<p><strong>ಚನ್ನಮ್ಮನ ಕಿತ್ತೂರು:</strong> ದರೋಡೆ, ಅತ್ಯಾಚಾರ, ಸರಗಳವು ಸೇರಿ ಹಲವು ಪ್ರಕರಣಗಳಲ್ಲಿ ಬೇಕಾಗಿದ್ದ ಕುಖ್ಯಾತ ದರೋಡೆಕೋರ ರಮೇಶ ಉದ್ದಪ್ಪ ಕಿಲಾರಿಗೆ ಈಚೆಗೆ ಗುಂಡೇಟು ಹೊಡೆದು ಬಂಧಿಸಿದ್ದ ಕಿತ್ತೂರು ಪೊಲೀಸರು, ಆತನ ಜೊತೆಗಿದ್ದ ಮತ್ತೊಬ್ಬನನ್ನು ವಶಕ್ಕೆ ಪಡೆದಿದ್ದಾರೆ.</p>.<p>ಗೋಕಾಕ ತಾಲ್ಲೂಕಿನ ಉರಬಿನಹಟ್ಟಿಯ ಬಾಳನಗೌಡ ಅಲಿಯಾಸ್ ಬಾಳೇಶ ಬಸವರಾಜ ಮಂಗೊಜಿ (19) ಬಂಧಿತ.</p>.<p>ಮೂಡಲಗಿ ಮತ್ತು ಚಿಕ್ಕೋಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಾಡಿದ್ದ ಕಳವು ಪ್ರಕರಣವನ್ನು ಭೇದಿಸಿರುವ ಪೊಲೀಸರು, ಬಂಧಿತರಿಂದ 43 ಗ್ರಾಂ ಚಿನ್ನಾಭರಣ ಮತ್ತು ಒಂದು ಪಲ್ಸರ್ ಬೈಕ್ ವಶಪಡಿಸಿಕೊಂಡಿದ್ದಾರೆ.</p>.<p>‘ಬೈಕ್ ಮೇಲೆ ಬಂದಿದ್ದ ಇಬ್ಬರು ಎಂ.ಕೆ. ಹುಬ್ಬಳ್ಳಿಯ ಪೊಲೀಸ್ ಉಪಠಾಣೆ ಬಳಿ ಇರುವ ಹನುಮಂತ ದೇವರ ಗುಡಿಯ ಸಮೀಪ ಮಹಿಳೆಯ ಮಾಂಗಲ್ಯ ಸರ ಕಿತ್ತುಕೊಂಡು ಪರಾರಿಯಾಗಿದ್ದರು’ ಎಂದು ಡಿವೈಎಸ್ ಪಿ. ವೀರಯ್ಯ ಹಿರೇಮಠ ಶುಕ್ರವಾರ ತಿಳಿಸಿದರು.</p>.<p>‘ಅದಕ್ಕೂ ಮುನ್ನ ಇಂಚಲ ಗ್ರಾಮದ ರಸ್ತೆಯಲ್ಲಿ ಹೋಗುತ್ತಿದ್ದ ಮಹಿಳೆಯ ಸರ ಕಿತ್ತುಕೊಳ್ಳಲು ಯತ್ನಿಸಿದ್ದರು. ಆ ಮಹಿಳೆ ಹಿಂದೆ ಬಾಗಿದ್ದರಿಂದ ಸಾಧ್ಯವಾಗಿರಲಿಲ್ಲ’ ಎಂದು ತಿಳಿಸಿದರು.</p>.<p>₹50 ಲಕ್ಷ ಮೌಲ್ಯದ ಚಿನ್ನಾಭರಣ: ‘ಅಂದಾಜು 6 ತಿಂಗಳ ಅವಧಿಯಲ್ಲಿ ವಿವಿಧೆಡೆ ನಡೆದ ಮನೆಗಳ್ಳತನ, ಸರಗಳ್ಳತನ ಪ್ರಕರಣಗಳಲ್ಲಿ ₹50 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ಕಿತ್ತೂರು ಪೊಲೀಸರು ವಶಪಡಿಸಿಕೊಂಡಿದ್ದಾರೆ. ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ’ ಎಂದು ಪೊಲೀಸ್ ಮೂಲ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚನ್ನಮ್ಮನ ಕಿತ್ತೂರು:</strong> ದರೋಡೆ, ಅತ್ಯಾಚಾರ, ಸರಗಳವು ಸೇರಿ ಹಲವು ಪ್ರಕರಣಗಳಲ್ಲಿ ಬೇಕಾಗಿದ್ದ ಕುಖ್ಯಾತ ದರೋಡೆಕೋರ ರಮೇಶ ಉದ್ದಪ್ಪ ಕಿಲಾರಿಗೆ ಈಚೆಗೆ ಗುಂಡೇಟು ಹೊಡೆದು ಬಂಧಿಸಿದ್ದ ಕಿತ್ತೂರು ಪೊಲೀಸರು, ಆತನ ಜೊತೆಗಿದ್ದ ಮತ್ತೊಬ್ಬನನ್ನು ವಶಕ್ಕೆ ಪಡೆದಿದ್ದಾರೆ.</p>.<p>ಗೋಕಾಕ ತಾಲ್ಲೂಕಿನ ಉರಬಿನಹಟ್ಟಿಯ ಬಾಳನಗೌಡ ಅಲಿಯಾಸ್ ಬಾಳೇಶ ಬಸವರಾಜ ಮಂಗೊಜಿ (19) ಬಂಧಿತ.</p>.<p>ಮೂಡಲಗಿ ಮತ್ತು ಚಿಕ್ಕೋಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಾಡಿದ್ದ ಕಳವು ಪ್ರಕರಣವನ್ನು ಭೇದಿಸಿರುವ ಪೊಲೀಸರು, ಬಂಧಿತರಿಂದ 43 ಗ್ರಾಂ ಚಿನ್ನಾಭರಣ ಮತ್ತು ಒಂದು ಪಲ್ಸರ್ ಬೈಕ್ ವಶಪಡಿಸಿಕೊಂಡಿದ್ದಾರೆ.</p>.<p>‘ಬೈಕ್ ಮೇಲೆ ಬಂದಿದ್ದ ಇಬ್ಬರು ಎಂ.ಕೆ. ಹುಬ್ಬಳ್ಳಿಯ ಪೊಲೀಸ್ ಉಪಠಾಣೆ ಬಳಿ ಇರುವ ಹನುಮಂತ ದೇವರ ಗುಡಿಯ ಸಮೀಪ ಮಹಿಳೆಯ ಮಾಂಗಲ್ಯ ಸರ ಕಿತ್ತುಕೊಂಡು ಪರಾರಿಯಾಗಿದ್ದರು’ ಎಂದು ಡಿವೈಎಸ್ ಪಿ. ವೀರಯ್ಯ ಹಿರೇಮಠ ಶುಕ್ರವಾರ ತಿಳಿಸಿದರು.</p>.<p>‘ಅದಕ್ಕೂ ಮುನ್ನ ಇಂಚಲ ಗ್ರಾಮದ ರಸ್ತೆಯಲ್ಲಿ ಹೋಗುತ್ತಿದ್ದ ಮಹಿಳೆಯ ಸರ ಕಿತ್ತುಕೊಳ್ಳಲು ಯತ್ನಿಸಿದ್ದರು. ಆ ಮಹಿಳೆ ಹಿಂದೆ ಬಾಗಿದ್ದರಿಂದ ಸಾಧ್ಯವಾಗಿರಲಿಲ್ಲ’ ಎಂದು ತಿಳಿಸಿದರು.</p>.<p>₹50 ಲಕ್ಷ ಮೌಲ್ಯದ ಚಿನ್ನಾಭರಣ: ‘ಅಂದಾಜು 6 ತಿಂಗಳ ಅವಧಿಯಲ್ಲಿ ವಿವಿಧೆಡೆ ನಡೆದ ಮನೆಗಳ್ಳತನ, ಸರಗಳ್ಳತನ ಪ್ರಕರಣಗಳಲ್ಲಿ ₹50 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ಕಿತ್ತೂರು ಪೊಲೀಸರು ವಶಪಡಿಸಿಕೊಂಡಿದ್ದಾರೆ. ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ’ ಎಂದು ಪೊಲೀಸ್ ಮೂಲ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>