<p><strong>ಚನ್ನಮ್ಮನ ಕಿತ್ತೂರು(ಬೆಳಗಾವಿ ಜಿಲ್ಲೆ):</strong> ‘ಇಲ್ಲಿನ ಕೋಟೆ ಆವರಣದಲ್ಲಿ ಅ.23ರಿಂದ 25ರವರೆಗೆ ನಡೆಯಲಿರುವ ಕಿತ್ತೂರು ಉತ್ಸವದ ಅಂಗವಾಗಿ ಹೊರಡುವ ವೀರಜ್ಯೋತಿ ಯಾತ್ರೆಗೆ ಮುಂದಿನ ವಾರ ಬೆಂಗಳೂರಿನ ವಿಧಾನಸೌಧದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡುವರು’ ಎಂದು ಶಾಸಕ ಬಾಬಾಸಾಹೇಬ ಪಾಟೀಲ ತಿಳಿಸಿದರು.</p><p>‘ಅ.13 ಅಥವಾ 14ರಂದು ಮುಖ್ಯಮಂತ್ರಿ ಯಾತ್ರೆಗೆ ಚಾಲನೆ ನೀಡುವರು. ಅಲ್ಲಿಂದ ವಿವಿಧ ಜಿಲ್ಲೆಗಳಿಗೆ ಯಾತ್ರೆ ಸಾಗಿ, ಕಿತ್ತೂರು ಕರ್ನಾಟಕದ ವ್ಯಾಪ್ತಿಯಲ್ಲಿ ಸಂಚರಿಸಿ ಅ.22ರಂದು ಸಂಜೆ ಕಿತ್ತೂರಿಗೆ ಆಗಮಿಸಲಿದೆ’ ಎಂದು ‘ಪ್ರಜಾವಾಣಿ’ಗೆ ತಿಳಿಸಿದರು.</p><p><strong>₹1.2 ಕೋಟಿ ಬಾಕಿ</strong></p><p>‘2024-25ನೇ ಸಾಲಿನಲ್ಲಿ ಗುತ್ತಿಗೆದಾರರು ಸೇರಿ ವಿವಿಧ ಇಲಾಖೆಗಳು ವ್ಯಯಿಸಿದ್ದ ₹1.2 ಕೋಟಿಯನ್ನು ಉತ್ಸವ ಸಮಿತಿ ಬಾಕಿ ಉಳಿಸಿಕೊಂಡಿದೆ’ ಎಂದು ಮೂಲಗಳು ತಿಳಿಸಿವೆ.</p><p>‘ಈ ಬಾರಿ ಉತ್ಸವ ಆಚರಣೆಗೆ ₹5 ಕೋಟಿ ಅನುದಾನ ನೀಡುವಂತೆ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ. ಅನುದಾನ ಬಿಡುಗಡೆಯಾದ ತಕ್ಷಣ ಹಿಂದಿನ ಉತ್ಸವದ ಬಾಕಿ ಮೊತ್ತ ಪಾವತಿಸುತ್ತೇವೆ. ಉಳಿದ ದುಡ್ಡಿನಲ್ಲಿ ಅದ್ದೂರಿಯಾಗಿ ಉತ್ಸವ ಆಚರಿಸುತ್ತೇವೆ’ ಎಂದು ಬಾಬಾಸಾಹೇಬ ಪಾಟೀಲ ಭರವಸೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚನ್ನಮ್ಮನ ಕಿತ್ತೂರು(ಬೆಳಗಾವಿ ಜಿಲ್ಲೆ):</strong> ‘ಇಲ್ಲಿನ ಕೋಟೆ ಆವರಣದಲ್ಲಿ ಅ.23ರಿಂದ 25ರವರೆಗೆ ನಡೆಯಲಿರುವ ಕಿತ್ತೂರು ಉತ್ಸವದ ಅಂಗವಾಗಿ ಹೊರಡುವ ವೀರಜ್ಯೋತಿ ಯಾತ್ರೆಗೆ ಮುಂದಿನ ವಾರ ಬೆಂಗಳೂರಿನ ವಿಧಾನಸೌಧದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡುವರು’ ಎಂದು ಶಾಸಕ ಬಾಬಾಸಾಹೇಬ ಪಾಟೀಲ ತಿಳಿಸಿದರು.</p><p>‘ಅ.13 ಅಥವಾ 14ರಂದು ಮುಖ್ಯಮಂತ್ರಿ ಯಾತ್ರೆಗೆ ಚಾಲನೆ ನೀಡುವರು. ಅಲ್ಲಿಂದ ವಿವಿಧ ಜಿಲ್ಲೆಗಳಿಗೆ ಯಾತ್ರೆ ಸಾಗಿ, ಕಿತ್ತೂರು ಕರ್ನಾಟಕದ ವ್ಯಾಪ್ತಿಯಲ್ಲಿ ಸಂಚರಿಸಿ ಅ.22ರಂದು ಸಂಜೆ ಕಿತ್ತೂರಿಗೆ ಆಗಮಿಸಲಿದೆ’ ಎಂದು ‘ಪ್ರಜಾವಾಣಿ’ಗೆ ತಿಳಿಸಿದರು.</p><p><strong>₹1.2 ಕೋಟಿ ಬಾಕಿ</strong></p><p>‘2024-25ನೇ ಸಾಲಿನಲ್ಲಿ ಗುತ್ತಿಗೆದಾರರು ಸೇರಿ ವಿವಿಧ ಇಲಾಖೆಗಳು ವ್ಯಯಿಸಿದ್ದ ₹1.2 ಕೋಟಿಯನ್ನು ಉತ್ಸವ ಸಮಿತಿ ಬಾಕಿ ಉಳಿಸಿಕೊಂಡಿದೆ’ ಎಂದು ಮೂಲಗಳು ತಿಳಿಸಿವೆ.</p><p>‘ಈ ಬಾರಿ ಉತ್ಸವ ಆಚರಣೆಗೆ ₹5 ಕೋಟಿ ಅನುದಾನ ನೀಡುವಂತೆ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ. ಅನುದಾನ ಬಿಡುಗಡೆಯಾದ ತಕ್ಷಣ ಹಿಂದಿನ ಉತ್ಸವದ ಬಾಕಿ ಮೊತ್ತ ಪಾವತಿಸುತ್ತೇವೆ. ಉಳಿದ ದುಡ್ಡಿನಲ್ಲಿ ಅದ್ದೂರಿಯಾಗಿ ಉತ್ಸವ ಆಚರಿಸುತ್ತೇವೆ’ ಎಂದು ಬಾಬಾಸಾಹೇಬ ಪಾಟೀಲ ಭರವಸೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>