<p><strong>ಬೆಳಗಾವಿ</strong>: ತಾಲ್ಲೂಕಿನ ‘ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯ’ಕ್ಕೆ ಅರಣ್ಯ ಸಚಿವ ಈಶ್ವರ ಖಂಡ್ರೆ ಸೋಮವಾರ ಭೇಟಿ ನೀಡಿ, ಕೃಷ್ಣಮೃಗ ವಿಭಾಗ ಪರಿಶೀಲಿಸಿದರು.</p>.ಬೆಳಗಾವಿ | ಮತ್ತೊಂದು ಕೃಷ್ಣಮೃಗ ಸಾವು; ಸಾವಿನ ಸಂಖ್ಯೆ 31ಕ್ಕೆ ಏರಿಕೆ.<p>31 ಕೃಷ್ಣಮೃಗ ಸತ್ತಿರುವ ಪ್ರಕರಣದ ಮಾಹಿತಿ ಪಡೆದರು. ಜತೆಗೆ, ಉಳಿದಿರುವ ಏಳು ಪ್ರಾಣಿಗಳ ಆರೈಕೆ, ಅವುಗಳ ಆರೋಗ್ಯ ಸ್ಥಿತಿ, ಆಹಾರ ವ್ಯವಸ್ಥೆ, ಸಂರಕ್ಷಣೆ ಕುರಿತು ವಿವರ ಸಂಗ್ರಹಿಸಿದರು.</p>.ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯಕ್ಕೆ ಬಂದ ಗಂಭೀರ ವದನೆ ‘ನಿತ್ಯ’.<p>‘ಮುಂದೆ ಇಂಥ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮ ವಹಿಸಬೇಕು. ಬೇರೆ ಪ್ರಾಣಿಗಳ ಆರೋಗ್ಯದ ಮೇಲೂ ನಿಗಾ ಇರಿಸಬೇಕು’ ಎಂದು ಈಶ್ವರ ಖಂಡ್ರೆ ತಿಳಿಸಿದರು.</p>.<p>ಅರಣ್ಯ ಪಡೆ ಮುಖ್ಯಸ್ಥೆ ಮೀನಾಕ್ಷಿ ನೇಗಿ, ವನ್ಯಜೀವಿ ವಿಭಾಗದ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಪಿ.ಸಿ. ರೇ, ಕರ್ನಾಟಕ ಮೃಗಾಲಯ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸುನೀಲ ಪನ್ವಾರ್ ಇತರ ಅಧಿಕಾರಿಗಳಿದ್ದರು.</p>.<p>ನವೆಂಬರ್ನಲ್ಲಿ ಈ ಕಿರು ಮೃಗಾಲಯದಲ್ಲಿ ಗಳಲೆ ರೋಗದಿಂದ (ಇಂಡೀಡ್ ಹೆಮರೈಜಿಕ್ ಸೆಪ್ಟೀಸಿಮಿಯಾ) 31 ಕೃಷ್ಣಮೃಗಗಳು ಮೃತಪಟ್ಟಿದ್ದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ</strong>: ತಾಲ್ಲೂಕಿನ ‘ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯ’ಕ್ಕೆ ಅರಣ್ಯ ಸಚಿವ ಈಶ್ವರ ಖಂಡ್ರೆ ಸೋಮವಾರ ಭೇಟಿ ನೀಡಿ, ಕೃಷ್ಣಮೃಗ ವಿಭಾಗ ಪರಿಶೀಲಿಸಿದರು.</p>.ಬೆಳಗಾವಿ | ಮತ್ತೊಂದು ಕೃಷ್ಣಮೃಗ ಸಾವು; ಸಾವಿನ ಸಂಖ್ಯೆ 31ಕ್ಕೆ ಏರಿಕೆ.<p>31 ಕೃಷ್ಣಮೃಗ ಸತ್ತಿರುವ ಪ್ರಕರಣದ ಮಾಹಿತಿ ಪಡೆದರು. ಜತೆಗೆ, ಉಳಿದಿರುವ ಏಳು ಪ್ರಾಣಿಗಳ ಆರೈಕೆ, ಅವುಗಳ ಆರೋಗ್ಯ ಸ್ಥಿತಿ, ಆಹಾರ ವ್ಯವಸ್ಥೆ, ಸಂರಕ್ಷಣೆ ಕುರಿತು ವಿವರ ಸಂಗ್ರಹಿಸಿದರು.</p>.ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯಕ್ಕೆ ಬಂದ ಗಂಭೀರ ವದನೆ ‘ನಿತ್ಯ’.<p>‘ಮುಂದೆ ಇಂಥ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮ ವಹಿಸಬೇಕು. ಬೇರೆ ಪ್ರಾಣಿಗಳ ಆರೋಗ್ಯದ ಮೇಲೂ ನಿಗಾ ಇರಿಸಬೇಕು’ ಎಂದು ಈಶ್ವರ ಖಂಡ್ರೆ ತಿಳಿಸಿದರು.</p>.<p>ಅರಣ್ಯ ಪಡೆ ಮುಖ್ಯಸ್ಥೆ ಮೀನಾಕ್ಷಿ ನೇಗಿ, ವನ್ಯಜೀವಿ ವಿಭಾಗದ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಪಿ.ಸಿ. ರೇ, ಕರ್ನಾಟಕ ಮೃಗಾಲಯ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸುನೀಲ ಪನ್ವಾರ್ ಇತರ ಅಧಿಕಾರಿಗಳಿದ್ದರು.</p>.<p>ನವೆಂಬರ್ನಲ್ಲಿ ಈ ಕಿರು ಮೃಗಾಲಯದಲ್ಲಿ ಗಳಲೆ ರೋಗದಿಂದ (ಇಂಡೀಡ್ ಹೆಮರೈಜಿಕ್ ಸೆಪ್ಟೀಸಿಮಿಯಾ) 31 ಕೃಷ್ಣಮೃಗಗಳು ಮೃತಪಟ್ಟಿದ್ದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>