಆಗ ಸರ್ಕಾರ ಉರುಳಿ, ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದೆ. ಹಣ ಬಿಡುಗಡೆ ಮಾಡುವ ಕೆಲಸವನ್ನು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಮಾಡಿಸಬೇಕಾಗಿದೆ’ ಎಂದರು.